2007ರಲ್ಲಿ ₹1.25 ಕೋಟಿ ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಿಸಲು ಅಂದಾಜು ಪಟ್ಟಿ ತಯಾರಿಸಲಾಯಿತು. ಅಂದು ಶಾಸಕರಾಗಿದ್ದ ಬಿ.ಎ. ಜೀವಿಜಯ ತಮ್ಮ ಶಾಸಕರ ನಿಧಿಯಿಂದ ₹ 18 ಲಕ್ಷ ಅನುದಾನ ನೀಡಿದ್ದರು. ನಂತರ, ಬೇರೆ ಬೇರೆ ಮೂಲದಿಂದ ಹಣ ಸಂಗ್ರಹಿಸುವುದಕ್ಕೆ ಮುಂದಾದರು. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ವಿವಿಧ ಹಂತಗಳಲ್ಲಿ ₹15 ಲಕ್ಷ, ರಾಜ್ಯಸಭಾ ಸದಸ್ಯರಾಗಿದ್ದ ರೆಹಮಾನ್ ಖಾನ್ ಅವರು ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹4 ಲಕ್ಷ, ಕೇಂದ್ರ ಸಚಿವರಾಗಿದ್ದ ಎಂ.ವಿ. ರಾಜಶೇಖರನ್ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹2.5 ಲಕ್ಷ ಹಾಗೂ ಮೋಟಮ್ಮ ಅವರು ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹ 3 ಲಕ್ಷ ಒದಗಿಸಿದ್ದರು. ಈ ಹಣದಲ್ಲಿ ಕಾಮಗಾರಿ ಪ್ರಾರಂಭವಾಗಿತ್ತು. ನಂತರ, ಜೀವಿಜಯ ಅವರು ಸೋಲು ಅನುಭವಿಸಿದರು. ಯೋಜನೆ ಅಲ್ಲಿಗೆ ಸ್ಥಗಿತಗೊಂಡಿತ್ತು.