ಮಡಿಕೇರಿಯಲ್ಲಿ ದಶಮಂಟಪಗಳ ಶೋಭಾಯಾತ್ರೆ (ಸಂಗ್ರಹ ಚಿತ್ರ)
ಮಡಿಕೇರಿ ದಸರಾ ಶೋಭಾಯಾತ್ರೆ ಮಂಟಪ (ಸಂಗ್ರಹ ಚಿತ್ರ)
ಮಂಟಪದ ಶೋಭಾಯಾತ್ರೆ (ಸಂಗ್ರಹ ಚಿತ್ರ)

ನಿಜ ಬರ ಬಂದಿದೆ. ಸರ್ಕಾರ ಅನೇಕ ಗ್ಯಾರಂಟಿಗಳನ್ನೂ ನೀಡಿದೆ. ಅನುದಾನ ಕೊಡುವುದರಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಮಾಡಲಿ. ಅದನ್ನು ಬಿಟ್ಟು ಸರಳ ಎಂದು ಮೊದಲೇ ಘೋಷಿಸಬಾರದು. ಯಾವಾಗ ಸರಳ ಎಂದು ಸರ್ಕಾರವೇ ಘೋಷಣೆ ಮಾಡುತ್ತದೋ ಆಗ ಇಲ್ಲಿಗೆ ಬರಲು ಪ್ರವಾಸಿಗರು ನಿರಾಸಕ್ತಿ ವಹಿಸುತ್ತಾರೆ. ಆರ್ಥಿಕ ಹಿಂಜರಿತ ಉಂಟಾಗುತ್ತದೆ. ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ.
- ಬಿ.ಆರ್.ನಾಗೇಂದ್ರ ಪ್ರಸಾದ್, ಕೊಡಗು ಜಿಲ್ಲಾ ಹೋಟೆಲ್ ರೆಸಾರ್ಟ್ ಮತ್ತು ರೆಸ್ಟೋರೆಂಟ್ ಸಂಘದ ಅಧ್ಯಕ್ಷ.
ಇದುವರೆಗೂ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೋಂಸ್ಟೇಗಳ ಬುಕಿಂಗ್ಗಳು ಬಿರುಸಿನಿಂದ ನಡೆದಿತ್ತು. ಆದರೆ ಈಗ ಸರ್ಕಾರ ಸರಳ ಎಂಬ ಪದ ಪ್ರಯೋಗ ಮಾಡಿರುವುದರಿಂದ ಮುಂದೇನಾಗುವುದೋ ಎಂಬ ಆತಂಕ ಉಂಟಾಗಿದೆ. ಸರ್ಕಾರ ನಿಜಕ್ಕೂ ಈ ಪದ ಪ್ರಯೋಗ ಮಾಡಬಾರದಿತ್ತು. ಹಣದ ಕೊರತೆ ಇದ್ದರೆ ಖಾಸಗಿ ಸಹಭಾಗಿತ್ವದಲ್ಲಿ ದಸರೆಯನ್ನು ಆಚರಿಸಿದ್ದರೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ ವಾಣಿಜ್ಯ ವಹಿವಾಟುಗಳಿಗೆ ತೊಂದರೆಯಾಗುತ್ತಿರಲಿಲ್ಲ.
- ನವೀನ್ ಅಂಬೆಕಲ್, ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಪ್ರಧಾನ ಕಾರ್ಯದರ್ಶಿ.