<p><strong>ಸೋಮವಾರಪೇಟೆ:</strong> ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಹಲವು ವರ್ಷಗಳ ಹೋರಾಟದ ಫಲವಾಗಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿ ಒಂದು ವರ್ಷ ಪೂರೈಸಿದ್ದು, ಮುಂದಿನ ದಿನಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕೆನ್ನುವುದು ಜನರ ಬೇಡಿಕೆಯಾಗಿದೆ ಎಂದು ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಕುಸಿದಿದೆ. ರುಚಿಯಾದ ಆಹಾರ ನೀಡುತ್ತಿಲ್ಲ. ಇದರಿಂದ ನಿರಾಶೆಯಾಗಿದೆ. ಒಂದು ಊಟಕ್ಕೆ ರಾಜ್ಯ ಸರ್ಕಾರ ₹65 ಗಳನ್ನು ನೀಡುತ್ತಿದೆ. ಸರ್ಕಾರ ನೀಡುವ ಹಣಕ್ಕೆ ಸೂಕ್ತ ಆಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕರಾದ ಡಾ.ಮಂತರ್ ಗೌಡ ಸೇರಿ ಆನೇಕರ ಸಹಕಾರದಿಂದ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿದೆ. ಪಂಚಾಯಿತಿ ಅಧಿಕಾರಿಗಳು ಪ್ರತಿದಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕು. ಈ ಬಗ್ಗೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದರು.</p>.<p>ಮಾದಾಪುರ ಸಮೀಪದ ಕುಂಬೂರು ಪೈಸಾರಿಯಲ್ಲಿ ನಿವೇಶನ ರಹಿತ ಕಾರ್ಮಿಕರು ನಿವೇಶನಕ್ಕಾಗಿ 18 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಸ್ಪಂದಿಸುತ್ತಿಲ್ಲ. ಕೂಡಲೆ ಧರಣಿ ನಿರತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.</p>.<p>ಬೇಳೂರು ಬಾಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಸರ್ಕಾರ ಜಾಗದ ಸರ್ವೆ ಮಾಡಿಸಿ, ಒತ್ತುವರಿ ತೆರವುಗೊಳಿಸಬೇಕೆಂದರು.</p>.<p>ಸಂಘದ ಕಾರ್ಯದರ್ಶಿ ಎಚ್.ಬಿ.ರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲ್ಲೂಕು ಅಧ್ಯಕ್ಷ ಎ.ಯು.ಸಂತೋಷ್, ಖಜಾಂಚಿ ಶಿವರಾಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-189766315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಹಲವು ವರ್ಷಗಳ ಹೋರಾಟದ ಫಲವಾಗಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿ ಒಂದು ವರ್ಷ ಪೂರೈಸಿದ್ದು, ಮುಂದಿನ ದಿನಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕೆನ್ನುವುದು ಜನರ ಬೇಡಿಕೆಯಾಗಿದೆ ಎಂದು ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಕುಸಿದಿದೆ. ರುಚಿಯಾದ ಆಹಾರ ನೀಡುತ್ತಿಲ್ಲ. ಇದರಿಂದ ನಿರಾಶೆಯಾಗಿದೆ. ಒಂದು ಊಟಕ್ಕೆ ರಾಜ್ಯ ಸರ್ಕಾರ ₹65 ಗಳನ್ನು ನೀಡುತ್ತಿದೆ. ಸರ್ಕಾರ ನೀಡುವ ಹಣಕ್ಕೆ ಸೂಕ್ತ ಆಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕರಾದ ಡಾ.ಮಂತರ್ ಗೌಡ ಸೇರಿ ಆನೇಕರ ಸಹಕಾರದಿಂದ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿದೆ. ಪಂಚಾಯಿತಿ ಅಧಿಕಾರಿಗಳು ಪ್ರತಿದಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕು. ಈ ಬಗ್ಗೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದರು.</p>.<p>ಮಾದಾಪುರ ಸಮೀಪದ ಕುಂಬೂರು ಪೈಸಾರಿಯಲ್ಲಿ ನಿವೇಶನ ರಹಿತ ಕಾರ್ಮಿಕರು ನಿವೇಶನಕ್ಕಾಗಿ 18 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಸ್ಪಂದಿಸುತ್ತಿಲ್ಲ. ಕೂಡಲೆ ಧರಣಿ ನಿರತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.</p>.<p>ಬೇಳೂರು ಬಾಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಸರ್ಕಾರ ಜಾಗದ ಸರ್ವೆ ಮಾಡಿಸಿ, ಒತ್ತುವರಿ ತೆರವುಗೊಳಿಸಬೇಕೆಂದರು.</p>.<p>ಸಂಘದ ಕಾರ್ಯದರ್ಶಿ ಎಚ್.ಬಿ.ರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲ್ಲೂಕು ಅಧ್ಯಕ್ಷ ಎ.ಯು.ಸಂತೋಷ್, ಖಜಾಂಚಿ ಶಿವರಾಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-189766315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>