<p><strong>ಕುಶಾಲನಗರ</strong>: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆ ಬಳಿ ಕಾವೇರಿ ನದಿಯಲ್ಲಿ ಸೋಮವಾರ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಮೈಸೂರು ಬಿಳಿಗೆರೆ ಸಮೀಪದ ರಂಗಯ್ಯನ ಕೊಪ್ಪಲು ಗ್ರಾಮದ ಪ್ರಥಮ ಪಿಯು ವಿದ್ಯಾರ್ಥಿ ಕೃತಿಕ್ (16) ಮೃತಪಟ್ಟವರು.</p>.<p>ಘಟನೆ ವಿವರ: ರಂಗಯ್ಯನಕೊಪ್ಪಲು ಗ್ರಾಮದ ಕೃತಿಕ್ ಪಿರಿಯಾಪಟ್ಟಣದ ಸ್ನೇಹಿತನ ಮನೆಗೆ ಬಂದಿದ್ದರು. ನಂತರ ಗೆಳೆಯರೊಂದಿಗೆ ಬೆಟ್ಟದಪುರ ಬೆಟ್ಟ ಹತ್ತಿ ಮಲ್ಲಿಕಾರ್ಜುನ ಸ್ವಾಮಿ ದೇವರ ದರ್ಶನ ಪಡೆದು ಮೈಸೂರು- ಕೊಡಗು ಗಡಿಯಲ್ಲಿ ಹರಿಯುವ ಕಾವೇರಿ ನದಿಗೆ ಬಂದಿದ್ದಾರೆ.</p>.<p>ಕಣಿವೆ ಬಳಿಯ ರಾಮಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ಹರಿಯುತ್ತಿರುವ ಕಾವೇರಿ ನದಿಗೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಕಲ್ಲುಗಳ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಕೃತಿಕ್ ಕಾಲು ಜಾರಿ ಆಳವಾದ ಜಾಗದಲ್ಲಿ ಮುಳುಗಿ ಮೃತಪಟ್ಟಿದ್ದಾನೆ.</p>.<p>ಅಗ್ನಿಶಾಮಕ ದಳ ಹಾಗೂ ದುಬಾರೆ ರ್ಯಾಫ್ಟಿಂಗ್ ಸಿಬ್ಬಂದಿ ನೆರವಿನಿಂದ ಮೃತದೇಹ ಪತ್ತೆ ಹಚ್ಚಲಾಯಿತು.</p>.<p>ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆ ಬಳಿ ಕಾವೇರಿ ನದಿಯಲ್ಲಿ ಸೋಮವಾರ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಮೈಸೂರು ಬಿಳಿಗೆರೆ ಸಮೀಪದ ರಂಗಯ್ಯನ ಕೊಪ್ಪಲು ಗ್ರಾಮದ ಪ್ರಥಮ ಪಿಯು ವಿದ್ಯಾರ್ಥಿ ಕೃತಿಕ್ (16) ಮೃತಪಟ್ಟವರು.</p>.<p>ಘಟನೆ ವಿವರ: ರಂಗಯ್ಯನಕೊಪ್ಪಲು ಗ್ರಾಮದ ಕೃತಿಕ್ ಪಿರಿಯಾಪಟ್ಟಣದ ಸ್ನೇಹಿತನ ಮನೆಗೆ ಬಂದಿದ್ದರು. ನಂತರ ಗೆಳೆಯರೊಂದಿಗೆ ಬೆಟ್ಟದಪುರ ಬೆಟ್ಟ ಹತ್ತಿ ಮಲ್ಲಿಕಾರ್ಜುನ ಸ್ವಾಮಿ ದೇವರ ದರ್ಶನ ಪಡೆದು ಮೈಸೂರು- ಕೊಡಗು ಗಡಿಯಲ್ಲಿ ಹರಿಯುವ ಕಾವೇರಿ ನದಿಗೆ ಬಂದಿದ್ದಾರೆ.</p>.<p>ಕಣಿವೆ ಬಳಿಯ ರಾಮಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ಹರಿಯುತ್ತಿರುವ ಕಾವೇರಿ ನದಿಗೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಕಲ್ಲುಗಳ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಕೃತಿಕ್ ಕಾಲು ಜಾರಿ ಆಳವಾದ ಜಾಗದಲ್ಲಿ ಮುಳುಗಿ ಮೃತಪಟ್ಟಿದ್ದಾನೆ.</p>.<p>ಅಗ್ನಿಶಾಮಕ ದಳ ಹಾಗೂ ದುಬಾರೆ ರ್ಯಾಫ್ಟಿಂಗ್ ಸಿಬ್ಬಂದಿ ನೆರವಿನಿಂದ ಮೃತದೇಹ ಪತ್ತೆ ಹಚ್ಚಲಾಯಿತು.</p>.<p>ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>