<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಾದ್ಯಂತ ‘ಶ್ರೀಕೃಷ್ಣ ಜನ್ಮಾಷ್ಟಮಿ’ಯನ್ನು ಶನಿವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿನ ಕಂಚಿ ಕಾಮಾಕ್ಷಿ ದೇವಾಲಯ ಸೇರಿದಂತೆ ಇತರೆ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಕಾಲೇಜ್ ರಸ್ತೆಯಲ್ಲಿರುವ ಇಸ್ಕಾನ್ ಮಂದಿರದಲ್ಲಿ ವಿಶೇಷ ಭಜನೆ, ಪೂಜಾವಿಧಿಗಳು ನೆರವೇರಿದವು.</p>.<p>ಹಲವು ಶಾಲೆಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮನೆಗಳಲ್ಲಿಯೂ ಪುಟ್ಟ ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಪೋಷಕರು ಸಂಭ್ರಮಿಸಿದರು. ವಾಟ್ಸ್ಆ್ಯಪ್ ಸ್ಟೇಟಸ್ಗೆ ಕೃಷ್ಣನ ವೇಷದಲ್ಲಿರುವ ತಮ್ಮ ಮಕ್ಕಳ ಚಿತ್ರ ಹಾಕಿ ಖುಷಿಪಟ್ಟರು. ಮಕ್ಕಳೂ ಕೃಷ್ಣನ ವೇಷ ತೊಟ್ಟು ಸಂತಸಪಟ್ಟರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ‘ಶ್ರೀಕೃಷ್ಣಜನ್ಮಾಷ್ಟಮಿ’ ಕಾರ್ಯಕ್ರಮದಲ್ಲಿ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.</p>.<p>ಬಳಿಕ ಮಾತನಾಡಿದ ಚಿಂತಕ ಚಿ.ನಾ.ಸೋಮೇಶ್ ಮಾತನಾಡಿ, ‘ಕೃಷ್ಣನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದು ಪ್ರತಿಪಾದಿಸಿದರು.</p>.<p>ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದ್ದಲ್ಲಿ ಶ್ರೀಕೃಷ್ಣನ ಮಹತ್ವದ ಬಗ್ಗೆ ಅರಿವಾಗುತ್ತದೆ. ಕೃಷ್ಣ ವಿಶ್ವದ ಬೆಳಕು ಎಂದರೆ ಅತಿಶಯೋಕ್ತಿಯಲ್ಲ ಎಂದರು.</p>.<p>ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ. ಹಾಗಾಗಿಯೇ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.</p>.<p>ಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಕೃಷ್ಣನಿಂದ ತಾಳ್ಮೆ ಕಲಿಯಬೇಕು ಎಂದರು.</p>.<p>ಪ್ರಿಯಾ ರವಿಕುಮಾರ್ ಮಾತನಾಡಿ, ‘ರಾಷ್ಟ್ರಾದ್ಯಂತ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ವಿಶಿಷ್ಟ ಹಾಗೂ ವಿಶೇಷವಾಗಿ ಭಕ್ತಿಯಿಂದ ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಉಪಾಧ್ಯಕ್ಷ ಜಗದೀಶ್ ಮಾತನಾಡಿ, ‘ದೇಶ ವಿದೇಶಗಳಲ್ಲಿ ಶ್ರೀಕೃಷ್ಣನ ಅಧ್ಯಯನ ಮಾಡಿದ್ದಾರೆ. ಶ್ರೀಕೃಷ್ಣ ಜಗತ್ಪ್ರಸಿದ್ದ ಮೇರು ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಸೂಯೆ ನಾಶ ಆಗಬೇಕು ಎಂದು ಶ್ರೀಕೃಷ್ಣರು ಬದುಕಿನುದ್ದಕ್ಕೂ ಸಾರಿದ್ದಾರೆ ಎಂದು ನುಡಿದರು.</p>.<p>ಬ್ಲಾಸಂ ಶಾಲೆಯ ಮುಖ್ಯೋಪಾದ್ಯಯರಾದ ಅನಸೂಯ ಮಾತನಾಡಿ, ‘ಪ್ರತಿಯೊಬ್ಬರೂ ಕಷ್ಟದಲ್ಲಿದ್ದಾಗ ಶ್ರೀಕೃಷ್ಣನನ್ನು ಸ್ಮರಿಸುತ್ತೇವೆ. ಆದ್ದರಿಂದ ರಾಷ್ಟ್ರದಲ್ಲಿ ಶ್ರೀಕೃಷ್ಣರಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ’ ಎಂದು ಹೇಳಿದರು.</p>.<p>ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಅಧ್ಯಕ್ಷ ಜಿ.ಎಲ್.ದಾಸ್, ಉಪಾಧ್ಯಕ್ಷ ಪೆರುಮಾಳ್, ಗೌರವಾಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ, ಜಿ.ಬಿ.ಪವನ್, ಜಾನಪದ ಪರಿಷತ್ತಿ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಟಿ.ಅನಿಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.</p>.<p> <strong>ಸಮಾಜದಲ್ಲಿ ಅಸಹನೆ ಅಸಹಿಷ್ಣುತೆ ಇರಬಾರದು; ಜಿ.ವಿ.ರವಿಕುಮಾರ್</strong></p><p> ಕಂಚಿಕಾಮಾಕ್ಷಿ ದೇವಾಲಯ ಸಮಿತಿಯ ಗೌರವ ಅಧ್ಯಕ್ಷ ಜಿ.ವಿ.ರವಿಕುಮಾರ್ ಮಾತನಾಡಿ ‘ಜೀವನದಲ್ಲಿ ಮಾನವೀಯ ಮೌಲ್ಯ ಮತ್ತು ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ದ್ವೇಷ ಅಸೂಯೆ ಅಸಹನೆ ಅಸಹಿಷ್ಣುತೆ ಇರಬಾರದು. ಒಳ್ಳೆಯದನ್ನು ರೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀಕೃಷ್ಣನ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಶ್ರೀಕೃಷ್ಣರು ಭಕ್ತಿಯ ಶಕ್ತಿಯಾಗಿ ಬರುತ್ತಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಾದ್ಯಂತ ‘ಶ್ರೀಕೃಷ್ಣ ಜನ್ಮಾಷ್ಟಮಿ’ಯನ್ನು ಶನಿವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿನ ಕಂಚಿ ಕಾಮಾಕ್ಷಿ ದೇವಾಲಯ ಸೇರಿದಂತೆ ಇತರೆ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಕಾಲೇಜ್ ರಸ್ತೆಯಲ್ಲಿರುವ ಇಸ್ಕಾನ್ ಮಂದಿರದಲ್ಲಿ ವಿಶೇಷ ಭಜನೆ, ಪೂಜಾವಿಧಿಗಳು ನೆರವೇರಿದವು.</p>.<p>ಹಲವು ಶಾಲೆಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮನೆಗಳಲ್ಲಿಯೂ ಪುಟ್ಟ ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಪೋಷಕರು ಸಂಭ್ರಮಿಸಿದರು. ವಾಟ್ಸ್ಆ್ಯಪ್ ಸ್ಟೇಟಸ್ಗೆ ಕೃಷ್ಣನ ವೇಷದಲ್ಲಿರುವ ತಮ್ಮ ಮಕ್ಕಳ ಚಿತ್ರ ಹಾಕಿ ಖುಷಿಪಟ್ಟರು. ಮಕ್ಕಳೂ ಕೃಷ್ಣನ ವೇಷ ತೊಟ್ಟು ಸಂತಸಪಟ್ಟರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ‘ಶ್ರೀಕೃಷ್ಣಜನ್ಮಾಷ್ಟಮಿ’ ಕಾರ್ಯಕ್ರಮದಲ್ಲಿ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.</p>.<p>ಬಳಿಕ ಮಾತನಾಡಿದ ಚಿಂತಕ ಚಿ.ನಾ.ಸೋಮೇಶ್ ಮಾತನಾಡಿ, ‘ಕೃಷ್ಣನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದು ಪ್ರತಿಪಾದಿಸಿದರು.</p>.<p>ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದ್ದಲ್ಲಿ ಶ್ರೀಕೃಷ್ಣನ ಮಹತ್ವದ ಬಗ್ಗೆ ಅರಿವಾಗುತ್ತದೆ. ಕೃಷ್ಣ ವಿಶ್ವದ ಬೆಳಕು ಎಂದರೆ ಅತಿಶಯೋಕ್ತಿಯಲ್ಲ ಎಂದರು.</p>.<p>ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ. ಹಾಗಾಗಿಯೇ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.</p>.<p>ಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಕೃಷ್ಣನಿಂದ ತಾಳ್ಮೆ ಕಲಿಯಬೇಕು ಎಂದರು.</p>.<p>ಪ್ರಿಯಾ ರವಿಕುಮಾರ್ ಮಾತನಾಡಿ, ‘ರಾಷ್ಟ್ರಾದ್ಯಂತ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ವಿಶಿಷ್ಟ ಹಾಗೂ ವಿಶೇಷವಾಗಿ ಭಕ್ತಿಯಿಂದ ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಉಪಾಧ್ಯಕ್ಷ ಜಗದೀಶ್ ಮಾತನಾಡಿ, ‘ದೇಶ ವಿದೇಶಗಳಲ್ಲಿ ಶ್ರೀಕೃಷ್ಣನ ಅಧ್ಯಯನ ಮಾಡಿದ್ದಾರೆ. ಶ್ರೀಕೃಷ್ಣ ಜಗತ್ಪ್ರಸಿದ್ದ ಮೇರು ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಸೂಯೆ ನಾಶ ಆಗಬೇಕು ಎಂದು ಶ್ರೀಕೃಷ್ಣರು ಬದುಕಿನುದ್ದಕ್ಕೂ ಸಾರಿದ್ದಾರೆ ಎಂದು ನುಡಿದರು.</p>.<p>ಬ್ಲಾಸಂ ಶಾಲೆಯ ಮುಖ್ಯೋಪಾದ್ಯಯರಾದ ಅನಸೂಯ ಮಾತನಾಡಿ, ‘ಪ್ರತಿಯೊಬ್ಬರೂ ಕಷ್ಟದಲ್ಲಿದ್ದಾಗ ಶ್ರೀಕೃಷ್ಣನನ್ನು ಸ್ಮರಿಸುತ್ತೇವೆ. ಆದ್ದರಿಂದ ರಾಷ್ಟ್ರದಲ್ಲಿ ಶ್ರೀಕೃಷ್ಣರಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ’ ಎಂದು ಹೇಳಿದರು.</p>.<p>ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಅಧ್ಯಕ್ಷ ಜಿ.ಎಲ್.ದಾಸ್, ಉಪಾಧ್ಯಕ್ಷ ಪೆರುಮಾಳ್, ಗೌರವಾಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ, ಜಿ.ಬಿ.ಪವನ್, ಜಾನಪದ ಪರಿಷತ್ತಿ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಟಿ.ಅನಿಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.</p>.<p> <strong>ಸಮಾಜದಲ್ಲಿ ಅಸಹನೆ ಅಸಹಿಷ್ಣುತೆ ಇರಬಾರದು; ಜಿ.ವಿ.ರವಿಕುಮಾರ್</strong></p><p> ಕಂಚಿಕಾಮಾಕ್ಷಿ ದೇವಾಲಯ ಸಮಿತಿಯ ಗೌರವ ಅಧ್ಯಕ್ಷ ಜಿ.ವಿ.ರವಿಕುಮಾರ್ ಮಾತನಾಡಿ ‘ಜೀವನದಲ್ಲಿ ಮಾನವೀಯ ಮೌಲ್ಯ ಮತ್ತು ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ದ್ವೇಷ ಅಸೂಯೆ ಅಸಹನೆ ಅಸಹಿಷ್ಣುತೆ ಇರಬಾರದು. ಒಳ್ಳೆಯದನ್ನು ರೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀಕೃಷ್ಣನ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಶ್ರೀಕೃಷ್ಣರು ಭಕ್ತಿಯ ಶಕ್ತಿಯಾಗಿ ಬರುತ್ತಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>