<p>ಸೋಮವಾರಪೇಟೆ: ಸಮೀಪದ ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯ ಸಮಿತಿಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಮಹಾಗಣಪತಿ, ಶ್ರೀ ಬಸವೇಶ್ವರ, ಶ್ರೀ ವೀರಭದ್ರೇಶ್ವರ ದೇವರ ಪ್ರತಿಷ್ಠಾಷ್ಟಬಂಧ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಬೆಳಿಗ್ಗೆ 6 ಗಂಟೆಯಿಂದ ಸ್ವಸ್ತಿ ವಾಚನ, ಗಣಯಾಗ, 8 ಗಂಟೆಗೆ ಶ್ರೀ ಮಹಾಗಣಪತಿ, ಶ್ರೀ ಬಸವೇಶ್ವರ, ಶ್ರೀ ವೀರಭದ್ರೇಶ್ವರ ದೇವರ ಬಿಂಬ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಅಷ್ಟಬಂಧ ಪ್ರಕ್ರಿಯೆ, ಜೀವತತ್ವ ಕಲಶಾಭಿಷೇಕಗಳು, ನ್ಯಾಸಾಧಿಗಳು, ಶ್ರೀ ರುದ್ರಹೋಮ, ಬ್ರಹ್ಮ ಕಲಶ ಮಂಡಲ ರಚನೆ, ಸಂಜೆ 4 ಗಂಟೆಯಿಂದ ಪಂಚವಿಂಶತಿ ಮತ್ತು ನಮೋತ್ತರಶತ ಕಲಶಾಧಿವಾಸ, ಅಧಿವಾಸ ಹೋಮಗಳು ನಡೆಯಿತು.</p>.<p>ತಾ. 24ರಂದು ಬೆಳಿಗ್ಗೆ 6 ಗಂಟೆಯಿಂದ ಗಣಯಾಗ ಕಲಶಾಭಿಷೇಕ, 8.26ಕ್ಕೆ ಬ್ರಹ್ಮ ಕಲಶಾಭಿಷೇಕ, ನ್ಯಾಸಾಧಿಗಳು, ಪ್ರಸನ್ನ ಪೂಜೆ, ದೇವರ ಉತ್ಸವ, ದರ್ಶನ ಬಲಿ, ಮಹಾಪೂಜೆ, ಸ್ವಸ್ತಿ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ.</p>.<p>ಪೂಜಾ ಕಾರ್ಯದಲ್ಲಿ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ. ರವಿ, ಉಪಾಧ್ಯಕ್ಷ ಭುವನೇಂದ್ರ, ಕಾರ್ಯದರ್ಶಿ ಅನಿಲ್ ಶೆಟ್ಟಿ, ಖಜಾಂಚಿ ಏಳುಮಲೈ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-51-1850112753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಸಮೀಪದ ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯ ಸಮಿತಿಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಮಹಾಗಣಪತಿ, ಶ್ರೀ ಬಸವೇಶ್ವರ, ಶ್ರೀ ವೀರಭದ್ರೇಶ್ವರ ದೇವರ ಪ್ರತಿಷ್ಠಾಷ್ಟಬಂಧ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಬೆಳಿಗ್ಗೆ 6 ಗಂಟೆಯಿಂದ ಸ್ವಸ್ತಿ ವಾಚನ, ಗಣಯಾಗ, 8 ಗಂಟೆಗೆ ಶ್ರೀ ಮಹಾಗಣಪತಿ, ಶ್ರೀ ಬಸವೇಶ್ವರ, ಶ್ರೀ ವೀರಭದ್ರೇಶ್ವರ ದೇವರ ಬಿಂಬ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಅಷ್ಟಬಂಧ ಪ್ರಕ್ರಿಯೆ, ಜೀವತತ್ವ ಕಲಶಾಭಿಷೇಕಗಳು, ನ್ಯಾಸಾಧಿಗಳು, ಶ್ರೀ ರುದ್ರಹೋಮ, ಬ್ರಹ್ಮ ಕಲಶ ಮಂಡಲ ರಚನೆ, ಸಂಜೆ 4 ಗಂಟೆಯಿಂದ ಪಂಚವಿಂಶತಿ ಮತ್ತು ನಮೋತ್ತರಶತ ಕಲಶಾಧಿವಾಸ, ಅಧಿವಾಸ ಹೋಮಗಳು ನಡೆಯಿತು.</p>.<p>ತಾ. 24ರಂದು ಬೆಳಿಗ್ಗೆ 6 ಗಂಟೆಯಿಂದ ಗಣಯಾಗ ಕಲಶಾಭಿಷೇಕ, 8.26ಕ್ಕೆ ಬ್ರಹ್ಮ ಕಲಶಾಭಿಷೇಕ, ನ್ಯಾಸಾಧಿಗಳು, ಪ್ರಸನ್ನ ಪೂಜೆ, ದೇವರ ಉತ್ಸವ, ದರ್ಶನ ಬಲಿ, ಮಹಾಪೂಜೆ, ಸ್ವಸ್ತಿ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ.</p>.<p>ಪೂಜಾ ಕಾರ್ಯದಲ್ಲಿ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ. ರವಿ, ಉಪಾಧ್ಯಕ್ಷ ಭುವನೇಂದ್ರ, ಕಾರ್ಯದರ್ಶಿ ಅನಿಲ್ ಶೆಟ್ಟಿ, ಖಜಾಂಚಿ ಏಳುಮಲೈ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-51-1850112753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>