<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಮನೆಗಳು 1,86,005. ಮತ್ತು 62 ಮೇಲ್ವಿಚಾರಕರು, 25 ಮಾಸ್ಟರ್ ಟ್ರೈನರ್ಸ್ಗಳು ಹಾಗೂ 1,240 ಗಣತಿದಾರರು ಈ ಕುಟುಂಬಗಳು ಹಾಗೂ ವಿದ್ಯುತ್ ಸಂಪರ್ಕ ಪಡೆಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಸಲು ಸೆ. 22ರಿಂದ ರಸ್ತೆಗಿಳಿಯಲಿದ್ದಾರೆ.</p>.<p>ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಪ್ರಕ್ರಿಯೆಯ ಅಂಗವಾಗಿ ಸೆ. 22ರಿಂದ ಅ. 7ರವರೆಗೆ ಸಮೀಕ್ಷೆ ನಡೆಯಲಿದೆ.</p>.<p>ಇದಕ್ಕಾಗಿ ಈಗಾಗಲೇ ಸೆಸ್ಕ್ ತಾನು ನೀಡಿರುವ ವಿದ್ಯುತ್ ಸಂಪರ್ಕದ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ನಡೆಸುತ್ತಿದೆ. ನಂತರ, ಇವುಗಳನ್ನು ಬ್ಲಾಕ್ಗಳನ್ನಾಗಿ ವಿಂಗಡಿಸಿ ಗಣತಿದಾರರಿಗೆ ಹಂಚಿಕೆ ಮಾಡಲಾಗುತ್ತದೆ. ದಸರೆ ರಜೆಯ ಸಮಯದಲ್ಲಿ ಈ ಗಣತಿ ಕಾರ್ಯ ನಡೆಯಲಿದೆ.</p>.<p>ಜಿಲ್ಲೆಯಲ್ಲಿ ಇದಕ್ಕಾಗಿ ನಡೆದಿರುವ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಂಗಳವಾರ ತಮ್ಮ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು. ಜೊತೆಗೆ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಿದರು.</p>.<p>ಮುಖ್ಯವಾಗಿ, ‘ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕಿದೆ’ ಎಂದ ಅವರು, ‘ಯಾವುದೇ ಕುಟುಂಬಗಳೂ ಈ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನವನ್ನೂ ನೀಡಿದರು.</p>.<p>ಇದಕ್ಕಾಗಿ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ವಿದ್ಯುತ್ ಬಿಲ್ಲಿನ ಆರ್ಆರ್ ಸಂಖ್ಯೆ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕಿದೆ. ಜೊತೆಗೆ, ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೂ ಸಹ ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರ ‘ಜಿಯೊ ಮ್ಯಾಪಿಂಗ್’ ಮಾಡಬೇಕಿದೆ ಎಂದು ಹೇಳಿದರು.</p>.<p>ಇದರಿಂದ ಸಮೀಕ್ಷೆ ವ್ಯಾಪ್ತಿಯಿಂದ ಯಾರೂ ಹೊರಗುಳಿಯುವುದಿಲ್ಲ. ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳ ವಿದ್ಯುತ್ ಮೀಟರ್ ರೀಡರ್ಗಳಿಂದ ಕುಟುಂಬಗಳ ಪಟ್ಟಿ ಮಾಡಿ, ಈ ಕುರಿತು ಮನೆಗಳಿಗೆ ‘ಜಿಯೊ ಟ್ಯಾಗ್’ಗಾಗಿ ಸ್ಟಿಕ್ಕರ್ಗಳನ್ನು ಅಳವಡಿಸುವ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ಅವರು ತಿಳಿಸಿದರು.</p>.<p>ಜಿಲ್ಲೆಯಲ್ಲಿ ವಿದ್ಯುತ್ ಮೀಟರ್ ರೀಡರ್ ಸಿಬ್ಬಂದಿಯು ಆರ್ಆರ್ ನಂಬರ್ ಹೊಂದಿರುವ ಕುಟುಂಬಗಳ ಪಟ್ಟಿ ಮಾಡಲಿದ್ದಾರೆ. ಆ ದಿಸೆಯಲ್ಲಿ ಸಮೀಕ್ಷೆ ಕಾರ್ಯ ಮುಗಿಯುವವರೆಗೂ ತಮ್ಮ ಮನೆಗಳಿಗೆ ಅಂಟಿಸಲಾದ ಜಿಯೊ ಟ್ಯಾಗ್ ಸ್ಟಿಕ್ಕರ್ ಅನ್ನು ತೆಗೆಯಬಾರದು ಎಂದು ಅವರು ಕೋರಿದರು.</p>.<p>ಜಿಲ್ಲಾ ಹಂತದಲ್ಲಿ ಆಯ್ಕೆ ಮಾಡಿದ ಮಾಸ್ಟರ್ ಟ್ರೈನರ್ಸ್ಗಳಿಗೆ ತರಬೇತಿ ನೀಡಲಾಗುವುದು. ತರಬೇತಿಯನ್ನು ಹೊಂದಿದ ಮಾಸ್ಟರ್ ಟ್ರೈನರ್ಸ್ಗಳಿಂದ ಮೇಲ್ವಿಚಾರಕರು ಮತ್ತು ಗಣತಿದಾರರಿಗೆ ತರಬೇತಿ ನೀಡಲಾಗುತ್ತದೆ ಎಂದರು.</p>.<p>ಸಮೀಕ್ಷೆಯ ಮೇಲ್ವಿಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕುಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಿದ್ದು, ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಎಸ್.ದೀಪಕ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ಎಚ್.ಆರ್.ರಮೇಶ್, ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಕವಿತಾ, ವ್ಯವಸ್ಥಾಪಕ ಶಿವಶಂಕರ, ತಾಲ್ಲೂಕು ಅಧಿಕಾರಿಗಳಾದ ಮೋಹನ್ ಕುಮಾರ್, ಶ್ರೀಕಾಂತ್, ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನಾರಾಯಣ ಭಾಗವಹಿಸಿದ್ದರು.</p>.<blockquote>ಸೆ. 22ರಿಂದ ಅ. 7ರವರೆಗೆ ನಡೆಯಲಿದೆ ಸಮೀಕ್ಷೆ | ಈಗ ನಡೆಯುತ್ತಿದೆ ಮನೆಮನೆಗೆ ಸ್ಟಿಕ್ಕರ್ ಹಾಕುವ ಕಾರ್ಯ | ಸಮೀಕ್ಷೆ ಮುಗಿಯುವವರೆಗೂ ಸ್ಟಿಕ್ಕರ್ ತೆಗೆದು ಹಾಕದಂತೆ ಮನವಿ</blockquote>.<div><blockquote>ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಂಬಂಧ ಸರ್ಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.</blockquote><span class="attribution">ಆನಂದ್ ಪ್ರಕಾಶ್ ಮೀನಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ</span></div>.<p><strong>ಮಾಹಿತಿ ನೀಡಲು ಮನವಿ</strong> </p><p>ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಾತಿಗಳ (ಹಿಂದುಳಿದ ವರ್ಗಗಳು ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿ ಸಂಬಂಧ ಯಾವುದೇ ಜಾತಿ ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ ಅಂತಹ ಅಂಶಗಳ ಬಗ್ಗೆ ಸಲಹೆ ಸೂಚನೆ ನೀಡಲು ಕೋರಲಾಗಿದೆ. ಸಾರ್ವಜನಿಕರು ತಮ್ಮ ಸಲಹೆ ಸೂಚನೆ ಮನವಿಗಳನ್ನು kscbsd@gmail.com ವಿಳಾಸಕ್ಕೆ ಕಳುಹಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್.ದೀಪಕ್ ಅವರು ತಿಳಿಸಿದ್ದಾರೆ.</p>.<p><strong>ಸಮೀಕ್ಷೆಗಾಗಿಯೇ ವಿಶೇಷ ಆ್ಯಪ್</strong> </p><p>ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಸಮೀಕ್ಷೆಗಾಗಿ ವಿಶೇಷ ಆ್ಯಪ್ ನಿಗದಿಪಡಿಸಲಾಗಿದೆ. ಸುಮಾರು 65 ಪ್ರಶ್ನಾವಳಿಗಳು ಇದ್ದು ಕುಟುಂಬಗಳಿಂದ ಮಾಹಿತಿ ಪಡೆದು ಆ ಆ್ಯಪ್ ಮೂಲಕವೇ ಸಮೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಪ್ರತೀ ಸಮೀಕ್ಷೆದಾರರು ಎಲ್ಲಾ ಮನೆಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಮನೆಗಳು 1,86,005. ಮತ್ತು 62 ಮೇಲ್ವಿಚಾರಕರು, 25 ಮಾಸ್ಟರ್ ಟ್ರೈನರ್ಸ್ಗಳು ಹಾಗೂ 1,240 ಗಣತಿದಾರರು ಈ ಕುಟುಂಬಗಳು ಹಾಗೂ ವಿದ್ಯುತ್ ಸಂಪರ್ಕ ಪಡೆಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಸಲು ಸೆ. 22ರಿಂದ ರಸ್ತೆಗಿಳಿಯಲಿದ್ದಾರೆ.</p>.<p>ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಪ್ರಕ್ರಿಯೆಯ ಅಂಗವಾಗಿ ಸೆ. 22ರಿಂದ ಅ. 7ರವರೆಗೆ ಸಮೀಕ್ಷೆ ನಡೆಯಲಿದೆ.</p>.<p>ಇದಕ್ಕಾಗಿ ಈಗಾಗಲೇ ಸೆಸ್ಕ್ ತಾನು ನೀಡಿರುವ ವಿದ್ಯುತ್ ಸಂಪರ್ಕದ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ನಡೆಸುತ್ತಿದೆ. ನಂತರ, ಇವುಗಳನ್ನು ಬ್ಲಾಕ್ಗಳನ್ನಾಗಿ ವಿಂಗಡಿಸಿ ಗಣತಿದಾರರಿಗೆ ಹಂಚಿಕೆ ಮಾಡಲಾಗುತ್ತದೆ. ದಸರೆ ರಜೆಯ ಸಮಯದಲ್ಲಿ ಈ ಗಣತಿ ಕಾರ್ಯ ನಡೆಯಲಿದೆ.</p>.<p>ಜಿಲ್ಲೆಯಲ್ಲಿ ಇದಕ್ಕಾಗಿ ನಡೆದಿರುವ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಂಗಳವಾರ ತಮ್ಮ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು. ಜೊತೆಗೆ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಿದರು.</p>.<p>ಮುಖ್ಯವಾಗಿ, ‘ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕಿದೆ’ ಎಂದ ಅವರು, ‘ಯಾವುದೇ ಕುಟುಂಬಗಳೂ ಈ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನವನ್ನೂ ನೀಡಿದರು.</p>.<p>ಇದಕ್ಕಾಗಿ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ವಿದ್ಯುತ್ ಬಿಲ್ಲಿನ ಆರ್ಆರ್ ಸಂಖ್ಯೆ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕಿದೆ. ಜೊತೆಗೆ, ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೂ ಸಹ ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರ ‘ಜಿಯೊ ಮ್ಯಾಪಿಂಗ್’ ಮಾಡಬೇಕಿದೆ ಎಂದು ಹೇಳಿದರು.</p>.<p>ಇದರಿಂದ ಸಮೀಕ್ಷೆ ವ್ಯಾಪ್ತಿಯಿಂದ ಯಾರೂ ಹೊರಗುಳಿಯುವುದಿಲ್ಲ. ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳ ವಿದ್ಯುತ್ ಮೀಟರ್ ರೀಡರ್ಗಳಿಂದ ಕುಟುಂಬಗಳ ಪಟ್ಟಿ ಮಾಡಿ, ಈ ಕುರಿತು ಮನೆಗಳಿಗೆ ‘ಜಿಯೊ ಟ್ಯಾಗ್’ಗಾಗಿ ಸ್ಟಿಕ್ಕರ್ಗಳನ್ನು ಅಳವಡಿಸುವ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ಅವರು ತಿಳಿಸಿದರು.</p>.<p>ಜಿಲ್ಲೆಯಲ್ಲಿ ವಿದ್ಯುತ್ ಮೀಟರ್ ರೀಡರ್ ಸಿಬ್ಬಂದಿಯು ಆರ್ಆರ್ ನಂಬರ್ ಹೊಂದಿರುವ ಕುಟುಂಬಗಳ ಪಟ್ಟಿ ಮಾಡಲಿದ್ದಾರೆ. ಆ ದಿಸೆಯಲ್ಲಿ ಸಮೀಕ್ಷೆ ಕಾರ್ಯ ಮುಗಿಯುವವರೆಗೂ ತಮ್ಮ ಮನೆಗಳಿಗೆ ಅಂಟಿಸಲಾದ ಜಿಯೊ ಟ್ಯಾಗ್ ಸ್ಟಿಕ್ಕರ್ ಅನ್ನು ತೆಗೆಯಬಾರದು ಎಂದು ಅವರು ಕೋರಿದರು.</p>.<p>ಜಿಲ್ಲಾ ಹಂತದಲ್ಲಿ ಆಯ್ಕೆ ಮಾಡಿದ ಮಾಸ್ಟರ್ ಟ್ರೈನರ್ಸ್ಗಳಿಗೆ ತರಬೇತಿ ನೀಡಲಾಗುವುದು. ತರಬೇತಿಯನ್ನು ಹೊಂದಿದ ಮಾಸ್ಟರ್ ಟ್ರೈನರ್ಸ್ಗಳಿಂದ ಮೇಲ್ವಿಚಾರಕರು ಮತ್ತು ಗಣತಿದಾರರಿಗೆ ತರಬೇತಿ ನೀಡಲಾಗುತ್ತದೆ ಎಂದರು.</p>.<p>ಸಮೀಕ್ಷೆಯ ಮೇಲ್ವಿಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕುಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಿದ್ದು, ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಎಸ್.ದೀಪಕ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ಎಚ್.ಆರ್.ರಮೇಶ್, ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಕವಿತಾ, ವ್ಯವಸ್ಥಾಪಕ ಶಿವಶಂಕರ, ತಾಲ್ಲೂಕು ಅಧಿಕಾರಿಗಳಾದ ಮೋಹನ್ ಕುಮಾರ್, ಶ್ರೀಕಾಂತ್, ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನಾರಾಯಣ ಭಾಗವಹಿಸಿದ್ದರು.</p>.<blockquote>ಸೆ. 22ರಿಂದ ಅ. 7ರವರೆಗೆ ನಡೆಯಲಿದೆ ಸಮೀಕ್ಷೆ | ಈಗ ನಡೆಯುತ್ತಿದೆ ಮನೆಮನೆಗೆ ಸ್ಟಿಕ್ಕರ್ ಹಾಕುವ ಕಾರ್ಯ | ಸಮೀಕ್ಷೆ ಮುಗಿಯುವವರೆಗೂ ಸ್ಟಿಕ್ಕರ್ ತೆಗೆದು ಹಾಕದಂತೆ ಮನವಿ</blockquote>.<div><blockquote>ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಸಂಬಂಧ ಸರ್ಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.</blockquote><span class="attribution">ಆನಂದ್ ಪ್ರಕಾಶ್ ಮೀನಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ</span></div>.<p><strong>ಮಾಹಿತಿ ನೀಡಲು ಮನವಿ</strong> </p><p>ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಾತಿಗಳ (ಹಿಂದುಳಿದ ವರ್ಗಗಳು ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿ ಸಂಬಂಧ ಯಾವುದೇ ಜಾತಿ ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ ಅಂತಹ ಅಂಶಗಳ ಬಗ್ಗೆ ಸಲಹೆ ಸೂಚನೆ ನೀಡಲು ಕೋರಲಾಗಿದೆ. ಸಾರ್ವಜನಿಕರು ತಮ್ಮ ಸಲಹೆ ಸೂಚನೆ ಮನವಿಗಳನ್ನು kscbsd@gmail.com ವಿಳಾಸಕ್ಕೆ ಕಳುಹಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್.ದೀಪಕ್ ಅವರು ತಿಳಿಸಿದ್ದಾರೆ.</p>.<p><strong>ಸಮೀಕ್ಷೆಗಾಗಿಯೇ ವಿಶೇಷ ಆ್ಯಪ್</strong> </p><p>ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಸಮೀಕ್ಷೆಗಾಗಿ ವಿಶೇಷ ಆ್ಯಪ್ ನಿಗದಿಪಡಿಸಲಾಗಿದೆ. ಸುಮಾರು 65 ಪ್ರಶ್ನಾವಳಿಗಳು ಇದ್ದು ಕುಟುಂಬಗಳಿಂದ ಮಾಹಿತಿ ಪಡೆದು ಆ ಆ್ಯಪ್ ಮೂಲಕವೇ ಸಮೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಪ್ರತೀ ಸಮೀಕ್ಷೆದಾರರು ಎಲ್ಲಾ ಮನೆಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>