<p><strong>ಕುಶಾಲನಗರ:</strong> ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ಜೀತ್ ಸಿಂಗ್ ಅವರು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ಪ್ರಗತಿ ಕುರಿತು ಚರ್ಚೆ ನಡೆಸಿದರು.</p>.<p>ಕೂಡಿಗೆ ಕೃಷಿ ಫಾರಂ ಆವರಣದಲ್ಲಿ 2007ರಲ್ಲಿ ಆರಂಭಗೊಂಡು ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಸೈನಿಕ ಶಾಲೆ ಶೈಕ್ಷಣಿಕ ಹಾಗೂ ಸರ್ವಾಂಗೀಣ ಪ್ರಗತಿ ಸಾಧಿಸುತ್ತಿರುವ ಕುರಿತು ಸಂಸದರಿಗೆ ಮಾಹಿತಿ ನೀಡಿದರು.</p>.<p>ಶಾಲೆಯ ಪರಿಣಾಮಕಾರಿ ಕಾರ್ಯನಿರ್ವಹಣೆ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಹಾಗೂ ನೌಕಾ ಅಕಾಡೆಮಿ (ಐಎನ್ಎ)ಗೆ ಸೇರ್ಪಡೆಯಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯ ಏರಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದಾದ್ಯಂತ ದೇಶಸೇವೆಯಲ್ಲಿ ತೊಡಗಿರುವ ಹಳೆಯ ವಿದ್ಯಾರ್ಥಿಗಳ ಸಾಧನೆಗಳನ್ನು ವಿವರಿಸಿದರು.</p>.<p>ಶಾಲೆಯ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರೂ ಆಗಿರುವ ಸಂಸದರು, ಶಾಲೆ ಬೆಳವಣಿಗೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಸಂತಸ ವ್ಯಕ್ತಪಡಿಸಿದ್ದು, ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿ, ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ಜೀತ್ ಸಿಂಗ್ ಅವರು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ಪ್ರಗತಿ ಕುರಿತು ಚರ್ಚೆ ನಡೆಸಿದರು.</p>.<p>ಕೂಡಿಗೆ ಕೃಷಿ ಫಾರಂ ಆವರಣದಲ್ಲಿ 2007ರಲ್ಲಿ ಆರಂಭಗೊಂಡು ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಸೈನಿಕ ಶಾಲೆ ಶೈಕ್ಷಣಿಕ ಹಾಗೂ ಸರ್ವಾಂಗೀಣ ಪ್ರಗತಿ ಸಾಧಿಸುತ್ತಿರುವ ಕುರಿತು ಸಂಸದರಿಗೆ ಮಾಹಿತಿ ನೀಡಿದರು.</p>.<p>ಶಾಲೆಯ ಪರಿಣಾಮಕಾರಿ ಕಾರ್ಯನಿರ್ವಹಣೆ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಹಾಗೂ ನೌಕಾ ಅಕಾಡೆಮಿ (ಐಎನ್ಎ)ಗೆ ಸೇರ್ಪಡೆಯಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯ ಏರಿಕೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದಾದ್ಯಂತ ದೇಶಸೇವೆಯಲ್ಲಿ ತೊಡಗಿರುವ ಹಳೆಯ ವಿದ್ಯಾರ್ಥಿಗಳ ಸಾಧನೆಗಳನ್ನು ವಿವರಿಸಿದರು.</p>.<p>ಶಾಲೆಯ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರೂ ಆಗಿರುವ ಸಂಸದರು, ಶಾಲೆ ಬೆಳವಣಿಗೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಸಂತಸ ವ್ಯಕ್ತಪಡಿಸಿದ್ದು, ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿ, ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>