<p><strong>ಶನಿವಾರಸಂತೆ: </strong>ಒಬ್ಬ ವ್ಯಕ್ತಿ ಜೀವನದಲ್ಲಿ ಬದುಕುವ ರೀತಿ ಮುಖ್ಯವಾಗಿದ್ದು, ಸಂಸ್ಕಾರವಂತ ಬದುಕಿನಿಂದ ಮಾತ್ರ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ತುಮಕೂರು ಸಿದ್ಧಾಗಂಗಾ ಮಠಾಧೀಶ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಸಮೀಪದ ಆಲೂರು–ಸಿದ್ಧಾಪುರ ಗ್ರಾಮದಲ್ಲಿ ನಡೆದ ಶತಾಯುಷಿ ದಿವಂಗತ ಸಿದ್ಧಮಲ್ಲಯ್ಯ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಶತಾಯುಷಿ ಸಿದ್ಧಮಲ್ಲಯ್ಯ ಜನಾನುರಾಗಿಯಾಗಿ, ಸಮಾಜಮುಖಿಯಾಗಿ ಬದುಕು ಸಾಗಿಸಿದವರು. ಅವರ ಒಬ್ಬ ಪುತ್ರ ಅರಮೇರಿ ಕಳಂಚೇರಿ ಮಠದ ಸ್ವಾಮೀಜಿಯಾಗಿ, ಮತ್ತೊಬ್ಬರು ವಿಜ್ಞಾನಿಯಾಗಿ, ಇನ್ನೊಬ್ಬರು ಉತ್ತಮ ಆಡಳಿತಗಾರರಾಗಿ, ಇನ್ನೋರ್ವರು ವಕೀಲರಾಗಿ ಹೀಗೆ 6 ಮಂದಿ ಮಕ್ಕಳು ಸಮಾಜದಲ್ಲಿ ಸೇವೆ ಸಲ್ಲಿಸಲು ಸಮರ್ಪಿಸಿದ್ದಾರೆ. ಸಿದ್ಧಮಲ್ಲಯ್ಯ ಅವರು ತಮ್ಮ ಜೀವಿತವಧಿಯ ನೂರು ವರ್ಷಗಳಲ್ಲಿ ಜಂಗಮರಾಗಿ ಶರಣತತ್ವಗಳನ್ನು ಅಳವಡಿಸಿಕೊಂಡು ಸಾರ್ಥಕ ಬದುಕು ನಡೆಸಿದವರು ಎಂದರು.</p>.<p>ಇಂದು ಸಮಾಜ ಕಲುಷಿತಗೊಂಡಿದ್ದು ಅದನ್ನು ಆಧ್ಯಾತ್ಮಿಕತೆಯ ಮೂಲಕ ಶುದ್ಧಿಗೊಳಿಸಬೇಕು. ಮಠಮಾನ್ಯ, ದೇವಾಲಯಗಳಿಗೆ ಹೋಗುವ ಮೂಲಕ ಮನಃಶಾಂತಿ, ನೆಮ್ಮದಿ ಗಳಿಸಬಹುದು ಎಂದು ಸ್ವಾಮೀಜಿ ಕರೆ ನೀಡಿದರು.</p>.<p>ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠಾಧೀಶ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ವಿವಿಧ ಮಠಾಧೀಶರು, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಶಿವಪ್ಪ, ಗ್ರಾಮ ಮುಖಂಡ ಕೋಳಿಬೈಲ್ ಬೋಜಪ್ಪ, ಹಿರಿಯ ವಕೀಲ ಚೆನ್ನಬಸವಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ: </strong>ಒಬ್ಬ ವ್ಯಕ್ತಿ ಜೀವನದಲ್ಲಿ ಬದುಕುವ ರೀತಿ ಮುಖ್ಯವಾಗಿದ್ದು, ಸಂಸ್ಕಾರವಂತ ಬದುಕಿನಿಂದ ಮಾತ್ರ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ತುಮಕೂರು ಸಿದ್ಧಾಗಂಗಾ ಮಠಾಧೀಶ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಸಮೀಪದ ಆಲೂರು–ಸಿದ್ಧಾಪುರ ಗ್ರಾಮದಲ್ಲಿ ನಡೆದ ಶತಾಯುಷಿ ದಿವಂಗತ ಸಿದ್ಧಮಲ್ಲಯ್ಯ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಶತಾಯುಷಿ ಸಿದ್ಧಮಲ್ಲಯ್ಯ ಜನಾನುರಾಗಿಯಾಗಿ, ಸಮಾಜಮುಖಿಯಾಗಿ ಬದುಕು ಸಾಗಿಸಿದವರು. ಅವರ ಒಬ್ಬ ಪುತ್ರ ಅರಮೇರಿ ಕಳಂಚೇರಿ ಮಠದ ಸ್ವಾಮೀಜಿಯಾಗಿ, ಮತ್ತೊಬ್ಬರು ವಿಜ್ಞಾನಿಯಾಗಿ, ಇನ್ನೊಬ್ಬರು ಉತ್ತಮ ಆಡಳಿತಗಾರರಾಗಿ, ಇನ್ನೋರ್ವರು ವಕೀಲರಾಗಿ ಹೀಗೆ 6 ಮಂದಿ ಮಕ್ಕಳು ಸಮಾಜದಲ್ಲಿ ಸೇವೆ ಸಲ್ಲಿಸಲು ಸಮರ್ಪಿಸಿದ್ದಾರೆ. ಸಿದ್ಧಮಲ್ಲಯ್ಯ ಅವರು ತಮ್ಮ ಜೀವಿತವಧಿಯ ನೂರು ವರ್ಷಗಳಲ್ಲಿ ಜಂಗಮರಾಗಿ ಶರಣತತ್ವಗಳನ್ನು ಅಳವಡಿಸಿಕೊಂಡು ಸಾರ್ಥಕ ಬದುಕು ನಡೆಸಿದವರು ಎಂದರು.</p>.<p>ಇಂದು ಸಮಾಜ ಕಲುಷಿತಗೊಂಡಿದ್ದು ಅದನ್ನು ಆಧ್ಯಾತ್ಮಿಕತೆಯ ಮೂಲಕ ಶುದ್ಧಿಗೊಳಿಸಬೇಕು. ಮಠಮಾನ್ಯ, ದೇವಾಲಯಗಳಿಗೆ ಹೋಗುವ ಮೂಲಕ ಮನಃಶಾಂತಿ, ನೆಮ್ಮದಿ ಗಳಿಸಬಹುದು ಎಂದು ಸ್ವಾಮೀಜಿ ಕರೆ ನೀಡಿದರು.</p>.<p>ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠಾಧೀಶ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ವಿವಿಧ ಮಠಾಧೀಶರು, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಶಿವಪ್ಪ, ಗ್ರಾಮ ಮುಖಂಡ ಕೋಳಿಬೈಲ್ ಬೋಜಪ್ಪ, ಹಿರಿಯ ವಕೀಲ ಚೆನ್ನಬಸವಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>