<p><strong>ಗೋಣಿಕೊಪ್ಪಲು</strong>: ‘ಕಿಗ್ಗಟ್ಟ್ ನಾಡ್ ಹಿರಿಯ ನಾಗರಿಕ ವೇದಿಕೆ ಮಹಾಸಭೆಯನ್ನು ಸೆ 22 ರಂದು ಪೊನ್ನಂಪೇಟೆ ಇಗ್ಗುತ್ತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಗುವುದು’ ಎಂದು ವೇದಿಕೆ ಅಧ್ಯಕ್ಷ ಕೊಟ್ಟ್ ಕತ್ತೀರ ಪಿ. ಸೋಮಣ್ಣ ಹೇಳಿದರು.</p>.<p>ನಾಗರಿಕ ವೇದಿಕೆ ಸಭೆಯಲ್ಲಿ ಭಾನುವಾರ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭಗೊಳ್ಳಲಿದೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವೇದಿಕೆ ಸದಸ್ಯರ ಮೊಮ್ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸುದೀರ್ಘವಾಗಿ ತೊಡಗಿಕೊಂಡಿರುವ ವ್ಯಕ್ತಿಗೆ ‘ಕಿಗ್ಗಟ್ಟ್ ನಾಡ್ ಮ್ಯಾನ್ ಆಫ್ ದ ಇಯರ್’ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಸರ್ವೆ ಇಲಾಖೆಯಲ್ಲಿ ಎಡಿಎಲ್ಆರ್ ಆಗಿ ನಿವೃತ್ತಿ ಹೊಂದಿರುವ ಅಜ್ಜಿಕುಟ್ಟೀರ ಬಿ.ಭೀಮಯ್ಯ ಅವರಿಗೆ ಈ ಗೌರವ ನೀಡಲಾಗುವುದು. ಮಹಾಸಭೆಗೆ ವಿಶೇಷ ಆಹ್ವಾನಿತರಾಗಿ ಚೆಕ್ಕೇರ ಪೊನ್ನು ಪೂಣಚ್ಚ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ವೇದಿಕೆಯ ಸ್ಥಾಪಕ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಮಾತನಾಡಿ, ‘ಕಿಗ್ಗಟ್ಟ್ ನಾಡ್ ಮ್ಯಾನ್ ಆಫ್ ದ ಇಯರ್ ಪ್ರಶಸ್ತಿ ವೇದಿಕೆಗೆ ಹೆಚ್ಚು ಗೌರವ ತರಲಿದೆ. ಸಮಾಜ ಸೇವೆಯಲ್ಲಿ ಹೆಚ್ಚು ತೊಡಗಿಕೊಂಡಿರುವ ಹಿರಿಯರಿಗೆ ಮನ್ನಣೆ ಸಿಗುವಂತಾಗಲಿದೆ’ ಎಂದರು.</p>.<p>ಸಭೆಯಲ್ಲಿ ವೇದಿಕೆ ಕಾರ್ಯದರ್ಶಿ ಚೇಂದೀರ ಎಂ. ಬೋಪಣ್ಣ, ಸದಸ್ಯರಾದ ಮಾಣಿಪಂಡ ಪಾರ್ವತಿ ಜೋಯಪ್ಪ, ಕೇಚೇಟ್ಟಿರ ಕಾಮುಣಿ ಪೂಣಚ್ಚ, ಕೊಳ್ಳಿಮಾಡ ಚಿಪ್ಪಿ ಕಾರ್ಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ‘ಕಿಗ್ಗಟ್ಟ್ ನಾಡ್ ಹಿರಿಯ ನಾಗರಿಕ ವೇದಿಕೆ ಮಹಾಸಭೆಯನ್ನು ಸೆ 22 ರಂದು ಪೊನ್ನಂಪೇಟೆ ಇಗ್ಗುತ್ತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಗುವುದು’ ಎಂದು ವೇದಿಕೆ ಅಧ್ಯಕ್ಷ ಕೊಟ್ಟ್ ಕತ್ತೀರ ಪಿ. ಸೋಮಣ್ಣ ಹೇಳಿದರು.</p>.<p>ನಾಗರಿಕ ವೇದಿಕೆ ಸಭೆಯಲ್ಲಿ ಭಾನುವಾರ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭಗೊಳ್ಳಲಿದೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವೇದಿಕೆ ಸದಸ್ಯರ ಮೊಮ್ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸುದೀರ್ಘವಾಗಿ ತೊಡಗಿಕೊಂಡಿರುವ ವ್ಯಕ್ತಿಗೆ ‘ಕಿಗ್ಗಟ್ಟ್ ನಾಡ್ ಮ್ಯಾನ್ ಆಫ್ ದ ಇಯರ್’ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಸರ್ವೆ ಇಲಾಖೆಯಲ್ಲಿ ಎಡಿಎಲ್ಆರ್ ಆಗಿ ನಿವೃತ್ತಿ ಹೊಂದಿರುವ ಅಜ್ಜಿಕುಟ್ಟೀರ ಬಿ.ಭೀಮಯ್ಯ ಅವರಿಗೆ ಈ ಗೌರವ ನೀಡಲಾಗುವುದು. ಮಹಾಸಭೆಗೆ ವಿಶೇಷ ಆಹ್ವಾನಿತರಾಗಿ ಚೆಕ್ಕೇರ ಪೊನ್ನು ಪೂಣಚ್ಚ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ವೇದಿಕೆಯ ಸ್ಥಾಪಕ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಮಾತನಾಡಿ, ‘ಕಿಗ್ಗಟ್ಟ್ ನಾಡ್ ಮ್ಯಾನ್ ಆಫ್ ದ ಇಯರ್ ಪ್ರಶಸ್ತಿ ವೇದಿಕೆಗೆ ಹೆಚ್ಚು ಗೌರವ ತರಲಿದೆ. ಸಮಾಜ ಸೇವೆಯಲ್ಲಿ ಹೆಚ್ಚು ತೊಡಗಿಕೊಂಡಿರುವ ಹಿರಿಯರಿಗೆ ಮನ್ನಣೆ ಸಿಗುವಂತಾಗಲಿದೆ’ ಎಂದರು.</p>.<p>ಸಭೆಯಲ್ಲಿ ವೇದಿಕೆ ಕಾರ್ಯದರ್ಶಿ ಚೇಂದೀರ ಎಂ. ಬೋಪಣ್ಣ, ಸದಸ್ಯರಾದ ಮಾಣಿಪಂಡ ಪಾರ್ವತಿ ಜೋಯಪ್ಪ, ಕೇಚೇಟ್ಟಿರ ಕಾಮುಣಿ ಪೂಣಚ್ಚ, ಕೊಳ್ಳಿಮಾಡ ಚಿಪ್ಪಿ ಕಾರ್ಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>