<p><strong>ಸೋಮವಾರಪೇಟೆ:</strong> ತಾಲ್ಲೂಕಿನ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ.</p>.<p>9ನೇ ದಿನವೂ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ವಸತಿಹೀನ ಬಡ ಕಾರ್ಮಿಕರ ಸಮಸ್ಯೆಯನ್ನು ಶಾಸಕರು ಕೇಳಬೇಕಿತ್ತು. ದುರಾದೃಷ್ಟಕರ ಯಾವುದೇ ಜನಪ್ರತಿನಿಧಿ ಇದುವರೆಗೆ ಧರಣಿನಿರತ ಬಡವರ ಗೋಳನ್ನು ಕೇಳಿಲ್ಲ ಎಂದು ಸಂಘಟನೆ ಅಧ್ಯಕ್ಷ ಕೆ.ಮೊಣ್ಣಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರಣಿ ನಿರತರ ಬೇಡಿಕೆ ಆಲಿಸುವ ಭರವಸೆ ಸಿಕ್ಕಿದೆ. ಸೂರಿಲ್ಲದ ಬಡವರಿಗೆ ಉಚಿತ ನಿವೇಶನ ನೀಡುವುದಕ್ಕೆ ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕು. ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸದಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಗಳಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಕಾನೂನಿನಂತೆ ವಸತಿ ರಹಿತರಿಗೆ ಸರ್ಕಾರಿ ಜಾಗದಲ್ಲಿ ಉಚಿತ ನಿವೇಶನ ನೀಡದಿದ್ದರೆ. ಮುಂದಿನ ದಿನಗಳಲ್ಲಿ ಪೈಸಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ತಾಲ್ಲೂಕಿನ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ.</p>.<p>9ನೇ ದಿನವೂ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ವಸತಿಹೀನ ಬಡ ಕಾರ್ಮಿಕರ ಸಮಸ್ಯೆಯನ್ನು ಶಾಸಕರು ಕೇಳಬೇಕಿತ್ತು. ದುರಾದೃಷ್ಟಕರ ಯಾವುದೇ ಜನಪ್ರತಿನಿಧಿ ಇದುವರೆಗೆ ಧರಣಿನಿರತ ಬಡವರ ಗೋಳನ್ನು ಕೇಳಿಲ್ಲ ಎಂದು ಸಂಘಟನೆ ಅಧ್ಯಕ್ಷ ಕೆ.ಮೊಣ್ಣಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರಣಿ ನಿರತರ ಬೇಡಿಕೆ ಆಲಿಸುವ ಭರವಸೆ ಸಿಕ್ಕಿದೆ. ಸೂರಿಲ್ಲದ ಬಡವರಿಗೆ ಉಚಿತ ನಿವೇಶನ ನೀಡುವುದಕ್ಕೆ ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕು. ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸದಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಗಳಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಕಾನೂನಿನಂತೆ ವಸತಿ ರಹಿತರಿಗೆ ಸರ್ಕಾರಿ ಜಾಗದಲ್ಲಿ ಉಚಿತ ನಿವೇಶನ ನೀಡದಿದ್ದರೆ. ಮುಂದಿನ ದಿನಗಳಲ್ಲಿ ಪೈಸಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>