<p><strong>ಸೋಮವಾರಪೇಟೆ:</strong> ತಾಲ್ಲೂಕಿನ ಮುಳ್ಳೂರು ಹಾಗೂ ಜಾಗೇನಹಳ್ಳಿಯ ಸಂಯುಕ್ತ ಆಶ್ರಯದಲ್ಲಿ ಕಾರ್ಗೋಡು ಬಸವೇಶ್ವರ ದೇವಾಲಯದ 4ನೇ ವರ್ಷದ ಮಹಾಶಿವರಾತ್ರಿ ಉತ್ಸವ ಶ್ರದ್ಧಾಭಕ್ತಿಯಿಂದ ಭಾನುವಾರ ನಡೆಯಿತು.</p>.<p>ಬೆಳಗ್ಗಿನಿಂದ ವಿಶೇಷ ಪೂಜೆ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಜರುಗಿತು. ಸಂಜೆ 6.30ಕ್ಕೆ ಪೂಜೆ ಮತ್ತು ಮಹಾ ಮಂಗಳಾರತಿ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಮುಳ್ಳೂರು ಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಯೋಗ ಹಾಗೂ ಕರಾಟೆ ಪ್ರದರ್ಶನವು ಭಕ್ತಾದಿಗಳ ಮೆಚ್ಚುಗೆಗೆ ಪಾತ್ರವಾಯಿತು.</p>.<p>ಶಿವನಿಗಾಗಿ ಒಂದು ರಾತ್ರಿ ಕಾರ್ಯಕ್ರಮದ ಮೂಲಕ ಭಕ್ತಿಗೀತೆಗಳು, ಚಿತ್ರಗೀತೆಗಳು, ಭರತನಾಟ್ಯ ಹಾಗೂ ವಿವಿಧ ನೃತ್ಯ ಪ್ರದರ್ಶನಗಳು ನಡೆಯಿತು. ಹೊಸೂರು ಗ್ರಾಮದಿಂದ ಆಗಮಿಸಿದ ಕಲಾವಿದರು ಚೆಂಡೆ-ಮದ್ದಳೆ ನಾದದ ಮೂಲಕ ಭಕ್ತಿ ಸುಧೆ ಹರಿಸಿದರು.</p>.<p>ದೇವಸ್ಥಾವನ್ನು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ಜಾಗೇನಹಳ್ಳಿ, ಹಿತ್ತಲಕೇರಿ, ನಿಡ್ತ ಹಾಗೂ ಮಾಲಂಬಿ ಗ್ರಾಮಗಳಿಂದ ಭಕ್ತರು ಭಾಗವಹಿಸಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ತಾಲ್ಲೂಕಿನ ಮುಳ್ಳೂರು ಹಾಗೂ ಜಾಗೇನಹಳ್ಳಿಯ ಸಂಯುಕ್ತ ಆಶ್ರಯದಲ್ಲಿ ಕಾರ್ಗೋಡು ಬಸವೇಶ್ವರ ದೇವಾಲಯದ 4ನೇ ವರ್ಷದ ಮಹಾಶಿವರಾತ್ರಿ ಉತ್ಸವ ಶ್ರದ್ಧಾಭಕ್ತಿಯಿಂದ ಭಾನುವಾರ ನಡೆಯಿತು.</p>.<p>ಬೆಳಗ್ಗಿನಿಂದ ವಿಶೇಷ ಪೂಜೆ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಜರುಗಿತು. ಸಂಜೆ 6.30ಕ್ಕೆ ಪೂಜೆ ಮತ್ತು ಮಹಾ ಮಂಗಳಾರತಿ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಮುಳ್ಳೂರು ಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಯೋಗ ಹಾಗೂ ಕರಾಟೆ ಪ್ರದರ್ಶನವು ಭಕ್ತಾದಿಗಳ ಮೆಚ್ಚುಗೆಗೆ ಪಾತ್ರವಾಯಿತು.</p>.<p>ಶಿವನಿಗಾಗಿ ಒಂದು ರಾತ್ರಿ ಕಾರ್ಯಕ್ರಮದ ಮೂಲಕ ಭಕ್ತಿಗೀತೆಗಳು, ಚಿತ್ರಗೀತೆಗಳು, ಭರತನಾಟ್ಯ ಹಾಗೂ ವಿವಿಧ ನೃತ್ಯ ಪ್ರದರ್ಶನಗಳು ನಡೆಯಿತು. ಹೊಸೂರು ಗ್ರಾಮದಿಂದ ಆಗಮಿಸಿದ ಕಲಾವಿದರು ಚೆಂಡೆ-ಮದ್ದಳೆ ನಾದದ ಮೂಲಕ ಭಕ್ತಿ ಸುಧೆ ಹರಿಸಿದರು.</p>.<p>ದೇವಸ್ಥಾವನ್ನು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ಜಾಗೇನಹಳ್ಳಿ, ಹಿತ್ತಲಕೇರಿ, ನಿಡ್ತ ಹಾಗೂ ಮಾಲಂಬಿ ಗ್ರಾಮಗಳಿಂದ ಭಕ್ತರು ಭಾಗವಹಿಸಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>