<p><strong>ಸಿದ್ದಾಪುರ</strong>: ‘ಸಿದ್ದಾಪುರ- ವಿರಾಜಪೇಟೆ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಸಿದ್ದಾಪುರ ಬಂದ್ ಕೈಬಿಡಲಾಗಿದೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ವಿ.ಕೆ.ಗಿರೀಶ್ ತಿಳಿಸಿದ್ದಾರೆ.</p><p>‘ಕಳೆದ 11 ತಿಂಗಳಿಂದ ಸಿದ್ದಾಪುರ- ವಿರಾಜಪೇಟೆ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೆಸರಿನಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿತ್ತು. ಹಲವು ಬಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಅ.23ರಂದು ಸಿದ್ದಾಪುರ ಬಂದ್ಗೆ ಕರೆ ನೀಡಲಾಗಿತ್ತು. ಆದರೆ ಕಾಮಗಾರಿ ತ್ವರಿತಗತಿಯಲ್ಲಿ ಮಾಡುತ್ತಿದ್ದು, ಲೊಕೋಪಯೋಗಿ ಇಲಾಖೆಯ ಎ.ಇ.ಇ ಸತೀಶ್ ಸ್ಥಳ ಪರಿಶೀಲಿಸಿ ಶ್ರೀಘ್ರದಲ್ಲಿ ಶೀಘ್ರ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.</p><p>ಈ ಹಿನ್ನೆಲೆಯಲ್ಲಿ ಬಂದ್ ಕೈಬಿಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಮನವಿ ಮಾಡಲಾಗಿದೆ.</p><p>ಬಂದ್ ಬಗ್ಗೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ.ಪ್ರತೀಶ್ ಸಾರ್ವಜನಿಕರ ಮನವೊಲಿಸಿ, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದರು. ಈ ಸಂದರ್ಭ ಪ್ರಮುಖರಾದ ಎ.ಎಸ್.ಮುಸ್ತಫಾ, ನವಾಜ್, ವಸೀಂ, ರಿಯಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ‘ಸಿದ್ದಾಪುರ- ವಿರಾಜಪೇಟೆ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಸಿದ್ದಾಪುರ ಬಂದ್ ಕೈಬಿಡಲಾಗಿದೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ವಿ.ಕೆ.ಗಿರೀಶ್ ತಿಳಿಸಿದ್ದಾರೆ.</p><p>‘ಕಳೆದ 11 ತಿಂಗಳಿಂದ ಸಿದ್ದಾಪುರ- ವಿರಾಜಪೇಟೆ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೆಸರಿನಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿತ್ತು. ಹಲವು ಬಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಅ.23ರಂದು ಸಿದ್ದಾಪುರ ಬಂದ್ಗೆ ಕರೆ ನೀಡಲಾಗಿತ್ತು. ಆದರೆ ಕಾಮಗಾರಿ ತ್ವರಿತಗತಿಯಲ್ಲಿ ಮಾಡುತ್ತಿದ್ದು, ಲೊಕೋಪಯೋಗಿ ಇಲಾಖೆಯ ಎ.ಇ.ಇ ಸತೀಶ್ ಸ್ಥಳ ಪರಿಶೀಲಿಸಿ ಶ್ರೀಘ್ರದಲ್ಲಿ ಶೀಘ್ರ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.</p><p>ಈ ಹಿನ್ನೆಲೆಯಲ್ಲಿ ಬಂದ್ ಕೈಬಿಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಮನವಿ ಮಾಡಲಾಗಿದೆ.</p><p>ಬಂದ್ ಬಗ್ಗೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ.ಪ್ರತೀಶ್ ಸಾರ್ವಜನಿಕರ ಮನವೊಲಿಸಿ, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದರು. ಈ ಸಂದರ್ಭ ಪ್ರಮುಖರಾದ ಎ.ಎಸ್.ಮುಸ್ತಫಾ, ನವಾಜ್, ವಸೀಂ, ರಿಯಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>