ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ | ಗಾಂಜಾ ಮಾರಾಟಕ್ಕೆ ಯತ್ನ; 8 ಮಂದಿ ಬಂಧನ

Published 26 ಜುಲೈ 2023, 13:31 IST
Last Updated 26 ಜುಲೈ 2023, 13:31 IST
ಅಕ್ಷರ ಗಾತ್ರ

ವಿರಾಜಪೇಟೆ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ 8 ಮಂದಿಯನ್ನು ಇಲ್ಲಿನ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ, ಆರೋಪಿಗಳಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಅರೆಕಾಡುವಿನ ರಶೀದ್, ಒಂಟಿಯಂಗಡಿಯ ಸುದೀಶ್, ಮುತಾರ್ಮುಡಿಯ ಎಂ.ಪ್ರಕಾಶ್, ಚೇರಂಬಾಂಣೆಯ ಶಾಂತ ಕುಮಾರ್, ಕಡಗದಾಳು ಗ್ರಾಮದ ಸಜೀರ್, ನಿಯಾಜ್, ಮೈಸೂರಿನ ಕೆ.ಸಿ.ಪಿ ಕಾಲೊನಿಯ ಇಮ್ರಾನ್ ಖಾನ್ ಹಾಗೂ ಮೈಸೂರು ಶಾಂತಿನಗರದ ಇಮ್ರಾನ್ ಖಾನ್ ಬಂಧಿತ ಆರೋಪಿಗಳು.

ಖಚಿತ ಮಾಹಿತಿಯಂತೆ ಕಾರ್ಯಚರಣೆ ನಡೆಸಿದ ಪೊಲೀಸರು, ಸಮೀಪದ ಕದನೂರಿನ ನಾಪೋಕ್ಲು ರಸ್ತೆ ಜಂಕ್ಷನ್ ಬಳಿ ಮಂಗಳವಾರ ಆರೋಪಿಗಳನ್ನು ಬಂಧಿಸಿದ್ದಾರೆ. 1 ಕೆ.ಜಿ 243 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿರುವ ಹಿನ್ನೆಲೆ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಿರಾಜಪೇಟೆ ಸಿ.ಪಿ.ಐ ಬಿ.ಎಸ್.ಶಿವರುದ್ರಪ್ಪ ಮತ್ತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಸ್.ಐ ಸಿ.ಸಿ. ಮಂಜುನಾಥ ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT