ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ: ಎರಡು ತಲೆ ಹಾವು ಮಾರಾಟಕ್ಕೆ ಯತ್ನ, ಬಂಧನ

Last Updated 18 ಸೆಪ್ಟೆಂಬರ್ 2020, 14:23 IST
ಅಕ್ಷರ ಗಾತ್ರ

ವಿರಾಜಪೇಟೆ/ಗೋಣಿಕೊಪ್ಪಲು: ಸಮೀಪದ ಆನಂದಪುರದ ಬಳಿ ಬುಧವಾರ ರಾತ್ರಿ ಎರಡು ತಲೆ ಹಾವನ್ನು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ.

ಮೈಸೂರಿನ ಶಾಂತಿನಗರ ನಿವಾಸಿ ಸೈಯದ್ ಮೋಮಿನ್ ಬಂಧಿತ ಆರೋಪಿ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯ ನಲ್ಲೂರಿನಿಂದ ತಂದ ಹಾವನ್ನು ಸಮೀಪದ ಆನಂದಪುರದ ತಂಗುದಾಣದ ಬಳಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.

ಆರೋಪಿಯಿಂದ ನಾಲ್ಕು ಅಡಿ ಉದ್ದದ ಹಾವನ್ನು ವಶಪಡಿಸಿಕೊಂಡಿದ್ದಾರೆ. ಸೈಯದ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧೀಕ್ಷಕ ಸುರೇಶ್ ಬಾಬು ಮಾರ್ಗದರ್ಶನದಲ್ಲಿ, ಎಸ್ಐ ಸಿ.ಯು.ಸವಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೆ.ಬಿ.ಸೋಮಣ್ಣ, ಟಿ.ಪಿ.ಮಂಜುನಾಥ್, ಎಂ.ಬಿ.ಗಣೇಶ್, ಪಿ.ಬಿ.ಮೊಣ್ಣಪ್ಪ ಹಾಗೂ ಸಿ.ಎಂ. ರೇವಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT