<p><strong>ಸುಂಟಿಕೊಪ್ಪ: </strong>ಶಿವರಾತ್ರಿ ಪ್ರಯುಕ್ತ ಹೋಬಳಿ ವ್ಯಾಪ್ತಿಯ ಹಲವೆಡೆ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಬುಧವಾರ ರಾತ್ರಿ ನಡೆದವು.</p>.<p>ಕೊಡಗರಹಳ್ಳಿಯ ಬೈತೂರಪ್ಪ ಪೊವ್ಚದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಬೈತೂರಪ್ಪ ಭಜನಾ ಮಂಡಳಿಯಿಂದ ಪೂಜಾ ಕಾರ್ಯಗಳು ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಎಲ್ಲ ಧರ್ಮೀಯರು ಭಾಗವಹಿಸಿದ್ದರು. ಬೈತೂರಪ್ಪ ಭಜನಾ ಮಂಡಳಿ ಸದಸ್ಯರು ಸಂಜೆ 6 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ಭಜನೆ ನಡೆಸಿದರು. ಬೈತೂರಪ್ಪ, ಪೊವ್ಚದಿ ದೇವರಿಗೆ ವಿಶೇಷ ಪೂಜೆ, ಅಲಂಕಾರ , ನೈವೇದ್ಯ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.<br> ಮಕ್ಕಳ, ಭಜನಾ ಮಂಡಳಿಯ ಪುರುಷರ, ಮಹಿಳೆಯರ ನೃತ್ಯರೂಪಕ ಮನಸೂರೆಗೊಂಡಿತು. ಗೀತಗಾಯನಗಳಿಗೆ ಜನ ತಲೆತೂಗಿದರು.</p>.<p>ಕೆದಕಲ್ ಗ್ರಾಮದ ಏಳನೇ ಮೈಲು ಮಹಾದೇವ ಈಶ್ವರ ದೇವಾಲಯಲ್ಲಿ ಬುಧವಾರ ಸಂಜೆಯಿಂದ ಮಹಾಸಂಕಲ್ಪ, ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹ,ನವಗ್ರಹ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ, ಪೂರ್ಣಾಹುತಿ ನಡೆಯಿತು.</p> <p>ಮಹಾದೇವ ಈಶ್ವರ ದೇವರಿಗೆ ದೇವಾಲಯದ ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ನೇತೃತ್ವದಲ್ಲಿ ರುದ್ರಾಭಿಷೇಕ , ಹೂವುಗಳಿಂದ ಅಲಂಕಾರ ಪೂಜೆ ನಡೆಯಿತು. ರಾತ್ರಿ ಬಿಲ್ವಾರ್ಚನೆ, ಭಕ್ತರ ಹರಕೆಯ ಭಾಗವಾಗಿ ದೀಪರಾಧನೆ ನಡೆಯಿತು. ನೂರಾರು ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಸಲ್ಲಿಸಿದರು. ತಡರಾತ್ರಿ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<p>ಕೆದಕಲ್ ಭದ್ರಕಾಳಿ, ನಾಕೂರು ಈಶ್ವರ ದೇವಾಲಯ, ಕಂಬಿಬಾಣೆ ಮ್ಯಾಗಡೂರು ಈಶ್ವರ ದೇವಾಲಯಗಳಲ್ಲೂ ವಿಶೇಷ ಪೂಜೆ, ಆರಾಧನೆ,ಶಿವ ಸ್ಮರಣೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ: </strong>ಶಿವರಾತ್ರಿ ಪ್ರಯುಕ್ತ ಹೋಬಳಿ ವ್ಯಾಪ್ತಿಯ ಹಲವೆಡೆ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಬುಧವಾರ ರಾತ್ರಿ ನಡೆದವು.</p>.<p>ಕೊಡಗರಹಳ್ಳಿಯ ಬೈತೂರಪ್ಪ ಪೊವ್ಚದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಬೈತೂರಪ್ಪ ಭಜನಾ ಮಂಡಳಿಯಿಂದ ಪೂಜಾ ಕಾರ್ಯಗಳು ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಎಲ್ಲ ಧರ್ಮೀಯರು ಭಾಗವಹಿಸಿದ್ದರು. ಬೈತೂರಪ್ಪ ಭಜನಾ ಮಂಡಳಿ ಸದಸ್ಯರು ಸಂಜೆ 6 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ಭಜನೆ ನಡೆಸಿದರು. ಬೈತೂರಪ್ಪ, ಪೊವ್ಚದಿ ದೇವರಿಗೆ ವಿಶೇಷ ಪೂಜೆ, ಅಲಂಕಾರ , ನೈವೇದ್ಯ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.<br> ಮಕ್ಕಳ, ಭಜನಾ ಮಂಡಳಿಯ ಪುರುಷರ, ಮಹಿಳೆಯರ ನೃತ್ಯರೂಪಕ ಮನಸೂರೆಗೊಂಡಿತು. ಗೀತಗಾಯನಗಳಿಗೆ ಜನ ತಲೆತೂಗಿದರು.</p>.<p>ಕೆದಕಲ್ ಗ್ರಾಮದ ಏಳನೇ ಮೈಲು ಮಹಾದೇವ ಈಶ್ವರ ದೇವಾಲಯಲ್ಲಿ ಬುಧವಾರ ಸಂಜೆಯಿಂದ ಮಹಾಸಂಕಲ್ಪ, ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹ,ನವಗ್ರಹ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ, ಪೂರ್ಣಾಹುತಿ ನಡೆಯಿತು.</p> <p>ಮಹಾದೇವ ಈಶ್ವರ ದೇವರಿಗೆ ದೇವಾಲಯದ ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ನೇತೃತ್ವದಲ್ಲಿ ರುದ್ರಾಭಿಷೇಕ , ಹೂವುಗಳಿಂದ ಅಲಂಕಾರ ಪೂಜೆ ನಡೆಯಿತು. ರಾತ್ರಿ ಬಿಲ್ವಾರ್ಚನೆ, ಭಕ್ತರ ಹರಕೆಯ ಭಾಗವಾಗಿ ದೀಪರಾಧನೆ ನಡೆಯಿತು. ನೂರಾರು ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಸಲ್ಲಿಸಿದರು. ತಡರಾತ್ರಿ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<p>ಕೆದಕಲ್ ಭದ್ರಕಾಳಿ, ನಾಕೂರು ಈಶ್ವರ ದೇವಾಲಯ, ಕಂಬಿಬಾಣೆ ಮ್ಯಾಗಡೂರು ಈಶ್ವರ ದೇವಾಲಯಗಳಲ್ಲೂ ವಿಶೇಷ ಪೂಜೆ, ಆರಾಧನೆ,ಶಿವ ಸ್ಮರಣೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>