ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಟ್ವೀಟ್‌ ಭೇದಿ; ಪ್ರತಾಪಸಿಂಹ ವ್ಯಂಗ್ಯ

Last Updated 15 ಜೂನ್ 2022, 4:12 IST
ಅಕ್ಷರ ಗಾತ್ರ

ಸೋಮವಾರಪೇಟೆ: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್‌ ಭೇದಿಗೆ ಉತ್ತರ ಕೊಡುವುದಿಲ್ಲ’ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.

‘1942ರ ಕ್ವಿಟ್ ಇಂಡಿಯಾ ಚಳವಳಿ ಸಂದರ್ಭಆರ್‌ಎಸ್‌ಎಸ್ ಒಳಗೊಳಗೇ ಬ್ರಿಟಿಷರಿಗೆ ಬೆಂಬಲ ನೀಡಿತ್ತು’ ಎಂಬ ಸಿದ್ದರಾಮಯ್ಯ ಅವರ ಟ್ವೀಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ‘ಅದು ಟ್ವೀಟ್ ಅಲ್ಲ. ಅದೊಂದು ಬಗೆಯ ಭೇದಿ. ಆಧಾರ ಇಲ್ಲದ ಅವರ ಟ್ವೀಟ್‌ಗೆ ಉತ್ತರ ಕೊಡುವುದಿಲ್ಲ’ ಎಂದರು.

‘ಹಿಂದೆ ನರೇಂದ್ರ ಮೋದಿ ಅವರನ್ನು ಎಸ್‌ಐಟಿ 9 ಗಂಟೆಗಳ ಕಾಲ ವಿಚಾರಣೆ ಮಾಡಿತ್ತು. ಅಮಿತ್‌ಷಾ ಅವರನ್ನೂ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಸಿಲುಕಿಸಲು ಯತ್ನಿಸಿತ್ತು. ಈಗ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿ ಕೊಳ್ಳಲಾಗುತ್ತಿದೆ ಎಂದು ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ.ಭ್ರಷ್ಟಾಚಾರ ಪ್ರಜಾಪ್ರಭುತ್ವದ ಅಂಗವಾಗಿದೆ ಎಂದು ಕಾಂಗ್ರೆಸ್ ಪಕ್ಷ ಭಾವಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT