<p><strong>ಕುಶಾಲನಗರ</strong>: ಸಮೀಪದ ಕೂಡಿಗೆಯ ಕೊಡಗು ಸೈನಿಕ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕೆಡೆಟ್ ಅತುಲ್ ಕುಮಾರ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಆಯೋಜಿಸುವ ಅತ್ಯಂತ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮ (ಯುವಿಕಾ)ಗೆ ಆಯ್ಕೆಯಾಗಿದ್ದಾರೆ.</p>.<p>ಮೇ 19ರಿಂದ 30ರವರೆಗೆ 12 ದಿನಗಳು ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರ (ಯುಆರ್ಎಸ್ಸಿ)ದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವಿದ್ಯಾರ್ಥಿಯ ಆಯ್ಕೆಯು ಶಾಲೆಯ ಇತಿಹಾಸದಲ್ಲಿಯೇ ಮೊದಲಾಗಿದ್ದು, ವಿದ್ಯಾರ್ಥಿಯ ಪ್ರತಿಭೆ ಹಾಗೂ ಸಾಧನೆಯನ್ನು ಗುರುತಿಸಿ ಇಸ್ರೊ ಆಯ್ಕೆ ಮಾಡಿದ್ದು, ಶಾಲೆಯ ಅಧಿಕಾರಿಗಳಲ್ಲಿ, ಶಿಕ್ಷಕ ಸಮುದಾಯದಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ.</p>.<p>ಪ್ರಾಂಶುಪಾಲ ಕರ್ನಲ್ ಅಮರ್ಜೀತ್ ಸಿಂಗ್ ಮಾತನಾಡಿ, ‘ಅತುಲ್ ಆಯ್ಕೆಯು ಸೈನಿಕ ಶಾಲೆಯು ಹೆಮ್ಮೆಪಡುವ ಕ್ಷಣವಾಗಿದ್ದು, ಅತುಲ್ ಕುಮಾರ್ ಯೂವಿಕಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದರೊಂದಿಗೆ ಶಾಲೆಯ ಗೌರವವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಲಭಿಸಿರುವ ಈ ಸುವರ್ಣಾವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು, ಯುವ ವಿಜ್ಞಾನಿಯಾಗಿ ಹೊರ ಹೊಮ್ಮುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ಈ ಸಾಧನೆಯು ಇತರೆ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿ ಎಂದು ಹಾರೈಸಿದ ಅವರು, ಈ ಐತಿಹಾಸಿಕ ಸಾಧನೆ, ಶಾಲೆಯ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಿ ಉಳಿಯಲಿದೆ’ ಎಂದು ತಿಳಿಸಿದರು.</p>.<p>ಪ್ರಾಂಶುಪಾಲರು, ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಮತ್ತು ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ ಕೆಡೆಟ್ ಅತುಲ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಸಮೀಪದ ಕೂಡಿಗೆಯ ಕೊಡಗು ಸೈನಿಕ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕೆಡೆಟ್ ಅತುಲ್ ಕುಮಾರ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಆಯೋಜಿಸುವ ಅತ್ಯಂತ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮ (ಯುವಿಕಾ)ಗೆ ಆಯ್ಕೆಯಾಗಿದ್ದಾರೆ.</p>.<p>ಮೇ 19ರಿಂದ 30ರವರೆಗೆ 12 ದಿನಗಳು ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರ (ಯುಆರ್ಎಸ್ಸಿ)ದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವಿದ್ಯಾರ್ಥಿಯ ಆಯ್ಕೆಯು ಶಾಲೆಯ ಇತಿಹಾಸದಲ್ಲಿಯೇ ಮೊದಲಾಗಿದ್ದು, ವಿದ್ಯಾರ್ಥಿಯ ಪ್ರತಿಭೆ ಹಾಗೂ ಸಾಧನೆಯನ್ನು ಗುರುತಿಸಿ ಇಸ್ರೊ ಆಯ್ಕೆ ಮಾಡಿದ್ದು, ಶಾಲೆಯ ಅಧಿಕಾರಿಗಳಲ್ಲಿ, ಶಿಕ್ಷಕ ಸಮುದಾಯದಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ.</p>.<p>ಪ್ರಾಂಶುಪಾಲ ಕರ್ನಲ್ ಅಮರ್ಜೀತ್ ಸಿಂಗ್ ಮಾತನಾಡಿ, ‘ಅತುಲ್ ಆಯ್ಕೆಯು ಸೈನಿಕ ಶಾಲೆಯು ಹೆಮ್ಮೆಪಡುವ ಕ್ಷಣವಾಗಿದ್ದು, ಅತುಲ್ ಕುಮಾರ್ ಯೂವಿಕಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದರೊಂದಿಗೆ ಶಾಲೆಯ ಗೌರವವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಲಭಿಸಿರುವ ಈ ಸುವರ್ಣಾವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು, ಯುವ ವಿಜ್ಞಾನಿಯಾಗಿ ಹೊರ ಹೊಮ್ಮುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ಈ ಸಾಧನೆಯು ಇತರೆ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿ ಎಂದು ಹಾರೈಸಿದ ಅವರು, ಈ ಐತಿಹಾಸಿಕ ಸಾಧನೆ, ಶಾಲೆಯ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಿ ಉಳಿಯಲಿದೆ’ ಎಂದು ತಿಳಿಸಿದರು.</p>.<p>ಪ್ರಾಂಶುಪಾಲರು, ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಮತ್ತು ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ ಕೆಡೆಟ್ ಅತುಲ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>