<p><strong>ವಿರಾಜಪೇಟೆ:</strong> ‘ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಪ್ರಮುಖ’ ಎಂದು ಸಮೀಪದ ಅರಮೇರಿಯ ಕಳಂಚೇರಿ ಮಠದ ಮಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಮಹಿಳಾ ಸಮಾಜದ ಸಭಾಂಗಣದಲ್ಲಿ ಈಚೆಗೆ ನಡೆದ ವಿರಾಜಪೇಟೆಯ ಮಾಜಿ ಸೈನಿಕರ ಸಹಕಾರ ಸಂಘದ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೊಡಗು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರಂತಹ ಮಹಾನ್ ಯೋಧರನ್ನು ಒಳಗೊಂಡಂತೆ ಕೊಡಗು ಜಿಲ್ಲೆಯು ದೇಶಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಯೋಧರನ್ನು ನೀಡಿರುವುದು ಹೆಮ್ಮೆಯ ವಿಚಾರ’ ಎಂದು ತಿಳಿಸಿದರು</p>.<p>‘ಕೊಡಗಿನ ಪ್ರತಿ ಮನೆಗಳಲ್ಲಿ ದೇಶ ರಕ್ಷಣೆ ಬಗ್ಗೆ ಒಂದಿಲ್ಲೊಂದು ವೀರತ್ವದ ಕಥೆಗಳಿರುತ್ತಿದ್ದವು. ಇಂತಹ ಒಂದು ಹೆಮ್ಮೆಯ ಜಿಲ್ಲೆ ನಮ್ಮ ಕೊಡಗು ಎಂದರೆ ತಪ್ಪಾಗಲಾರದು. ಮುಂದೆಯೂ ಕೂಡ ಯುವಜನರು ಹೆಚ್ಚಾಗಿ ಸೈನ್ಯಕ್ಕೆ ಸೇರುವ ಮೂಲಕ ದೇಶ ರಕ್ಷಣೆಗೆ ಪಣ ತೊಡಬೇಕು’ ಎಂದರು.</p>.<p>‘ರೈತರು, ಸೈನಿಕರು ಹಾಗೂ ಕಾರ್ಮಿಕರು ದೇಶದ ಪ್ರಮುಖ ನಾಯಕರು. ಈ ಮೂರು ವರ್ಗದ ಸಹಕಾರವಿಲ್ಲದೇ ನಮ್ಮ ಪ್ರತಿನಿತ್ಯದ ಕಾರ್ಯ ನಡೆಯುವುದು ಅಸಾಧ್ಯ. ಸಮಾಜದಲ್ಲಿ ನಾವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ರಾಜಕೀಯವಾಗಿ ಮುನ್ನಡೆ ಸಾಧಿಸಿದ್ದೇವೆ. ಆದರೆ ನೈತಿಕವಾಗಿ ಕುಸಿದಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ, ‘ಸೈನಿಕರು ದೇಶದ ಶಾಂತಿ ಹಾಗೂ ನಮ್ಮ ಜೀವ ಕಾಪಾಡುವ ರಕ್ಷಕರು. ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆ ತೊಡಗಿರುವುದು’ ಶ್ಲಾಘನೀಯ ಎಂದು ತಿಳಿಸಿದರು.</p>.<p>ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಮಾತನಾಡಿ, ‘ಮಾಜಿ ಸೈನಿಕರು ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳಾದ ಬಾಚಿಮಂಡ ಕಾರ್ಯಪ್ಪ, ಕರ್ನಲ್ ಪುಟ್ಟಿಚಂಡ ಗಣಪತಿ, ದುದ್ದಿಯಂಡ ಹಸೈನಾರ್ ಸೂಫಿ, ಕಟ್ಟೇರ ವಿಶ್ವನಾಥ್, ನೆಲ್ಲಮಕ್ಕಡ ಜಪ್ಪು ಮುದ್ದಯ್ಯ, ಎಂ.ಕೆ.ಸಲಾಂ, ತೋರೆರ ಪೂವಯ್ಯ, ನಾಮೇರ ನವೀನ್, ಮುಕ್ಕಾಟ್ಟೀರ ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಘದ ಉಪಾಧ್ಯಕ್ಷ ರಾಜ ಚಂದ್ರಶೇಖರ್, ಕಾರ್ಯದರ್ಶಿ ಪುಗ್ಗೆರ ನಂದಾ, ಖಜಾಂಚಿ ತೋರೆರ ಪೂವಯ್ಯ, ನಿರ್ದೇಶಕರಾದ ಚೇಂದ್ರಿಮಾಡ ಕೆ.ನಂಜಪ್ಪ, ಪಟ್ರಪಂಡ ಎಂ.ಕರುಂಬಯ್ಯ, ಕೊಂಗಂಡ ಎ.ಭೀಮಯ್ಯ, ಅಣ್ಣಾಳಮಾಡ ಡಿ. ಸುಬ್ಬಯ್ಯ, ಬಾಳೆಕುಟ್ಟೀರ ಎ.ಬೋಪಯ್ಯ, ಅಪ್ಪಯ್ಯ ಎಚ್.ಕೆ, ಕಬ್ಬಚ್ಚಿರ ಎ.ಬೋಪಣ್ಣ, ಪಟ್ರಪಂಡ ಎ.ಚಂಗಪ್ಪ ಉಪಸ್ಥಿತರಿದ್ದರು.</p>.<p> <strong>‘ಯೋಧನ ತಾಯಿ ಹೆಂಡತಿ ನಿಜವಾದ ಸೈನಿಕರು’</strong> </p><p>ಲೆಪ್ಟಿನೆಂಟ್ ಕರ್ನಲ್ ಬಾಳೆಯಡ ಕೆ.ಸುಬ್ರಮಣಿ ಮಾತನಾಡಿ ‘ನಿಜವಾದ ಸೈನಿಕರೆಂದರೆ ಯೋಧನ ತಾಯಿ ಮತ್ತು ಹೆಂಡತಿ. ದೇಶ ರಕ್ಷಣೆಗೆ ಮನೆಯಲ್ಲಿನ ಮಗ ಅಥವಾ ಪತಿ ತೆರಳಿದ್ದಾಗ ದೃಢ ಮನಸ್ಸಿನಿಂದ ಆ ಹೆಣ್ಣು ಮನೆಯ ಜವಾಬ್ದಾರಿ ಹೊತ್ತು ಸಂಸಾರ ಸಾಗಿಸುತ್ತಾಳೆ. ಆದ್ದರಿಂದ ಹೆಣ್ಣಿಗೆ ಆ ಕೀರ್ತಿ ಸಲ್ಲಬೇಕು’ ಎಂದರು. ‘ಪೋಷಕರು ಮಕ್ಕಳಲ್ಲಿ ಶಿಕ್ಷಣದ ಜತೆ ದೇಶ ಪ್ರೇಮ ಬೆಳೆಸಬೇಕು. ಸಮಾಜ ತುಂಬಾ ಸಂಕೀರ್ಣವಾಗುತ್ತಿದೆ. ಶಿಸ್ತು ಸಂಯಮ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಕಲುಷಿತಗೊಂಡ ಮನುಷ್ಯನ ಮನಸ್ಸು ತಿಳಿಯಾಗಲು ಸಾಧ್ಯ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ‘ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಪ್ರಮುಖ’ ಎಂದು ಸಮೀಪದ ಅರಮೇರಿಯ ಕಳಂಚೇರಿ ಮಠದ ಮಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಮಹಿಳಾ ಸಮಾಜದ ಸಭಾಂಗಣದಲ್ಲಿ ಈಚೆಗೆ ನಡೆದ ವಿರಾಜಪೇಟೆಯ ಮಾಜಿ ಸೈನಿಕರ ಸಹಕಾರ ಸಂಘದ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೊಡಗು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರಂತಹ ಮಹಾನ್ ಯೋಧರನ್ನು ಒಳಗೊಂಡಂತೆ ಕೊಡಗು ಜಿಲ್ಲೆಯು ದೇಶಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಯೋಧರನ್ನು ನೀಡಿರುವುದು ಹೆಮ್ಮೆಯ ವಿಚಾರ’ ಎಂದು ತಿಳಿಸಿದರು</p>.<p>‘ಕೊಡಗಿನ ಪ್ರತಿ ಮನೆಗಳಲ್ಲಿ ದೇಶ ರಕ್ಷಣೆ ಬಗ್ಗೆ ಒಂದಿಲ್ಲೊಂದು ವೀರತ್ವದ ಕಥೆಗಳಿರುತ್ತಿದ್ದವು. ಇಂತಹ ಒಂದು ಹೆಮ್ಮೆಯ ಜಿಲ್ಲೆ ನಮ್ಮ ಕೊಡಗು ಎಂದರೆ ತಪ್ಪಾಗಲಾರದು. ಮುಂದೆಯೂ ಕೂಡ ಯುವಜನರು ಹೆಚ್ಚಾಗಿ ಸೈನ್ಯಕ್ಕೆ ಸೇರುವ ಮೂಲಕ ದೇಶ ರಕ್ಷಣೆಗೆ ಪಣ ತೊಡಬೇಕು’ ಎಂದರು.</p>.<p>‘ರೈತರು, ಸೈನಿಕರು ಹಾಗೂ ಕಾರ್ಮಿಕರು ದೇಶದ ಪ್ರಮುಖ ನಾಯಕರು. ಈ ಮೂರು ವರ್ಗದ ಸಹಕಾರವಿಲ್ಲದೇ ನಮ್ಮ ಪ್ರತಿನಿತ್ಯದ ಕಾರ್ಯ ನಡೆಯುವುದು ಅಸಾಧ್ಯ. ಸಮಾಜದಲ್ಲಿ ನಾವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ರಾಜಕೀಯವಾಗಿ ಮುನ್ನಡೆ ಸಾಧಿಸಿದ್ದೇವೆ. ಆದರೆ ನೈತಿಕವಾಗಿ ಕುಸಿದಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ, ‘ಸೈನಿಕರು ದೇಶದ ಶಾಂತಿ ಹಾಗೂ ನಮ್ಮ ಜೀವ ಕಾಪಾಡುವ ರಕ್ಷಕರು. ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆ ತೊಡಗಿರುವುದು’ ಶ್ಲಾಘನೀಯ ಎಂದು ತಿಳಿಸಿದರು.</p>.<p>ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಮಾತನಾಡಿ, ‘ಮಾಜಿ ಸೈನಿಕರು ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳಾದ ಬಾಚಿಮಂಡ ಕಾರ್ಯಪ್ಪ, ಕರ್ನಲ್ ಪುಟ್ಟಿಚಂಡ ಗಣಪತಿ, ದುದ್ದಿಯಂಡ ಹಸೈನಾರ್ ಸೂಫಿ, ಕಟ್ಟೇರ ವಿಶ್ವನಾಥ್, ನೆಲ್ಲಮಕ್ಕಡ ಜಪ್ಪು ಮುದ್ದಯ್ಯ, ಎಂ.ಕೆ.ಸಲಾಂ, ತೋರೆರ ಪೂವಯ್ಯ, ನಾಮೇರ ನವೀನ್, ಮುಕ್ಕಾಟ್ಟೀರ ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಘದ ಉಪಾಧ್ಯಕ್ಷ ರಾಜ ಚಂದ್ರಶೇಖರ್, ಕಾರ್ಯದರ್ಶಿ ಪುಗ್ಗೆರ ನಂದಾ, ಖಜಾಂಚಿ ತೋರೆರ ಪೂವಯ್ಯ, ನಿರ್ದೇಶಕರಾದ ಚೇಂದ್ರಿಮಾಡ ಕೆ.ನಂಜಪ್ಪ, ಪಟ್ರಪಂಡ ಎಂ.ಕರುಂಬಯ್ಯ, ಕೊಂಗಂಡ ಎ.ಭೀಮಯ್ಯ, ಅಣ್ಣಾಳಮಾಡ ಡಿ. ಸುಬ್ಬಯ್ಯ, ಬಾಳೆಕುಟ್ಟೀರ ಎ.ಬೋಪಯ್ಯ, ಅಪ್ಪಯ್ಯ ಎಚ್.ಕೆ, ಕಬ್ಬಚ್ಚಿರ ಎ.ಬೋಪಣ್ಣ, ಪಟ್ರಪಂಡ ಎ.ಚಂಗಪ್ಪ ಉಪಸ್ಥಿತರಿದ್ದರು.</p>.<p> <strong>‘ಯೋಧನ ತಾಯಿ ಹೆಂಡತಿ ನಿಜವಾದ ಸೈನಿಕರು’</strong> </p><p>ಲೆಪ್ಟಿನೆಂಟ್ ಕರ್ನಲ್ ಬಾಳೆಯಡ ಕೆ.ಸುಬ್ರಮಣಿ ಮಾತನಾಡಿ ‘ನಿಜವಾದ ಸೈನಿಕರೆಂದರೆ ಯೋಧನ ತಾಯಿ ಮತ್ತು ಹೆಂಡತಿ. ದೇಶ ರಕ್ಷಣೆಗೆ ಮನೆಯಲ್ಲಿನ ಮಗ ಅಥವಾ ಪತಿ ತೆರಳಿದ್ದಾಗ ದೃಢ ಮನಸ್ಸಿನಿಂದ ಆ ಹೆಣ್ಣು ಮನೆಯ ಜವಾಬ್ದಾರಿ ಹೊತ್ತು ಸಂಸಾರ ಸಾಗಿಸುತ್ತಾಳೆ. ಆದ್ದರಿಂದ ಹೆಣ್ಣಿಗೆ ಆ ಕೀರ್ತಿ ಸಲ್ಲಬೇಕು’ ಎಂದರು. ‘ಪೋಷಕರು ಮಕ್ಕಳಲ್ಲಿ ಶಿಕ್ಷಣದ ಜತೆ ದೇಶ ಪ್ರೇಮ ಬೆಳೆಸಬೇಕು. ಸಮಾಜ ತುಂಬಾ ಸಂಕೀರ್ಣವಾಗುತ್ತಿದೆ. ಶಿಸ್ತು ಸಂಯಮ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಕಲುಷಿತಗೊಂಡ ಮನುಷ್ಯನ ಮನಸ್ಸು ತಿಳಿಯಾಗಲು ಸಾಧ್ಯ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>