<p>ಮಡಿಕೇರಿ: ‘ನಮ್ಮ ಅಳಲು ಕೇಳಿ’ ಎಂದು ಮಾಜಿ ಸೈನಿಕರು ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.</p>.<p>ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕ ಹಾಗೂ ಕೊಡಗು (ಕೂರ್ಗ್) ಎಕ್ಸ್ಸರ್ವೀಸ್ ಪರ್ಸನಲ್ ಅಸೋಸಿಯೇಷನ್ ಇಲ್ಲಿ ಬುಧವಾರ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿ, ಮಾಜಿ ಸೈನಿಕರ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಮಸ್ಯೆಗಳ ನಿವಾರಣೆಗೆ ಕೂಡಲೇ ಗಮನಹರಿಸಬೇಕು ಎಂದು ಕೋರಿದರು.</p>.<p>ಕೊಡಗು (ಕೂರ್ಗ್) ಎಕ್ಸ್ಸರ್ವೀಸ್ ಪರ್ಸನಲ್ ಅಸೋಸಿಯೇಷನ್ನಮೇಜರ್ಜನರಲ್ಬಿ.ಎ. ಕಾರ್ಯಪ್ಪಮಾತನಾಡಿ, ‘10ರಿಂದ 15 ಸಾವಿರ ಮಾಜಿ ಸೈನಿಕರು 15ರಿಂದ 40 ವರ್ಷದವರೆಗೆ ಸೇವೆ ಸಲ್ಲಿಸಿ ವಾಪಸ್ ಬಂದು ಇಲ್ಲಿಯೇ ನೆಲೆಸಿದ್ದಾರೆ. ಇವರೆಲ್ಲ ಹಲವು ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಿದ್ದಾರೆ’ ಎಂದು ಅಳಲು ತೋಡಿಕೊಂಡರು.</p>.<p>ಮಾಜಿ ಸೈನಿಕರಿಗೆ ಸರ್ಕಾರಿ ಜಾಗ ಮಂಜೂರು ಮಾಡುವ ವಿಷಯದಲ್ಲಿ ರಾಜ್ಯಸರ್ಕಾರ ಹಾಗೂ ಹೈಕೋರ್ಟ್ನ ಹಲವು ಆದೇಶಗಳಿದ್ದರೂ 500 ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿದಿವೆ. ಕೂಡಲೇ, ಕಂದಾಯ ಇಲಾಖೆ ಈ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಮನವಿ ಮಾಡಿದರು.</p>.<p>ನಿವೇಶನ ಇಲ್ಲದ ಮಾಜಿ ಸೈನಿಕರು ಹಾಗೂ ವಿಧವೆಯವರಿಗೆ ಗ್ರಾಮ ಪಂಚಾಯಿತಿಯಲ್ಲಿ ಒಂದು ನಿವೇಶನವನ್ನು ನೀಡುವಂತೆ ಸರ್ಕಾರದ ಆದೇಶವಿದ್ದರೂ ಈವರೆಗೆ ಯಾವುದೇ ಒಂದು ಮನೆಯನ್ನೂ ಮಂಜೂರಾತಿ ಮಾಡಿಲ್ಲ. ಜಿಲ್ಲಾಡಳಿತ ಕೂಡಲೇ ಈ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.</p>.<p>ಕೆಲವು ಮಾಜಿ ಸೈನಿಕರಿಗೆ ನೀಡಿರುವ ಸ್ಥಳಕ್ಕೆ ಹೋಗುವ ದಾರಿಯನ್ನು ಸ್ಥಳೀಯರು ಆಕ್ರಮಿಸಿಕೊಂಡು ತೊಂದರೆ ಕೊಡುತ್ತಿದ್ದಾರೆ ಎಂದೂ ದೂರಿದರು.</p>.<p>ಕೃಷಿಸಾಲ ಮನ್ನಾ ಯೋಜನೆಯಡಿ ಎಲ್ಲ ರೈತರಿಗೆ ದೊರಕುವ ₹ 1 ಲಕ್ಷದವರೆಗಿನ ಸಾಲಮನ್ನಾ ಯೋಜನೆಯಲ್ಲಿ ಮಾಜಿ ಸೈನಿಕರಿಗೆ ವಂಚನೆಯಾಗಿದೆ. ಇದನ್ನು ಸರಿಪಡಿಸಿಕೊಡಬೇಕು ಹಾಗೂ ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗಾಗಿ ಸಮುದಾಯ ಭವನವೊಂದನ್ನು ನಿರ್ಮಿಸಬೇಕು ಎಂದರು.</p>.<p>ಸಂಘದ ಪದಾಧಿಕಾರಿಗಳಾದ ಮೇಜರ್ ಓ.ಎಸ್.ಚಿಂಗಪ್ಪ, ಚಂದ್ರಪ್ಪ, ಮಾದಪ್ಪ, ಗಂಗಾಧರ ಹಾಗೂ ಕರ್ನಲ್ ಚಿನ್ನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ನಮ್ಮ ಅಳಲು ಕೇಳಿ’ ಎಂದು ಮಾಜಿ ಸೈನಿಕರು ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.</p>.<p>ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕ ಹಾಗೂ ಕೊಡಗು (ಕೂರ್ಗ್) ಎಕ್ಸ್ಸರ್ವೀಸ್ ಪರ್ಸನಲ್ ಅಸೋಸಿಯೇಷನ್ ಇಲ್ಲಿ ಬುಧವಾರ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿ, ಮಾಜಿ ಸೈನಿಕರ ಸಮಸ್ಯೆಗಳನ್ನು ಬಿಡಿಸಿಟ್ಟರು. ಸಮಸ್ಯೆಗಳ ನಿವಾರಣೆಗೆ ಕೂಡಲೇ ಗಮನಹರಿಸಬೇಕು ಎಂದು ಕೋರಿದರು.</p>.<p>ಕೊಡಗು (ಕೂರ್ಗ್) ಎಕ್ಸ್ಸರ್ವೀಸ್ ಪರ್ಸನಲ್ ಅಸೋಸಿಯೇಷನ್ನಮೇಜರ್ಜನರಲ್ಬಿ.ಎ. ಕಾರ್ಯಪ್ಪಮಾತನಾಡಿ, ‘10ರಿಂದ 15 ಸಾವಿರ ಮಾಜಿ ಸೈನಿಕರು 15ರಿಂದ 40 ವರ್ಷದವರೆಗೆ ಸೇವೆ ಸಲ್ಲಿಸಿ ವಾಪಸ್ ಬಂದು ಇಲ್ಲಿಯೇ ನೆಲೆಸಿದ್ದಾರೆ. ಇವರೆಲ್ಲ ಹಲವು ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಿದ್ದಾರೆ’ ಎಂದು ಅಳಲು ತೋಡಿಕೊಂಡರು.</p>.<p>ಮಾಜಿ ಸೈನಿಕರಿಗೆ ಸರ್ಕಾರಿ ಜಾಗ ಮಂಜೂರು ಮಾಡುವ ವಿಷಯದಲ್ಲಿ ರಾಜ್ಯಸರ್ಕಾರ ಹಾಗೂ ಹೈಕೋರ್ಟ್ನ ಹಲವು ಆದೇಶಗಳಿದ್ದರೂ 500 ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿದಿವೆ. ಕೂಡಲೇ, ಕಂದಾಯ ಇಲಾಖೆ ಈ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಮನವಿ ಮಾಡಿದರು.</p>.<p>ನಿವೇಶನ ಇಲ್ಲದ ಮಾಜಿ ಸೈನಿಕರು ಹಾಗೂ ವಿಧವೆಯವರಿಗೆ ಗ್ರಾಮ ಪಂಚಾಯಿತಿಯಲ್ಲಿ ಒಂದು ನಿವೇಶನವನ್ನು ನೀಡುವಂತೆ ಸರ್ಕಾರದ ಆದೇಶವಿದ್ದರೂ ಈವರೆಗೆ ಯಾವುದೇ ಒಂದು ಮನೆಯನ್ನೂ ಮಂಜೂರಾತಿ ಮಾಡಿಲ್ಲ. ಜಿಲ್ಲಾಡಳಿತ ಕೂಡಲೇ ಈ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.</p>.<p>ಕೆಲವು ಮಾಜಿ ಸೈನಿಕರಿಗೆ ನೀಡಿರುವ ಸ್ಥಳಕ್ಕೆ ಹೋಗುವ ದಾರಿಯನ್ನು ಸ್ಥಳೀಯರು ಆಕ್ರಮಿಸಿಕೊಂಡು ತೊಂದರೆ ಕೊಡುತ್ತಿದ್ದಾರೆ ಎಂದೂ ದೂರಿದರು.</p>.<p>ಕೃಷಿಸಾಲ ಮನ್ನಾ ಯೋಜನೆಯಡಿ ಎಲ್ಲ ರೈತರಿಗೆ ದೊರಕುವ ₹ 1 ಲಕ್ಷದವರೆಗಿನ ಸಾಲಮನ್ನಾ ಯೋಜನೆಯಲ್ಲಿ ಮಾಜಿ ಸೈನಿಕರಿಗೆ ವಂಚನೆಯಾಗಿದೆ. ಇದನ್ನು ಸರಿಪಡಿಸಿಕೊಡಬೇಕು ಹಾಗೂ ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗಾಗಿ ಸಮುದಾಯ ಭವನವೊಂದನ್ನು ನಿರ್ಮಿಸಬೇಕು ಎಂದರು.</p>.<p>ಸಂಘದ ಪದಾಧಿಕಾರಿಗಳಾದ ಮೇಜರ್ ಓ.ಎಸ್.ಚಿಂಗಪ್ಪ, ಚಂದ್ರಪ್ಪ, ಮಾದಪ್ಪ, ಗಂಗಾಧರ ಹಾಗೂ ಕರ್ನಲ್ ಚಿನ್ನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>