<p><strong>ಮಡಿಕೇರಿ:</strong> ‘ನಾವೂ ಉತ್ತಮ ಮಾರ್ಗದಲ್ಲಿ ಬಾಳಬೇಕು, ಇತರರನ್ನೂ ಉತ್ತಮ ಮಾರ್ಗದಲ್ಲಿ ಬಾಳಲು ಅವಕಾಶ ಮಾಡಿಕೊಡಬೇಕು’ ಎಂದು ಹೊನ್ನಾವರದ ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಸಭಾ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಕರೆ ನೀಡಿದರು.</p>.<p>ಇಲ್ಲಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ದೈವಜ್ಞ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಾತಿ, ಮತ, ಪಂಥ ಪಂಗಡದ ಭೇದವಿಲ್ಲದೆ ಎಲ್ಲರೂ ಸತ್ಪ್ರಜೆಗಳಾಗಿ ಬಾಳುವಂತೆ ಮಾದರಿಯಾಗಿರೋಣ’ ಎಂದು ಹೇಳಿದರು.</p>.<p>‘ಹಿಂದೆ ದೈವಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ನಮ್ಮ ಹಿರಿಯರು ನಂತರ ಕಾಲಘಟ್ಟಗಳಲ್ಲಿ ಚಿನ್ನಾಭರಣ ತಯಾರಿಸುವ ಕಾಯಕ ಮಾಡುತ್ತಾ ದೇಶದೆಲ್ಲೆಡೆ ನೆಲೆಸಿದರು’ ಎಂದು ಅವರು ವಿವರಿಸಿದರು.</p>.<p>‘ಎಲ್ಲ ಸಮಯಕ್ಕೂ ನಮ್ಮ ಹಿರಿಯರಿಗೆ ಕೃತಜ್ಞತೆಯಿಂದ ಹಾಗೂ ಗೌರವದಿಂದ ಬದುಕಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಹಾಗೂ ಸುಂಟಿಕೊಪ್ಪದ ಸಮಾಜದ ಬಾಂಧವರು ಒಗ್ಗೂಡಿ ಆಯೋಜಿಸಿರುವ ಈ ಕಾರ್ಯಕ್ರಮ ಅವಿಸ್ಮರಣೀಯ ಮಾತ್ರವಲ್ಲ, ಇದು ಇಡೀ ರಾಜ್ಯಕ್ಕೆ ಮಾದರಿ ಎಂದು ಶ್ಲಾಘಿಸಿದರು.</p>.<p>ನಗರದ ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಕಿರಿಯ ಸ್ವಾಮೀಜಿ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಹಾಗೂ ಭಕ್ತರೊಡನೆ ಕಳೆಯಲು ಸಾಧ್ಯ ಆಗಿದ್ದು ಮನಸ್ಸಿಗೆ ಅತೀವ ಆನಂದಗೊಂಡಿರುವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ನಾವೂ ಉತ್ತಮ ಮಾರ್ಗದಲ್ಲಿ ಬಾಳಬೇಕು, ಇತರರನ್ನೂ ಉತ್ತಮ ಮಾರ್ಗದಲ್ಲಿ ಬಾಳಲು ಅವಕಾಶ ಮಾಡಿಕೊಡಬೇಕು’ ಎಂದು ಹೊನ್ನಾವರದ ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಸಭಾ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಕರೆ ನೀಡಿದರು.</p>.<p>ಇಲ್ಲಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ದೈವಜ್ಞ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಾತಿ, ಮತ, ಪಂಥ ಪಂಗಡದ ಭೇದವಿಲ್ಲದೆ ಎಲ್ಲರೂ ಸತ್ಪ್ರಜೆಗಳಾಗಿ ಬಾಳುವಂತೆ ಮಾದರಿಯಾಗಿರೋಣ’ ಎಂದು ಹೇಳಿದರು.</p>.<p>‘ಹಿಂದೆ ದೈವಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ನಮ್ಮ ಹಿರಿಯರು ನಂತರ ಕಾಲಘಟ್ಟಗಳಲ್ಲಿ ಚಿನ್ನಾಭರಣ ತಯಾರಿಸುವ ಕಾಯಕ ಮಾಡುತ್ತಾ ದೇಶದೆಲ್ಲೆಡೆ ನೆಲೆಸಿದರು’ ಎಂದು ಅವರು ವಿವರಿಸಿದರು.</p>.<p>‘ಎಲ್ಲ ಸಮಯಕ್ಕೂ ನಮ್ಮ ಹಿರಿಯರಿಗೆ ಕೃತಜ್ಞತೆಯಿಂದ ಹಾಗೂ ಗೌರವದಿಂದ ಬದುಕಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಹಾಗೂ ಸುಂಟಿಕೊಪ್ಪದ ಸಮಾಜದ ಬಾಂಧವರು ಒಗ್ಗೂಡಿ ಆಯೋಜಿಸಿರುವ ಈ ಕಾರ್ಯಕ್ರಮ ಅವಿಸ್ಮರಣೀಯ ಮಾತ್ರವಲ್ಲ, ಇದು ಇಡೀ ರಾಜ್ಯಕ್ಕೆ ಮಾದರಿ ಎಂದು ಶ್ಲಾಘಿಸಿದರು.</p>.<p>ನಗರದ ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಕಿರಿಯ ಸ್ವಾಮೀಜಿ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಹಾಗೂ ಭಕ್ತರೊಡನೆ ಕಳೆಯಲು ಸಾಧ್ಯ ಆಗಿದ್ದು ಮನಸ್ಸಿಗೆ ಅತೀವ ಆನಂದಗೊಂಡಿರುವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>