<p><strong>ಸುಂಟಿಕೊಪ್ಪ</strong>: ಇಲ್ಲಿನ ಮಾದಾಪುರ ರಸ್ತೆಯಲ್ಲಿರುವ ನಾಡ ಕಚೇರಿಗೆ ತೆರಳುವ ರಸ್ತೆ ಗುಂಡಿ ಬಿದ್ದಿದ್ದು, ವಾಹನ ಚಾಲಕರಿಗೆ ಅಪಾಯವೊಡ್ಡುತ್ತಿದೆ.</p><p>ಕಳೆದೆರಡು ವರ್ಷಗಳ ಹಿಂದೆ ರಸ್ತೆ ಕಾಮಗಾರಿ ಮಾಡಲಾಗಿದ್ದು, ಇದೀಗ ಗುಂಡಿ ಬಿದ್ದು ಬೈಕು, ಕಾರುಗಳು ಓಡಾಡಲು ಅಡ್ಡಿಯಾಗಿದೆ.</p><p>ಈ ರಸ್ತೆಯ ಮೂಲಕ ನಾಡಕಚೇರಿ ಹಾಗೂ ಕೃಷಿ ಇಲಾಖೆಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಜನ ಸಂಚರಿಸುತ್ತಾರೆ. ಕೆಲಸಕ್ಕೆ ತೆರಳುವ ಬಹಳಷ್ಟು ಮಂದಿ ಬೈಕು ಸವಾರರು ನಿಯಂತ್ರಣ ತಪ್ಪಿ, ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಈ ರಸ್ತೆಯಲ್ಲಿ ಕಾರು ನಿಯಂತ್ರಣ ತಪ್ಪಿ, ಅಡ್ಡಾದಿಡ್ಡಿ ಸಂಚರಿಸಿ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ಮಹಿಳೆಯರಂತೂ ತಮ್ಮ ದ್ವಿಚಕ್ರ ವಾಹನವನ್ನು ಮುಖ್ಯರಸ್ತೆಯಲ್ಲಿ ನಿಲ್ಲಿಸಿ ತಾವು ಹಾಗೂ ತಮ್ಮೊಂದಿಗೆ ಕರೆತರುವ ವೃದ್ಧರನ್ನು ಕಷ್ಟದಿಂದ ಕಾಲ್ನಡಿಗೆಯಲ್ಲಿ ಈ ಇಲಾಖೆಗೆ ಕರೆ ತರುವುದು ಸರ್ವೆಸಾಮಾನ್ಯವಾಗಿದೆ.</p><p>ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುತ್ತಾರೆ ನಾಗರಿಕರು.</p><p>ನಾಡ ಕಚೇರಿಗೆ ತೆರಳುವ ರಸ್ತೆಯು ಹದಗೆಟ್ಟಿರುವುದು ನಮ್ಮ ಗಮನಕ್ಕೂ ಬಂದಿದ್ದು, ಮಳೆ ನಿಂತ ಕೂಡಲೇ ಗ್ರಾಮ ಪಂಚಾಯಿತಿ ನಿಧಿಯಿಂದ ಈ ರಸ್ತೆಯ ಕಾಮಗಾರಿ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.</p><p>ನಾಡಕಚೇರಿಗೆ ಬರುವವರಿಗೆ ಈ ರಸ್ತೆಯಲ್ಲಿನ ಗುಂಡಿಗಳಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಗುರುವಾರ ಕಾರೊಂದು ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ, ರಸ್ತೆ ಗುಂಡಿಗೆ ಮುಕ್ತಿ ಕಾಣಿಸಬೇಕು</p><p>ಅಬ್ದುಲ್ ರಜಾಕ್, ಹೊಸ ಬಡಾವಣೆಯ ನಿವಾಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಇಲ್ಲಿನ ಮಾದಾಪುರ ರಸ್ತೆಯಲ್ಲಿರುವ ನಾಡ ಕಚೇರಿಗೆ ತೆರಳುವ ರಸ್ತೆ ಗುಂಡಿ ಬಿದ್ದಿದ್ದು, ವಾಹನ ಚಾಲಕರಿಗೆ ಅಪಾಯವೊಡ್ಡುತ್ತಿದೆ.</p><p>ಕಳೆದೆರಡು ವರ್ಷಗಳ ಹಿಂದೆ ರಸ್ತೆ ಕಾಮಗಾರಿ ಮಾಡಲಾಗಿದ್ದು, ಇದೀಗ ಗುಂಡಿ ಬಿದ್ದು ಬೈಕು, ಕಾರುಗಳು ಓಡಾಡಲು ಅಡ್ಡಿಯಾಗಿದೆ.</p><p>ಈ ರಸ್ತೆಯ ಮೂಲಕ ನಾಡಕಚೇರಿ ಹಾಗೂ ಕೃಷಿ ಇಲಾಖೆಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಜನ ಸಂಚರಿಸುತ್ತಾರೆ. ಕೆಲಸಕ್ಕೆ ತೆರಳುವ ಬಹಳಷ್ಟು ಮಂದಿ ಬೈಕು ಸವಾರರು ನಿಯಂತ್ರಣ ತಪ್ಪಿ, ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಈ ರಸ್ತೆಯಲ್ಲಿ ಕಾರು ನಿಯಂತ್ರಣ ತಪ್ಪಿ, ಅಡ್ಡಾದಿಡ್ಡಿ ಸಂಚರಿಸಿ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ಮಹಿಳೆಯರಂತೂ ತಮ್ಮ ದ್ವಿಚಕ್ರ ವಾಹನವನ್ನು ಮುಖ್ಯರಸ್ತೆಯಲ್ಲಿ ನಿಲ್ಲಿಸಿ ತಾವು ಹಾಗೂ ತಮ್ಮೊಂದಿಗೆ ಕರೆತರುವ ವೃದ್ಧರನ್ನು ಕಷ್ಟದಿಂದ ಕಾಲ್ನಡಿಗೆಯಲ್ಲಿ ಈ ಇಲಾಖೆಗೆ ಕರೆ ತರುವುದು ಸರ್ವೆಸಾಮಾನ್ಯವಾಗಿದೆ.</p><p>ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುತ್ತಾರೆ ನಾಗರಿಕರು.</p><p>ನಾಡ ಕಚೇರಿಗೆ ತೆರಳುವ ರಸ್ತೆಯು ಹದಗೆಟ್ಟಿರುವುದು ನಮ್ಮ ಗಮನಕ್ಕೂ ಬಂದಿದ್ದು, ಮಳೆ ನಿಂತ ಕೂಡಲೇ ಗ್ರಾಮ ಪಂಚಾಯಿತಿ ನಿಧಿಯಿಂದ ಈ ರಸ್ತೆಯ ಕಾಮಗಾರಿ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.</p><p>ನಾಡಕಚೇರಿಗೆ ಬರುವವರಿಗೆ ಈ ರಸ್ತೆಯಲ್ಲಿನ ಗುಂಡಿಗಳಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಗುರುವಾರ ಕಾರೊಂದು ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ, ರಸ್ತೆ ಗುಂಡಿಗೆ ಮುಕ್ತಿ ಕಾಣಿಸಬೇಕು</p><p>ಅಬ್ದುಲ್ ರಜಾಕ್, ಹೊಸ ಬಡಾವಣೆಯ ನಿವಾಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>