ಮಡಿಕೇರಿ: ‘ಮಡಿಕೇರಿಯಲ್ಲಿ ಈಚೆಗೆ ನಡೆದ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಶಬ್ದದ ಧ್ವನಿವರ್ಧಕ ಬಳಸಿದ್ದರಿಂದಾಗಿ ಜಿಲ್ಲಾಸ್ಪತ್ರೆಯಿಂದ ಕೆಲವು ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ನಗರದ ಹಿರಿಯ ನಾಗರಿಕರು ಮನೆಗೆ ಬೀಗ ಹಾಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ’ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದರು.