<p><strong>ಕುಶಾಲನಗರ</strong>: ಪಟ್ಟಣದ ಟೋಲ್ ಗೇಟ್ ಬಳಿ ಇರುವ ಕಾವೇರಿ ಪ್ರತಿಮೆಗೆ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ ಹುಣ್ಣಿಮೆಯ ಅಂಗವಾಗಿ ಗಡಿಭಾಗದ ಕಾವೇರಿ ದೇಗುಲದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಅರಿಸಿನ, ಕುಂಕುಮಗಳಿಂದ ಅಭಿಷೇಕ ಮಾಡಲಾಯಿತು.</p>.<p>ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸಮಾಜದ ಸೇವಕರಾದ ರೇಖಾ ನಟರಾಜ್, ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದಾ ಕೌಶಿಕ್ ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು.</p>.<p>ನಟರಾಜ್ ಮಾತನಾಡಿ, ‘ನದಿ ತೀರದ ನಿವಾಸಿಗಳು ಮತ್ತು ಸಾರ್ವಜನಿಕರು ನದಿಯ ಪಾವಿತ್ರ್ಯತೆಗೆ ಧಕ್ಕೆ ಭಾರದಂತೆ ಜಾಗೃತಿ ವಹಿಸಬೇಕು. ನದಿಯ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿ ಮೂಲದಲ್ಲಿಯೇ ಕಾವೇರಿ ಕಲುಷಿತಗೊಂಡು ಹರಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ’ ಎಂದರು.</p>.<p>ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ನದಿ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುತ್ತಿರುವ ಶ್ಲಾಘನೀಯ ಎಂದರು. ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.</p>.<p>ಬಾರವಿ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಬಬಿಂದ್ರ ಪ್ರಸಾದ್, ಮುಖಂಡರಾದ ವಿಜಯೇಂದ್ರ ಪ್ರಸಾದ್, ಸೋಮಶೇಖರ್, ಚಂದ್ರು, ರುದ್ರ, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಪಟ್ಟಣದ ಟೋಲ್ ಗೇಟ್ ಬಳಿ ಇರುವ ಕಾವೇರಿ ಪ್ರತಿಮೆಗೆ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ ಹುಣ್ಣಿಮೆಯ ಅಂಗವಾಗಿ ಗಡಿಭಾಗದ ಕಾವೇರಿ ದೇಗುಲದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಅರಿಸಿನ, ಕುಂಕುಮಗಳಿಂದ ಅಭಿಷೇಕ ಮಾಡಲಾಯಿತು.</p>.<p>ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸಮಾಜದ ಸೇವಕರಾದ ರೇಖಾ ನಟರಾಜ್, ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದಾ ಕೌಶಿಕ್ ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು.</p>.<p>ನಟರಾಜ್ ಮಾತನಾಡಿ, ‘ನದಿ ತೀರದ ನಿವಾಸಿಗಳು ಮತ್ತು ಸಾರ್ವಜನಿಕರು ನದಿಯ ಪಾವಿತ್ರ್ಯತೆಗೆ ಧಕ್ಕೆ ಭಾರದಂತೆ ಜಾಗೃತಿ ವಹಿಸಬೇಕು. ನದಿಯ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿ ಮೂಲದಲ್ಲಿಯೇ ಕಾವೇರಿ ಕಲುಷಿತಗೊಂಡು ಹರಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ’ ಎಂದರು.</p>.<p>ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ನದಿ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುತ್ತಿರುವ ಶ್ಲಾಘನೀಯ ಎಂದರು. ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.</p>.<p>ಬಾರವಿ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಬಬಿಂದ್ರ ಪ್ರಸಾದ್, ಮುಖಂಡರಾದ ವಿಜಯೇಂದ್ರ ಪ್ರಸಾದ್, ಸೋಮಶೇಖರ್, ಚಂದ್ರು, ರುದ್ರ, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>