ಮಡಿಕೇರಿ: ಜಿಲ್ಲಾಡಳಿತ ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ ಧ್ವಜಾರೋಹಣ ನೆರವೇರಿಸಿದರು.
ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಪ್ರೌಢಶಾಲೆಗಳಿಗೆ 2,500 ಶಿಕ್ಷಕರು, ಪಿಯು ಕಾಲೇಜುಗಳಿಗೆ 789 ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದರು.