ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಂಪುಟದ ಹಿರಿಯ ಸದಸ್ಯ ಸ್ವಾಮಿ ಪ್ರಸಾದ್ ಮೌರ್ಯ ಅವರ ಅಳಿಯ ಹಾಗೂ ಬಿಜೆಪಿಯ ಹಿಂದುಳಿದ ವರ್ಗಗಳ ಮುಖಂಡ ನವಲ್ ಕಿಶೋರ್ ಶನಿವಾರ ಸಮಾಜವಾದಿ ಪಕ್ಷ ಸೇರಿದ್ದಾರೆ.
ಗೋರಖಪುರ ಮತ್ತು ಫೂಲ್ಪುರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಹೀನಾಯ ಸೋಲಿನ ಬೆನಲ್ಲೇ ಈ ಪಕ್ಷಾಂತರ ನಡೆದಿದೆ.
ಸಮಾಜವಾದಿ ಪಕ್ಷದ ಮುಖಂಡರಾದ ಅಖಿಲೇಶ್ ಯಾದವ್ ಮತ್ತು ಅಜಂ ಖಾನ್ ಅವರು ನವಲ್ ಕಿಶೋರ್ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.