ಸಮೀಪದ ಗುಡ್ಡೆಹೊಸೂರು ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಸರಿಯಲ್ಲ. ಕಾಂಗ್ರೆಸ್ ಎಂಬ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೇ ತಿರುಗುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಅವರ ತಲೆ ತಿರುಗುತ್ತಿದೆ ಎಂದು ಸದಾನಂದಗೌಡ ಲೇವಡಿ ಮಾಡಿದರು.