<p><strong>ಮಡಿಕೇರಿ</strong>: ಒಳ ಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ವರದಿಯನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ (ಬಲಗೈ) ಸಂಬಂಧಿತ ಜಾತಿಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಸದಸ್ಯರು ಇಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಒಕ್ಕೂಟದ ಜಿಲ್ಲಾ ಸಂಚಾಲಕ ರಾಜಪ್ಪ, ‘ಒಳ ಮೀಸಲಾತಿ ಬೇಕು ನಿಜ. ಆದರೆ, ಈಗ ಈ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ವರದಿಯನ್ನು ಜಾರಿ ಮಾಡುವುದಕ್ಕೂ ಮುನ್ನ ಪುನರ್ ಪರಿಶೀಲನೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಈ ವರದಿಯಲ್ಲಿರುವ ತಾರತಮ್ಯದ ಅಂಶಗಳನ್ನು ಹೋಗಲಾಡಿಸಿ, ಸಮಾನ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ವರದಿಯ ಪುನರ್ ಪರಿಶೀಲನೆಗೆ ಉಪಸಮಿತಿ ರಚಿಸಿ ಆಗಿರುವ ಲೋಪದೋಷವನ್ನು ಸರಿಪಡಿಸಿ ನ್ಯಾಯೋಚಿತವಾಗಿ ಜಾರಿ ಮಾಡಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಬಳಿಕ ಅವರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘಟನೆಯ ಮುಖಂಡರಾದ ರಾಜಶೇಖರ್, ದೇವರಾಜ, ಪೊನ್ನಪ್ಪ, ಗೋವಿಂದರಾಜ, ಚನ್ನಕೇಶವ, ರಾಜು, ಡೀಲಕ್ಷ, ವೀರಭದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಒಳ ಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ವರದಿಯನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ (ಬಲಗೈ) ಸಂಬಂಧಿತ ಜಾತಿಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಸದಸ್ಯರು ಇಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಒಕ್ಕೂಟದ ಜಿಲ್ಲಾ ಸಂಚಾಲಕ ರಾಜಪ್ಪ, ‘ಒಳ ಮೀಸಲಾತಿ ಬೇಕು ನಿಜ. ಆದರೆ, ಈಗ ಈ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ವರದಿಯನ್ನು ಜಾರಿ ಮಾಡುವುದಕ್ಕೂ ಮುನ್ನ ಪುನರ್ ಪರಿಶೀಲನೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಈ ವರದಿಯಲ್ಲಿರುವ ತಾರತಮ್ಯದ ಅಂಶಗಳನ್ನು ಹೋಗಲಾಡಿಸಿ, ಸಮಾನ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ವರದಿಯ ಪುನರ್ ಪರಿಶೀಲನೆಗೆ ಉಪಸಮಿತಿ ರಚಿಸಿ ಆಗಿರುವ ಲೋಪದೋಷವನ್ನು ಸರಿಪಡಿಸಿ ನ್ಯಾಯೋಚಿತವಾಗಿ ಜಾರಿ ಮಾಡಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಬಳಿಕ ಅವರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘಟನೆಯ ಮುಖಂಡರಾದ ರಾಜಶೇಖರ್, ದೇವರಾಜ, ಪೊನ್ನಪ್ಪ, ಗೋವಿಂದರಾಜ, ಚನ್ನಕೇಶವ, ರಾಜು, ಡೀಲಕ್ಷ, ವೀರಭದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>