<p><strong>ವಿರಾಜಪೇಟೆ</strong>: ಎರಡು ತಲೆ ಹಾವನ್ನು ಅಕ್ರಮವಾಗಿ ಮಾರಲು ಯತ್ನಿಸುತಿದ್ದ ನಾಲ್ವರನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಗುರುವಾರ ಬಂಧಿಸಿದ್ದಾರೆ.</p>.<p>ದಾವಣಗೆರೆ ಜಿಲ್ಲೆಯ ಹದಡಿ ಗ್ರಾಮದ ಎಸ್.ಎಚ್. ಶಿವಕುಮಾರ್, ಗದಗ ಜಿಲ್ಲೆಯ ಶಿರಹಟ್ಟಿಯ ಮಲ್ಲಿಕ್ ಸಾಬ್ಹೊಂಟಿ, ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಮಹಮ್ಮದ್ ಖಾಸಿಂ ಮಕಂದರ್ ಹಾಗೂ ಮಜಾರ್ ಸತ್ತರ್ ಶೇಖ್ ಬಂಧಿತ<br />ಆರೋಪಿಗಳು.</p>.<p>ಎರಡು ತಲೆಯ ಹಾವನ್ನುದಾವಣಗೆರೆಯಿಂದ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳ ಕಾರ್ಯಚರಣೆ ನಡೆಸಿದೆ.</p>.<p>ಗೋಣಿಕೊಪ್ಪಲು ಸಮೀಪದ ದೇವರಪುರ ಗ್ರಾಮ ವ್ಯಾಪ್ತಿಯಲ್ಲಿ ಜು.1 ರಂದು ಕಾರನ್ನು ತಡೆದು ತಪಾಸಣೆ ನಡೆಸಿ ಎರಡು ತಲೆಯ ಹಾವು ಹಾಗೂ ಕಾರನ್ನು ವಶಕ್ಕೆ ಪಡೆದ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದರು.</p>.<p>ಬಂಧಿತ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧೀಕ್ಷಕ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ತಾಲ್ಲೂಕು ಘಟಕದ ಉಪನಿರೀಕ್ಷಕಿ ವೀಣಾ ನಾಯಕ್, ಸಿಬ್ಬಂದಿಗಳಾದ ಕೆ.ಬಿ. ಸೋಮಣ್ಣ, ಟಿ.ಪಿ.ಮಂಜುನಾಥ್, ಪಿ.ಬಿ.ಮೊಣ್ಣಪ್ಪ, ಎಂ.ಬಿ.ಗಣೇಶ್, ಎಸ್.ಎಂ. ಯೋಗೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಎರಡು ತಲೆ ಹಾವನ್ನು ಅಕ್ರಮವಾಗಿ ಮಾರಲು ಯತ್ನಿಸುತಿದ್ದ ನಾಲ್ವರನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಗುರುವಾರ ಬಂಧಿಸಿದ್ದಾರೆ.</p>.<p>ದಾವಣಗೆರೆ ಜಿಲ್ಲೆಯ ಹದಡಿ ಗ್ರಾಮದ ಎಸ್.ಎಚ್. ಶಿವಕುಮಾರ್, ಗದಗ ಜಿಲ್ಲೆಯ ಶಿರಹಟ್ಟಿಯ ಮಲ್ಲಿಕ್ ಸಾಬ್ಹೊಂಟಿ, ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಮಹಮ್ಮದ್ ಖಾಸಿಂ ಮಕಂದರ್ ಹಾಗೂ ಮಜಾರ್ ಸತ್ತರ್ ಶೇಖ್ ಬಂಧಿತ<br />ಆರೋಪಿಗಳು.</p>.<p>ಎರಡು ತಲೆಯ ಹಾವನ್ನುದಾವಣಗೆರೆಯಿಂದ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳ ಕಾರ್ಯಚರಣೆ ನಡೆಸಿದೆ.</p>.<p>ಗೋಣಿಕೊಪ್ಪಲು ಸಮೀಪದ ದೇವರಪುರ ಗ್ರಾಮ ವ್ಯಾಪ್ತಿಯಲ್ಲಿ ಜು.1 ರಂದು ಕಾರನ್ನು ತಡೆದು ತಪಾಸಣೆ ನಡೆಸಿ ಎರಡು ತಲೆಯ ಹಾವು ಹಾಗೂ ಕಾರನ್ನು ವಶಕ್ಕೆ ಪಡೆದ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದರು.</p>.<p>ಬಂಧಿತ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧೀಕ್ಷಕ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ತಾಲ್ಲೂಕು ಘಟಕದ ಉಪನಿರೀಕ್ಷಕಿ ವೀಣಾ ನಾಯಕ್, ಸಿಬ್ಬಂದಿಗಳಾದ ಕೆ.ಬಿ. ಸೋಮಣ್ಣ, ಟಿ.ಪಿ.ಮಂಜುನಾಥ್, ಪಿ.ಬಿ.ಮೊಣ್ಣಪ್ಪ, ಎಂ.ಬಿ.ಗಣೇಶ್, ಎಸ್.ಎಂ. ಯೋಗೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>