<p><strong>ಸೋಮವಾರಪೇಟೆ</strong>: ಬೇಳೂರು ಬಾಣೆ ರಕ್ಷಣಾ ಹೋರಾಟ ಸಮಿತಿ ಸಭೆ ಸಮಿತಿ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಪತ್ರಿಕಾಭವನದಲ್ಲಿ ನಡೆಯಿತು.</p>.<p>ಪೈಸಾರಿ ಭೂಮಿ, ಮಠಕ್ಕೆ ಸೇರಿದ ಜಾಗ ಹಾಗೂ ಊರೊಡುವೆ ಜಾಗಕ್ಕೆ ಅನಧಿಕೃತವಾಗಿ ಬೇಲಿ ಹಾಕಿರುವುದನ್ನು ತೆಗೆಸಲು ತಹಶೀಲ್ದಾರ್ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಮಾಡಲು ಹಾಗೂ 7 ದಿನಗಳ ಸಮಯ ನೀಡಿ, ಬೇಲಿ ತೆಗೆಸಲು ವಿಫಲರಾದಲ್ಲಿ ಹೋರಾಟದ ದಾರಿ ಹಿಡಿಯಬೇಕಾಗುತ್ತದೆ ಎಂದು ಸಭೆ ತೀರ್ಮಾನಿಸಿತು.</p>.<p>ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿದರೂ, ಯಾವುದೇ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬ ಅಸಮಾಧಾನ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್, ಆಟೊ ಚಾಲಕ ರವೀಶ್, ಉದ್ಯಮಿ ಮಿಥುನ್ ಹಾನಗಲ್ಲು, ಬೇಳೂರು ಗ್ರಾಮಸ್ಥ ರಾಜಣ್ಣ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-51-1227311506</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಬೇಳೂರು ಬಾಣೆ ರಕ್ಷಣಾ ಹೋರಾಟ ಸಮಿತಿ ಸಭೆ ಸಮಿತಿ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಪತ್ರಿಕಾಭವನದಲ್ಲಿ ನಡೆಯಿತು.</p>.<p>ಪೈಸಾರಿ ಭೂಮಿ, ಮಠಕ್ಕೆ ಸೇರಿದ ಜಾಗ ಹಾಗೂ ಊರೊಡುವೆ ಜಾಗಕ್ಕೆ ಅನಧಿಕೃತವಾಗಿ ಬೇಲಿ ಹಾಕಿರುವುದನ್ನು ತೆಗೆಸಲು ತಹಶೀಲ್ದಾರ್ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಮಾಡಲು ಹಾಗೂ 7 ದಿನಗಳ ಸಮಯ ನೀಡಿ, ಬೇಲಿ ತೆಗೆಸಲು ವಿಫಲರಾದಲ್ಲಿ ಹೋರಾಟದ ದಾರಿ ಹಿಡಿಯಬೇಕಾಗುತ್ತದೆ ಎಂದು ಸಭೆ ತೀರ್ಮಾನಿಸಿತು.</p>.<p>ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿದರೂ, ಯಾವುದೇ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬ ಅಸಮಾಧಾನ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್, ಆಟೊ ಚಾಲಕ ರವೀಶ್, ಉದ್ಯಮಿ ಮಿಥುನ್ ಹಾನಗಲ್ಲು, ಬೇಳೂರು ಗ್ರಾಮಸ್ಥ ರಾಜಣ್ಣ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-51-1227311506</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>