<p><strong>ವಿರಾಜಪೇಟೆ:</strong> ‘ಸದೃಢವಾಗಿ ಶರೀರವನ್ನು ಕಾಯ್ದುಕೊಳ್ಳಲು ಹಾಗೂ ಮಾನಸಿಕವಾಗಿಯೂ ಸಮರ್ಥವಾಗಿರಿಸುವಲ್ಲಿ ಕ್ರೀಡೆ ಅತ್ಯಂತ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ’ ಎಂದು ಸಮೀಪದ ಅರಮೇರಿಯ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಸಮೀಪದ ಚಾಮೀಯಾಲ ಗ್ರಾಮದಲ್ಲಿ ಕೂವಲೇರ ಕುಟುಂಬ ಆಯೋಜಿಸಿರುವ ಕೊಡವ ಮುಸ್ಲಿಂ ಕ್ರಿಕೆಟ್ ಹಬ್ಬಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಕ್ರೀಡೆಗೆ ಪ್ರಮುಖ ಸ್ಥಾನವಿದ್ದು, ಹಾಕಿ, ಕ್ರಿಕೆಟ್, ಹಗ್ಗಜಗ್ಗಾಟ ಹೀಗೆ ಒಂದಿಲ್ಲೊಂದು ಕ್ರೀಡಾಕೂಟಗಳು ನಿರಂತರವಾಗಿ ಜಿಲ್ಲೆಯಲ್ಲಿ ನಡೆಯುತ್ತಿರುತ್ತದೆ. ಇದು ಸಾಮಾಜಿಕ ಸಂಘಟನೆಯ ಜೊತೆಗೆ ಕುಟುಂಬಗಳನ್ನು ಬೆಸೆಯುವ ಕೆಲಸವನ್ನು ನಿರ್ವಹಿಸುತ್ತದೆ. ಜೊತೆಗೆ ಅನೇಕ ಯುವ ಪ್ರತಿಭೆಗಳಿಗೆ ಅಗತ್ಯವಾದ ವೇದಿಕೆಯನ್ನು ಒದಗಿಸುತ್ತದೆ’ ಎಂದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೂವಲೇರ ಕೊಡವ ಮುಸ್ಲಿಂ ಕ್ರಿಕೆಟ್ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷ ಕೂವಲೇರ ಹನೀಸ್ ಮಾತನಾಡಿ, ‘ಈ ಬಾರಿಯ ಕ್ರೀಡಾಕೂಟದಲ್ಲಿ 64 ತಂಡಗಳು ಭಾಗವಹಿಸುತ್ತಿದೆ. ಏ. 21ರವರೆಗೆ ಟೂರ್ನಿ ನಡೆಯಲಿದೆ. ವಿಜೇತ ತಂಡಕ್ಕೆ ₹ 1 ಒಂದು ಲಕ್ಷ ನಗದು ಬಹುಮಾನ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ₹ 50 ಸಾವಿರ ನಗದು, ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳಿಗೂ ಟ್ರೋಫಿ ಹಾಗೂ ಹಲವು ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು’ ಎಂದರು.</p>.<p>ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೊಳಕೇರಿಯ ವರ್ತಕ ಹ್ಯಾರೀಸ್, ಕೊಡಗು ಮುಸ್ಲಿಂ ಕಪ್ ಆಯೋಜಕ ಕೆ.ಅಬ್ದುಲ್ ರಶೀದ್ ಹಾಗೂ ಹಿರಿಯರಾದ ಕೆ.ಹನೀಫ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ‘ಸದೃಢವಾಗಿ ಶರೀರವನ್ನು ಕಾಯ್ದುಕೊಳ್ಳಲು ಹಾಗೂ ಮಾನಸಿಕವಾಗಿಯೂ ಸಮರ್ಥವಾಗಿರಿಸುವಲ್ಲಿ ಕ್ರೀಡೆ ಅತ್ಯಂತ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ’ ಎಂದು ಸಮೀಪದ ಅರಮೇರಿಯ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಸಮೀಪದ ಚಾಮೀಯಾಲ ಗ್ರಾಮದಲ್ಲಿ ಕೂವಲೇರ ಕುಟುಂಬ ಆಯೋಜಿಸಿರುವ ಕೊಡವ ಮುಸ್ಲಿಂ ಕ್ರಿಕೆಟ್ ಹಬ್ಬಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಕ್ರೀಡೆಗೆ ಪ್ರಮುಖ ಸ್ಥಾನವಿದ್ದು, ಹಾಕಿ, ಕ್ರಿಕೆಟ್, ಹಗ್ಗಜಗ್ಗಾಟ ಹೀಗೆ ಒಂದಿಲ್ಲೊಂದು ಕ್ರೀಡಾಕೂಟಗಳು ನಿರಂತರವಾಗಿ ಜಿಲ್ಲೆಯಲ್ಲಿ ನಡೆಯುತ್ತಿರುತ್ತದೆ. ಇದು ಸಾಮಾಜಿಕ ಸಂಘಟನೆಯ ಜೊತೆಗೆ ಕುಟುಂಬಗಳನ್ನು ಬೆಸೆಯುವ ಕೆಲಸವನ್ನು ನಿರ್ವಹಿಸುತ್ತದೆ. ಜೊತೆಗೆ ಅನೇಕ ಯುವ ಪ್ರತಿಭೆಗಳಿಗೆ ಅಗತ್ಯವಾದ ವೇದಿಕೆಯನ್ನು ಒದಗಿಸುತ್ತದೆ’ ಎಂದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೂವಲೇರ ಕೊಡವ ಮುಸ್ಲಿಂ ಕ್ರಿಕೆಟ್ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷ ಕೂವಲೇರ ಹನೀಸ್ ಮಾತನಾಡಿ, ‘ಈ ಬಾರಿಯ ಕ್ರೀಡಾಕೂಟದಲ್ಲಿ 64 ತಂಡಗಳು ಭಾಗವಹಿಸುತ್ತಿದೆ. ಏ. 21ರವರೆಗೆ ಟೂರ್ನಿ ನಡೆಯಲಿದೆ. ವಿಜೇತ ತಂಡಕ್ಕೆ ₹ 1 ಒಂದು ಲಕ್ಷ ನಗದು ಬಹುಮಾನ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ₹ 50 ಸಾವಿರ ನಗದು, ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳಿಗೂ ಟ್ರೋಫಿ ಹಾಗೂ ಹಲವು ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು’ ಎಂದರು.</p>.<p>ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೊಳಕೇರಿಯ ವರ್ತಕ ಹ್ಯಾರೀಸ್, ಕೊಡಗು ಮುಸ್ಲಿಂ ಕಪ್ ಆಯೋಜಕ ಕೆ.ಅಬ್ದುಲ್ ರಶೀದ್ ಹಾಗೂ ಹಿರಿಯರಾದ ಕೆ.ಹನೀಫ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>