<p><strong>ಕುಶಾಲನಗರ</strong>: ಭಾಷೆ ಮತ್ತು ಸಂವಹನ ಕ್ರಿಯೆಯು 21ನೇ ಶತಮಾನದ ಬಹುದೊಡ್ಡ ಶಕ್ತಿ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಎನ್.ಕೆ. ಸುದರ್ಶನ್ ಕುಮಾರ್ ಹೇಳಿದರು.</p>.<p>ಸಮೀಪದ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿಗಳ ಕನ್ನಡ ಸೌರಭ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಉದ್ಯೋಗ ನಿಮಿತ್ತ ಕ್ರಿಯಾ ಯೋಜನೆ ಸಿದ್ಧಪಡಿಸುವ, ಕೌಶಲಾಧಾರಿತ ಕಲಿಕೆಗೆ ಒತ್ತು ಕೊಡುವ ವಾತಾವರಣ ನಿರ್ಮಿಸಿಕೊಳ್ಳುವುದು, ಹೊಸ ವಿಶ್ವವಿದ್ಯಾಲಯ ವೇದಿಕೆಗಳನ್ನು ಸಮರ್ಥವಾಗಿ ಬಳಸಿಕೊಂಡು ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರಾಚೀನ ಕಾಲದ ಪ್ರಸಿದ್ಧ ಭಾವಚಿತ್ರಗಳನ್ನು ವಿಭಾಗಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಬಹು ಅರ್ಥಪೂರ್ಣವಾಗಿ ಕನ್ನಡ ಸೌರಭ ಸಂಘದ ಉದ್ಘಾಟನೆ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪ್ರಾಧ್ಯಾಪಕರಾದ ಸುವರ್ಣ ಕಂಬಿ, ಮಂಜುನಾಥ್, ಮಮತಾ ಅವರು ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಉಪನ್ಯಾಸಕರಾದ ಬಿ.ಆರ್.ರಮೇಶ್, ಜ಼ಮೀರ್ ಅಹಮದ್, ಕನ್ನಡ ವಿಭಾಗದ ಮತ್ತು ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಕನ್ನಡ ವಿಭಾಗದ ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳು ಕನ್ನಡ ವಿಭಾಗಕ್ಕೆ ಪ್ರಾಚೀನ ಕವಿಗಳಾದ ಪಂಪ, ಪೊನ್ನ, ರನ್ನ ಮತ್ತು ಜನ್ನರ ಭಾವಚಿತ್ರಗಳನ್ನು ಕೊಡುಗೆಯಾಗಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಭಾಷೆ ಮತ್ತು ಸಂವಹನ ಕ್ರಿಯೆಯು 21ನೇ ಶತಮಾನದ ಬಹುದೊಡ್ಡ ಶಕ್ತಿ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಎನ್.ಕೆ. ಸುದರ್ಶನ್ ಕುಮಾರ್ ಹೇಳಿದರು.</p>.<p>ಸಮೀಪದ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿಗಳ ಕನ್ನಡ ಸೌರಭ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಉದ್ಯೋಗ ನಿಮಿತ್ತ ಕ್ರಿಯಾ ಯೋಜನೆ ಸಿದ್ಧಪಡಿಸುವ, ಕೌಶಲಾಧಾರಿತ ಕಲಿಕೆಗೆ ಒತ್ತು ಕೊಡುವ ವಾತಾವರಣ ನಿರ್ಮಿಸಿಕೊಳ್ಳುವುದು, ಹೊಸ ವಿಶ್ವವಿದ್ಯಾಲಯ ವೇದಿಕೆಗಳನ್ನು ಸಮರ್ಥವಾಗಿ ಬಳಸಿಕೊಂಡು ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರಾಚೀನ ಕಾಲದ ಪ್ರಸಿದ್ಧ ಭಾವಚಿತ್ರಗಳನ್ನು ವಿಭಾಗಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಬಹು ಅರ್ಥಪೂರ್ಣವಾಗಿ ಕನ್ನಡ ಸೌರಭ ಸಂಘದ ಉದ್ಘಾಟನೆ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪ್ರಾಧ್ಯಾಪಕರಾದ ಸುವರ್ಣ ಕಂಬಿ, ಮಂಜುನಾಥ್, ಮಮತಾ ಅವರು ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಉಪನ್ಯಾಸಕರಾದ ಬಿ.ಆರ್.ರಮೇಶ್, ಜ಼ಮೀರ್ ಅಹಮದ್, ಕನ್ನಡ ವಿಭಾಗದ ಮತ್ತು ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಕನ್ನಡ ವಿಭಾಗದ ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳು ಕನ್ನಡ ವಿಭಾಗಕ್ಕೆ ಪ್ರಾಚೀನ ಕವಿಗಳಾದ ಪಂಪ, ಪೊನ್ನ, ರನ್ನ ಮತ್ತು ಜನ್ನರ ಭಾವಚಿತ್ರಗಳನ್ನು ಕೊಡುಗೆಯಾಗಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>