ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನ ಕಳೆದಂತೆ ಸಾಕು ನಾಯಿಗಳ ಅಬ್ಬರ ಹೆಚ್ಚಾಗತೊಡಗಿದೆ. ಬೀದಿನಾಯಿಗಳಿಗಿಂತ ಹೆಚ್ಚಾಗಿ ಸಾಕುನಾಯಿಗಳೇ ದಾರಿಹೋಕರ ಮೇಲೆರಗುತ್ತಿವೆ. ಬುಧವಾರವಷ್ಟೇ ಆರೋಗ್ಯ ಇಲಾಖೆಯ ಕಾರ್ಯಕರ್ತೆಯ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿ ತೀವ್ರತರವಾಗಿ ಗಾಯಗೊಳಿಸಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಲ್ಲ ಸಾಕು ನಾಯಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.