ಮಡಿಕೇರಿ: ಜೀವಂತ ನಕ್ಷತ್ರ ಆಮೆಯೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಯಾಸಿನ್ ಪಾಷಾ ಎಂಬಾತನನ್ನು ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸಿ, ನಕ್ಷತ್ರ ಆಮೆಯನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿ ಸುದರ್ಶನ ವೃತ್ತದ ಬಳಿ ಇರುವ ಬಸ್ ತಂಗುದಾಣದಲ್ಲಿ ನಕ್ಷತ್ರ ಆಮೆಯೊಂದಿಗೆ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಎಸ್.ಪಿ.ಕೆ.ಬಿ.ವಿಶ್ವನಾಥ್, ಸಬ್ಇನ್ಸ್ಪೆಕ್ಟರ್ ಸಿ.ಯು.ಸವಿ, ಹೆಡ್ಕಾನ್ಸ್ಟೆಬಲ್ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಕಾನ್ಸ್ಟೆಬಲ್ಗಳಾದ ಸ್ವಾಮಿ, ಮಂಜುನಾಥ ಕಾರ್ಯಾಚರಣೆ ತಂಡದಲ್ಲಿದ್ದರು.