<p><strong>ಸೋಮವಾರಪೇಟೆ:</strong> ತಾಲ್ಲೂಕಿನಲ್ಲಿ ಸಿ ಆ್ಯಂಡ್ ಡಿ ಜಾಗದಲ್ಲಿ ಸೆಕ್ಷನ್-4 ಸರ್ವೆಗೆ ನೋಟಿಸ್ ಜಾರಿಯಾಗುತ್ತಿದ್ದು, ರೈತರನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ನೀತಿಯನ್ನು ಖಂಡಿಸಿ ಆ.11ರಂದು ಸೋಮವಾರಪೇಟೆ ತಾಲ್ಲೂಕು ಬಂದ್ಗೆ ಕರೆ ನೀಡಲಾಗುವುದು’ ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ತಿಳಿಸಿದರು.</p>.<p>ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ನಡೆದ ರೈತರ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು ಹೋರಾಟ ತೀವ್ರಗೊಳಿಸುವುದು ಅನಿವಾರ್ಯವಾಗಿದೆ. ಈಗಾಗಲೇ ಸಮಿತಿಯಿಂದ ಹೋರಾಟಗಳು ನಡೆಯುತ್ತಿದ್ದು, ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಆದರೂ, ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಬಂದ್ಗೆ ಕರೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಮಿತಿಯ ಕಾನೂನು ಸಲಹೆಗಾರ ಬಿ.ಜೆ. ದೀಪಕ್, ಕಾರ್ಯದರ್ಶಿ ಯೋಗೇಂದ್ರ ಚೌಡ್ಲು, ಪದಾಧಿಕಾರಿಗಳಾದ ಮಿಥುನ್ ಹರಗ, ದಿವಾಕರ್ ಕೂತಿ, ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್, ಚೌಡ್ಲು ಫ್ಯಾಕ್ಸ್ ಅಧ್ಯಕ್ಷ ಕೆ.ಟಿ.ಪರಮೇಶ್, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಎಸ್.ಬಿ.ಭರತ್, ನಂದಕುಮಾರ್ ಹಾಗೂ ಮುಖಂಡರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ತಾಲ್ಲೂಕಿನಲ್ಲಿ ಸಿ ಆ್ಯಂಡ್ ಡಿ ಜಾಗದಲ್ಲಿ ಸೆಕ್ಷನ್-4 ಸರ್ವೆಗೆ ನೋಟಿಸ್ ಜಾರಿಯಾಗುತ್ತಿದ್ದು, ರೈತರನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ನೀತಿಯನ್ನು ಖಂಡಿಸಿ ಆ.11ರಂದು ಸೋಮವಾರಪೇಟೆ ತಾಲ್ಲೂಕು ಬಂದ್ಗೆ ಕರೆ ನೀಡಲಾಗುವುದು’ ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ತಿಳಿಸಿದರು.</p>.<p>ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ನಡೆದ ರೈತರ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು ಹೋರಾಟ ತೀವ್ರಗೊಳಿಸುವುದು ಅನಿವಾರ್ಯವಾಗಿದೆ. ಈಗಾಗಲೇ ಸಮಿತಿಯಿಂದ ಹೋರಾಟಗಳು ನಡೆಯುತ್ತಿದ್ದು, ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಆದರೂ, ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಬಂದ್ಗೆ ಕರೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಮಿತಿಯ ಕಾನೂನು ಸಲಹೆಗಾರ ಬಿ.ಜೆ. ದೀಪಕ್, ಕಾರ್ಯದರ್ಶಿ ಯೋಗೇಂದ್ರ ಚೌಡ್ಲು, ಪದಾಧಿಕಾರಿಗಳಾದ ಮಿಥುನ್ ಹರಗ, ದಿವಾಕರ್ ಕೂತಿ, ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್, ಚೌಡ್ಲು ಫ್ಯಾಕ್ಸ್ ಅಧ್ಯಕ್ಷ ಕೆ.ಟಿ.ಪರಮೇಶ್, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಎಸ್.ಬಿ.ಭರತ್, ನಂದಕುಮಾರ್ ಹಾಗೂ ಮುಖಂಡರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>