<p>ಮಡಿಕೇರಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ.</p>.<p>ಈ ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ‘ಈ ದುರಂತಕ್ಕೆ ಸರ್ಕಾರವೇ ನೇರ ಕಾರಣ. ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯದಲ್ಲಿ ಯಾವುದೇ ಯೋಜನೆಗಳೂ ವ್ಯವಸ್ಥಿತವಾಗಿ ಜಾರಿಯಾಗುತ್ತಿಲ್ಲ. ಮಾತ್ರವಲ್ಲ, ಕಾರ್ಯಕ್ರಮಗಳೂ ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಕರಾವಳಿಯಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಒಂದು ರೀತಿಯಲ್ಲಿ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಈಗ ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ. ನಾವು ಮೃತಪಟ್ಟವರ, ನೊಂದವರ ಪರ ಮಾತನಾಡುತ್ತೇವೆ. ಇದು ತಪ್ಪೇ?. ಇಷ್ಟೊಂದು ಮಂದಿ ಕಾಲ್ತುಳಿತದಲ್ಲಿ ಮೃತಪಟ್ಟರು. ಸರಣಿ ಕೊಲೆಗಳೂ ನಡೆದವು. ಈ ಎಲ್ಲ ಸಾವುಗಳು ಕಂಡ ಸರ್ಕಾರಕ್ಕೆ ಏನು ಅನ್ನಿಸುತ್ತಿಲ್ಲವೇ?’ ಎಂದೂ ಪ್ರಶ್ನಿಸಿದರು.</p>.<p>ಕರಾವಳಿಯಲ್ಲಿ ಈಗ ಕೆಲವರನ್ನು ಸರ್ಕಾರ ಗಡಿಪಾರು ಮಾಡಿದೆ. ಆದರೆ, ಹಿಂದೆ ಅಲ್ಲಿ ಕೊಲೆಗಳಾಗಿತ್ತು. ಆಗ ಏಕೆ ಈ ಕ್ರಮ ಕೈಗೊಳ್ಳಲಿಲ್ಲ? ಇದು ಒಂದು ಕೋಮಿನವರನ್ನು ಓಲೈಸುವ ಕ್ರಮವಾಗಿದೆ. ಎಲ್ಲರ ಜೀವಗಳೂ ಮುಖ್ಯ. ಯಾರ ಕೊಲೆಗಳೂ ಆಗಬಾರದು ಎಂಬುದು ಬಿಜೆಪಿ ಅಭಿಪ್ರಾಯ ಎಂದರು.</p>.<p>ಬಿಜೆಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯ ಮಧ್ಯೆ ನಡೆದ ‘ಕ್ರೆಡಿಟ್ ವಾರ್’ನಿಂದ ಈ ದುರಂತ ಸಂಭವಿಸಿದೆ’ ಎಂದು ಆರೋಪಿಸಿದರು.</p>.<p>ನಟ ಅಲ್ಲೂ ಅರ್ಜುನ್ ಭಾಗವಹಿಸಿದ್ದ ಕಾರ್ಯಕ್ರಮದ ವೇಳೆಯೂ ಕಾಲ್ತುಳಿತ ಉಂಟಾಗಿತ್ತು. ಆಗ ಅಲ್ಲಿನ ಕಾಂಗ್ರೆಸ್ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂಬುದು ಎಲ್ಲರಿಗೂ ತಿಳಿದೇ ಇದೆ. ಈಗ ಈ ಕಾಲ್ತುಳಿತ ಪ್ರಕರಣ ಉಂಟಾಗಿರುವುದಕ್ಕೆ ಪೊಲೀಸರ ವರದಿ ದಿಕ್ಕರಿಸಿ ಕಾರ್ಯಕ್ರಮ ಆಯೋಜಿಸಿದ್ದು ಕಾರಣವಾಗಿದೆ ಎಂದು ದೂರಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರು ಧ್ವನಿಯಲ್ಲಿ ಮಾತನಾಡಿ ಪತ್ರಕರ್ತರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದಾರೆ ಎಂದರು.</p>.<p>ಬಿಜೆಪಿ ಮುಖಂಡರಾದ ತಳೂರು ಕಿಶೋರ್ಕುಮಾರ್, ಅರುಣ್ಕುಮಾರ್, ಉಮೇಶ್ ಸುಬ್ರಮಣಿ ಭಾಗವಹಿಸಿದ್ದರು.</p>.<p>ಸಮರ್ಥರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಿ; ಸುನಿಲ್ ಸುಬ್ರಮಣಿ</p><p>ವಿಧಾನಪರಿಷತ್ತಿನ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ ‘ರಾಜ್ಯದಲ್ಲಿ ದುರ್ಬಲ ಮುಖ್ಯಮಂತ್ರಿ ಇದ್ದಾರೆ. ಇವರನ್ನು ತೆಗೆದು ಸಮರ್ಥರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಕಾಂಗ್ರೆಸ್ ಮಾಡಬೇಕು’ ಎಂದು ಒತ್ತಾಯಿಸಿದರು. ಕೇರಳದಲ್ಲಿ ಆನೆ ತುಳಿದು ಮೃತಪಟ್ಟವರಿಗೆ ₹ 25 ಲಕ್ಷ ಪರಿಹಾರ ನೀಡಲಾಗಿದೆ. ಆದರೆ ಇಲ್ಲಿ ನಮ್ಮ ರಾಜ್ಯದ ಅಭಿಮಾನಿಗಳು ಮೃತಪಟ್ಟರೆ ಅವರಿಗೆ ₹ 10 ಲಕ್ಷ ಮಾತ್ರ ಪರಿಹಾರ ನೀಡುತ್ತಾರೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ.</p>.<p>ಈ ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ‘ಈ ದುರಂತಕ್ಕೆ ಸರ್ಕಾರವೇ ನೇರ ಕಾರಣ. ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯದಲ್ಲಿ ಯಾವುದೇ ಯೋಜನೆಗಳೂ ವ್ಯವಸ್ಥಿತವಾಗಿ ಜಾರಿಯಾಗುತ್ತಿಲ್ಲ. ಮಾತ್ರವಲ್ಲ, ಕಾರ್ಯಕ್ರಮಗಳೂ ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಕರಾವಳಿಯಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಒಂದು ರೀತಿಯಲ್ಲಿ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಈಗ ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ. ನಾವು ಮೃತಪಟ್ಟವರ, ನೊಂದವರ ಪರ ಮಾತನಾಡುತ್ತೇವೆ. ಇದು ತಪ್ಪೇ?. ಇಷ್ಟೊಂದು ಮಂದಿ ಕಾಲ್ತುಳಿತದಲ್ಲಿ ಮೃತಪಟ್ಟರು. ಸರಣಿ ಕೊಲೆಗಳೂ ನಡೆದವು. ಈ ಎಲ್ಲ ಸಾವುಗಳು ಕಂಡ ಸರ್ಕಾರಕ್ಕೆ ಏನು ಅನ್ನಿಸುತ್ತಿಲ್ಲವೇ?’ ಎಂದೂ ಪ್ರಶ್ನಿಸಿದರು.</p>.<p>ಕರಾವಳಿಯಲ್ಲಿ ಈಗ ಕೆಲವರನ್ನು ಸರ್ಕಾರ ಗಡಿಪಾರು ಮಾಡಿದೆ. ಆದರೆ, ಹಿಂದೆ ಅಲ್ಲಿ ಕೊಲೆಗಳಾಗಿತ್ತು. ಆಗ ಏಕೆ ಈ ಕ್ರಮ ಕೈಗೊಳ್ಳಲಿಲ್ಲ? ಇದು ಒಂದು ಕೋಮಿನವರನ್ನು ಓಲೈಸುವ ಕ್ರಮವಾಗಿದೆ. ಎಲ್ಲರ ಜೀವಗಳೂ ಮುಖ್ಯ. ಯಾರ ಕೊಲೆಗಳೂ ಆಗಬಾರದು ಎಂಬುದು ಬಿಜೆಪಿ ಅಭಿಪ್ರಾಯ ಎಂದರು.</p>.<p>ಬಿಜೆಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯ ಮಧ್ಯೆ ನಡೆದ ‘ಕ್ರೆಡಿಟ್ ವಾರ್’ನಿಂದ ಈ ದುರಂತ ಸಂಭವಿಸಿದೆ’ ಎಂದು ಆರೋಪಿಸಿದರು.</p>.<p>ನಟ ಅಲ್ಲೂ ಅರ್ಜುನ್ ಭಾಗವಹಿಸಿದ್ದ ಕಾರ್ಯಕ್ರಮದ ವೇಳೆಯೂ ಕಾಲ್ತುಳಿತ ಉಂಟಾಗಿತ್ತು. ಆಗ ಅಲ್ಲಿನ ಕಾಂಗ್ರೆಸ್ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂಬುದು ಎಲ್ಲರಿಗೂ ತಿಳಿದೇ ಇದೆ. ಈಗ ಈ ಕಾಲ್ತುಳಿತ ಪ್ರಕರಣ ಉಂಟಾಗಿರುವುದಕ್ಕೆ ಪೊಲೀಸರ ವರದಿ ದಿಕ್ಕರಿಸಿ ಕಾರ್ಯಕ್ರಮ ಆಯೋಜಿಸಿದ್ದು ಕಾರಣವಾಗಿದೆ ಎಂದು ದೂರಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರು ಧ್ವನಿಯಲ್ಲಿ ಮಾತನಾಡಿ ಪತ್ರಕರ್ತರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದಾರೆ ಎಂದರು.</p>.<p>ಬಿಜೆಪಿ ಮುಖಂಡರಾದ ತಳೂರು ಕಿಶೋರ್ಕುಮಾರ್, ಅರುಣ್ಕುಮಾರ್, ಉಮೇಶ್ ಸುಬ್ರಮಣಿ ಭಾಗವಹಿಸಿದ್ದರು.</p>.<p>ಸಮರ್ಥರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಿ; ಸುನಿಲ್ ಸುಬ್ರಮಣಿ</p><p>ವಿಧಾನಪರಿಷತ್ತಿನ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ ‘ರಾಜ್ಯದಲ್ಲಿ ದುರ್ಬಲ ಮುಖ್ಯಮಂತ್ರಿ ಇದ್ದಾರೆ. ಇವರನ್ನು ತೆಗೆದು ಸಮರ್ಥರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಕಾಂಗ್ರೆಸ್ ಮಾಡಬೇಕು’ ಎಂದು ಒತ್ತಾಯಿಸಿದರು. ಕೇರಳದಲ್ಲಿ ಆನೆ ತುಳಿದು ಮೃತಪಟ್ಟವರಿಗೆ ₹ 25 ಲಕ್ಷ ಪರಿಹಾರ ನೀಡಲಾಗಿದೆ. ಆದರೆ ಇಲ್ಲಿ ನಮ್ಮ ರಾಜ್ಯದ ಅಭಿಮಾನಿಗಳು ಮೃತಪಟ್ಟರೆ ಅವರಿಗೆ ₹ 10 ಲಕ್ಷ ಮಾತ್ರ ಪರಿಹಾರ ನೀಡುತ್ತಾರೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>