ಎರಡಂತಸ್ತಿನ ವಿಶಾಲವಾದ ಕಟ್ಟಡದಲ್ಲಿ ಸಂದರ್ಶಕರಿಗೆ ಕೂರಲು ವಿಶಾಲವಾದ ಸ್ಥಳಾವಕಾಶ, ವೈದ್ಯರ ಕೊಠಡಿಗಳು, ಔಷಧಿ ದಾಸ್ತಾನು ಕೊಠಡಿ, ಲ್ಯಾಬ್, ಲೇಬರ್ ಥಿಯೇಟರ್, ಲೇಬರ್ ವಾರ್ಡ್, ಕಣ್ಣು ಪರೀಕ್ಷಾ ಕೊಠಡಿ, ಐಸಿಟಿಸಿ ವಿಭಾಗ, ಎಚ್ಐವಿ ಆಪ್ತ ಸಮಾಲೋಚನೆ ಹಾಗೂ ಪರೀಕ್ಷೆ, ಎಕ್ಸರೇ ಕೊಠಡಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳೂ ಇವೆ. ಆದರೆ, ಮಕ್ಕಳ ತಜ್ಞರು, ಪ್ರಸೂತಿ ತಜ್ಞರು ಮತ್ತು ಅರಿವಳಿಕೆ ತಜ್ಞ ವೈದ್ಯರ ಕೊರತೆ ಇದೆ. ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ವೈದ್ಯರ ನೇಮಕಕ್ಕೆ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರಾದ ಬಿದ್ದಾಟಂಡ ಎಸ್.ತಮ್ಮಯ್ಯ, ಎಂ.ಎ.ಮನ್ಸೂರ್ ಅಲಿ, ಬಾಚಮಂಡ ಲವ ಚಿಣ್ಣಪ್ಪ ಆಗ್ರಹಿಸಿದ್ದಾರೆ.