<p><strong>ಮಡಿಕೇರಿ:</strong> ಗೋಣಿಕೊಪ್ಪಲಿನ ಕಾಲ್ಸ್ ವಿದ್ಯಾಸಂಸ್ಥೆಯು ರಕ್ಷಣಾ ಪಡೆಯ ಆಯ್ಕೆ ಪ್ರಕ್ರಿಯೆ ಕುರಿತ ಕಾರ್ಯಾಗಾರವನ್ನು ಆಯೋಜಿಸುತ್ತಿದ್ದು, ಅದರಲ್ಲಿ ಕೇವಲ ಕಾಲ್ಸ್ ವಿದ್ಯಾಸಂಸ್ಥೆ ಮಾತ್ರವಲ್ಲ, ಇನ್ನಿತರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೂ ಭಾಗವಹಿಸಲು ಅವಕಾಶ ಮಾಡಿಕೊಡಲಿದೆ.</p>.<p>ಈಚೆಗೆ ಶಾಲೆಗೆ ಭೇಟಿ ನೀಡಿದ್ದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ಓಲಿವ್ ಗ್ರೀನ್ಸ್ ಇನ್ಸ್ಟಿಟ್ಯೂಟ್ನ ಸಂಸ್ಥಾಪಕ ಕರ್ನಲ್ ಕೆ.ಅಶೋಕನ್ ಅವರು, ‘ಈಚೆಗೆ ಕೊಡಗಿನಿಂದ ಸೇನೆಗೆ ಸೇರುವವರ ಸಂಖ್ಯೆ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.</p>.<p>ವೀರತೆ ಕೊಡಗಿನವರ ರಕ್ತದಲ್ಲೇ ಇದೆ. ಹಿಂದಿನಿಂದಲೂ ಸಂಪ್ರದಾಯ ಎಂಬಂತೆ ಕೊಡಗಿನಿಂದ ಹೆಚ್ಚು ಹೆಚ್ಚು ಮಂದಿ ಸೇನೆಗೆ ಸೇರುತ್ತಿದ್ದರು. ಆದರೆ, ಈಗ ಅದು ಕಡಿಮೆಯಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳಿಗೆ ಸೇನೆ ಸೇರುವ ಕುರಿತು ಮಾರ್ಗದರ್ಶನ ನೀಡಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಈ ಕಾರ್ಯಾಗಾರದಲ್ಲಿ ಭಾಗಿಯಾಗಿ ಆಯ್ಕೆಯಾದ ವಿದ್ಯಾರ್ಥಿಗಳು ಓಲಿವ್ ಗ್ರೀನ್ಸ್ ಇನ್ಸ್ಟಿಟ್ಯೂಟ್ನಲ್ಲಿ ತರಬೇತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಗೋಣಿಕೊಪ್ಪಲಿನ ಕಾಲ್ಸ್ ವಿದ್ಯಾಸಂಸ್ಥೆಯು ರಕ್ಷಣಾ ಪಡೆಯ ಆಯ್ಕೆ ಪ್ರಕ್ರಿಯೆ ಕುರಿತ ಕಾರ್ಯಾಗಾರವನ್ನು ಆಯೋಜಿಸುತ್ತಿದ್ದು, ಅದರಲ್ಲಿ ಕೇವಲ ಕಾಲ್ಸ್ ವಿದ್ಯಾಸಂಸ್ಥೆ ಮಾತ್ರವಲ್ಲ, ಇನ್ನಿತರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೂ ಭಾಗವಹಿಸಲು ಅವಕಾಶ ಮಾಡಿಕೊಡಲಿದೆ.</p>.<p>ಈಚೆಗೆ ಶಾಲೆಗೆ ಭೇಟಿ ನೀಡಿದ್ದ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ಓಲಿವ್ ಗ್ರೀನ್ಸ್ ಇನ್ಸ್ಟಿಟ್ಯೂಟ್ನ ಸಂಸ್ಥಾಪಕ ಕರ್ನಲ್ ಕೆ.ಅಶೋಕನ್ ಅವರು, ‘ಈಚೆಗೆ ಕೊಡಗಿನಿಂದ ಸೇನೆಗೆ ಸೇರುವವರ ಸಂಖ್ಯೆ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.</p>.<p>ವೀರತೆ ಕೊಡಗಿನವರ ರಕ್ತದಲ್ಲೇ ಇದೆ. ಹಿಂದಿನಿಂದಲೂ ಸಂಪ್ರದಾಯ ಎಂಬಂತೆ ಕೊಡಗಿನಿಂದ ಹೆಚ್ಚು ಹೆಚ್ಚು ಮಂದಿ ಸೇನೆಗೆ ಸೇರುತ್ತಿದ್ದರು. ಆದರೆ, ಈಗ ಅದು ಕಡಿಮೆಯಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳಿಗೆ ಸೇನೆ ಸೇರುವ ಕುರಿತು ಮಾರ್ಗದರ್ಶನ ನೀಡಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಈ ಕಾರ್ಯಾಗಾರದಲ್ಲಿ ಭಾಗಿಯಾಗಿ ಆಯ್ಕೆಯಾದ ವಿದ್ಯಾರ್ಥಿಗಳು ಓಲಿವ್ ಗ್ರೀನ್ಸ್ ಇನ್ಸ್ಟಿಟ್ಯೂಟ್ನಲ್ಲಿ ತರಬೇತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>