ಕಂಪ್ಯೂಟರ್ ಎಂಜಿನಿಯರ್ ಆಗಿರುವ ಮಹಿಳೆ ಬೆಂಗಳೂರಿನಲ್ಲಿ ಉದ್ಯೋಗ ನಿರ್ವಹಿಸುವುದಾಗಿ ಹಾಗೂ ಹೆಚ್ಚಿನ ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ. ಆದ್ದರಿಂದ ಅಲ್ಲಿಯೇ ಅವರಿಗೆ ರಕ್ಷಣೆ ನೀಡಬೇಕು ಎಂದು ರಾಜ್ಯ ಪೊಲೀಸರಿಗೆ ನ್ಯಾಯಪೀಠ ಸೂಚಿಸಿದೆ.ಮಹಿಳೆ ರಾಜ್ಯಕ್ಕೆ ವಾಪಸಾಗು ವುದಾಗಿ ಹೇಳಿದ್ದರಿಂದ, ಈತನಕ ಪ್ರಕರಣವನ್ನು ನಿರ್ವಹಿಸುತ್ತಿದ್ದ ದೆಹಲಿ ಪೊಲೀಸರು ಹಾಗೂ ರಕ್ಷಣೆ ಒದಗಿಸುತ್ತಿದ್ದ ದೆಹಲಿ ಮಹಿಳಾ ಆಯೋಗವನ್ನು ಸುಪ್ರೀಂ ಕೋರ್ಟ್ ಆ ಹೊಣೆಯಿಂದ ಮುಕ್ತಿಗೊಳಿಸಿದೆ.