<p><strong>ಶನಿವಾರಸಂತೆ: </strong>ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಳತ್ತೂರು ಗ್ರಾಮದ ಕಾಫಿತೋಟದಿಂದ ಅರಕಲಗೂಡಿಗೆ ಮೂವರು ಆರೋಪಿಗಳು ಗೂಡ್ಸ್ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಸೇರಿದಂತೆ ₹3.80 ಲಕ್ಷ ಮೌಲ್ಯದ 3 ಬೀಟೆ ನಾಟಾಗಳನ್ನು ಅರಣ್ಯ ವಲಯಾಧಿಕಾರಿ ಕೆ.ಕೊಟ್ರೇಶ್ ಹಾಗೂ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.</p>.<p>ಗುಂಡೂರಾವ್ ಬಡಾವಣೆಯ ಎಚ್.ಎನ್.ಪುನೀತ ಹಾಗೂ ಜಾಬಿಕೋಡಿ ಗ್ರಾಮದ ಡಿ.ವಿ.ವಿನಯ್ ಬಂಧಿತ ಆರೋಪಿಗಳು.ಶಿರಂಗಾಲ ಗ್ರಾಮದ ಆರೋಪಿ ಸಾಬು ತಲೆಮರೆಸಿಡಿದ್ದಾರೆ.</p>.<p>ವಿಜಯಕುಮಾರ್ ಅವರ ತೋಟದಿಂದ ವಾಹನದಲ್ಲಿ ಅರಕಲಗೂಡಿಗೆ ಸಾಗಿಸುವಾಗ ದೊರೆತ ಮಾಹಿತಿ ಅನ್ವಯ ಹೊಸೂರು ರಸ್ತೆಯ ಬಾಪೂಜಿ ವಿದ್ಯಾಸಂಸ್ಥೆಯ ಬಳಿ ಅಡ್ಡಗಟ್ಟಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ವಲಯಾಧಿಕಾರಿ ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತಾರೆ.</p>.<p>ಈ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಕೆ.ಕೊಟ್ರೇಶ್, ಉಪವಲಯಾಧಿಕಾರಿಗಳಾದ ಶ್ರೀನಿವಾಸ್, ಪ್ರಶಾಂತಕುಮಾರ್, ಅರಣ್ಯ ರಕ್ಷಕರಾದ ಲೋಹಿತ್, ಜಯಕುಮಾರ್, ದೊಡ್ಡಯ್ಯ ಹಾಗೂ ಹರೀಶ್ ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ: </strong>ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಳತ್ತೂರು ಗ್ರಾಮದ ಕಾಫಿತೋಟದಿಂದ ಅರಕಲಗೂಡಿಗೆ ಮೂವರು ಆರೋಪಿಗಳು ಗೂಡ್ಸ್ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಸೇರಿದಂತೆ ₹3.80 ಲಕ್ಷ ಮೌಲ್ಯದ 3 ಬೀಟೆ ನಾಟಾಗಳನ್ನು ಅರಣ್ಯ ವಲಯಾಧಿಕಾರಿ ಕೆ.ಕೊಟ್ರೇಶ್ ಹಾಗೂ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.</p>.<p>ಗುಂಡೂರಾವ್ ಬಡಾವಣೆಯ ಎಚ್.ಎನ್.ಪುನೀತ ಹಾಗೂ ಜಾಬಿಕೋಡಿ ಗ್ರಾಮದ ಡಿ.ವಿ.ವಿನಯ್ ಬಂಧಿತ ಆರೋಪಿಗಳು.ಶಿರಂಗಾಲ ಗ್ರಾಮದ ಆರೋಪಿ ಸಾಬು ತಲೆಮರೆಸಿಡಿದ್ದಾರೆ.</p>.<p>ವಿಜಯಕುಮಾರ್ ಅವರ ತೋಟದಿಂದ ವಾಹನದಲ್ಲಿ ಅರಕಲಗೂಡಿಗೆ ಸಾಗಿಸುವಾಗ ದೊರೆತ ಮಾಹಿತಿ ಅನ್ವಯ ಹೊಸೂರು ರಸ್ತೆಯ ಬಾಪೂಜಿ ವಿದ್ಯಾಸಂಸ್ಥೆಯ ಬಳಿ ಅಡ್ಡಗಟ್ಟಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ವಲಯಾಧಿಕಾರಿ ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತಾರೆ.</p>.<p>ಈ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಕೆ.ಕೊಟ್ರೇಶ್, ಉಪವಲಯಾಧಿಕಾರಿಗಳಾದ ಶ್ರೀನಿವಾಸ್, ಪ್ರಶಾಂತಕುಮಾರ್, ಅರಣ್ಯ ರಕ್ಷಕರಾದ ಲೋಹಿತ್, ಜಯಕುಮಾರ್, ದೊಡ್ಡಯ್ಯ ಹಾಗೂ ಹರೀಶ್ ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>