<p>ಸೋಮವಾರಪೇಟೆ: ಸೋಮನಾಥ ಜ್ಯೋತಿರ್ಲಿಂಗ ಏಪ್ರಿಲ್ 21ರಂದು ಪಟ್ಟಣಕ್ಕೆ ಆಗಮಿಸಲಿದೆ. ಕ್ರಿಸ್ತಶಕ 1026ರಲ್ಲಿ ಗುಜರಾತ್ ನ ಸೋಮನಾಥ ದೇವಸ್ಥಾನದ ಮೇಲೆ ಮಹಮ್ಮದ್ ಘಜ್ನಿ ದಾಳಿ ಮಾಡಿದ್ದ ಸಮಯ ಶಿವಲಿಂಗಕ್ಕೆ ತೀವ್ರ ಹಾನಿಯಾಗಿತ್ತು. ಲಿಂಗದ ಭಾಗಗಳನ್ನು ಅಗ್ನಿಹೋತ್ರಿ ಬ್ರಾಹ್ಮಣರು ತಮ್ಮ ಬಳಿ ಸಂರಕ್ಷಿಸಿ, ಆ ಚೂರುಗಳಿಗೆ ಶಿವಲಿಂಗದ ರೂಪವನ್ನು ಕೊಟ್ಟು ನೂರಾರು ವರ್ಷಗಳ ಕಾಲ ಸಂರಕ್ಷಿಸಿಕೊಂಡು ಬಂದಿದ್ದಾರೆ.</p>.<p>ಇದೀಗ ಶ್ರೀ ರವಿಶಂಕರ್ ಗುರೂಜಿಯವರ ಆಶ್ರಮದ ವತಿಯಿಂದ ಈ ಜ್ಯೋತಿರ್ಲಿಂಗವನ್ನು ಜನರಿಗೆ ದರ್ಶನ ಮಾಡಿಸುವ ಉದ್ದೇಶದಿಂದ ದೇಶದಾದ್ಯಂತ ಯಾತ್ರೆಯ ಮೂಲಕ ಜ್ಯೋತಿರ್ಲಿಂಗ ದರ್ಶನವನ್ನು ಜನರಿಗೆ ಮಾಡಿಸುತ್ತಿದ್ದಾರೆ. ಅಂದು ಸಂಜೆ 5 ಗಂಟೆಯಿಂದ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಸಂಸ್ಥೆಯ ವತಿಯಿಂದ ಸತ್ಸಂಗ, ಪೂಜೆ, ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-51-1057768684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಸೋಮನಾಥ ಜ್ಯೋತಿರ್ಲಿಂಗ ಏಪ್ರಿಲ್ 21ರಂದು ಪಟ್ಟಣಕ್ಕೆ ಆಗಮಿಸಲಿದೆ. ಕ್ರಿಸ್ತಶಕ 1026ರಲ್ಲಿ ಗುಜರಾತ್ ನ ಸೋಮನಾಥ ದೇವಸ್ಥಾನದ ಮೇಲೆ ಮಹಮ್ಮದ್ ಘಜ್ನಿ ದಾಳಿ ಮಾಡಿದ್ದ ಸಮಯ ಶಿವಲಿಂಗಕ್ಕೆ ತೀವ್ರ ಹಾನಿಯಾಗಿತ್ತು. ಲಿಂಗದ ಭಾಗಗಳನ್ನು ಅಗ್ನಿಹೋತ್ರಿ ಬ್ರಾಹ್ಮಣರು ತಮ್ಮ ಬಳಿ ಸಂರಕ್ಷಿಸಿ, ಆ ಚೂರುಗಳಿಗೆ ಶಿವಲಿಂಗದ ರೂಪವನ್ನು ಕೊಟ್ಟು ನೂರಾರು ವರ್ಷಗಳ ಕಾಲ ಸಂರಕ್ಷಿಸಿಕೊಂಡು ಬಂದಿದ್ದಾರೆ.</p>.<p>ಇದೀಗ ಶ್ರೀ ರವಿಶಂಕರ್ ಗುರೂಜಿಯವರ ಆಶ್ರಮದ ವತಿಯಿಂದ ಈ ಜ್ಯೋತಿರ್ಲಿಂಗವನ್ನು ಜನರಿಗೆ ದರ್ಶನ ಮಾಡಿಸುವ ಉದ್ದೇಶದಿಂದ ದೇಶದಾದ್ಯಂತ ಯಾತ್ರೆಯ ಮೂಲಕ ಜ್ಯೋತಿರ್ಲಿಂಗ ದರ್ಶನವನ್ನು ಜನರಿಗೆ ಮಾಡಿಸುತ್ತಿದ್ದಾರೆ. ಅಂದು ಸಂಜೆ 5 ಗಂಟೆಯಿಂದ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಸಂಸ್ಥೆಯ ವತಿಯಿಂದ ಸತ್ಸಂಗ, ಪೂಜೆ, ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-51-1057768684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>