<p><strong>ಮಡಿಕೇರಿ/ಕುಶಾಲನಗರ:</strong> ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದ ಸೈನಿಕ ಶಾಲೆಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿ, ದೂರು ನೀಡಿದ್ದಾರೆ.</p>.<p>ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಚಿಂಗಪ್ಪ (14) ಮೃತಪಟ್ಟ ವಿದ್ಯಾರ್ಥಿ. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ನಿವಾಸಿ, ಅದೇ ಶಾಲೆಯ ಹಾಕಿ ತರಬೇತುದಾರ ಪೂವಯ್ಯ ಅವರ ಪುತ್ರ ಚಿಂಗಪ್ಪ.</p>.<p>ಪ್ರಕರಣ ಸಂಬಂಧ ಶಾಲೆಯ ಉಪ ಪ್ರಾಂಶುಪಾಲರಾದ ಸೀಮಾ, ಕನ್ನಡ ಶಿಕ್ಷಕ ಮಂಜಪ್ಪ, ಕಂಪ್ಯೂಟರ್ ಶಿಕ್ಷಕ ಗೋವಿಂದರಾಜು, ಸಿಬ್ಬಂದಿಗಳಾದ ಮ್ಯಾಥ್ಯು, ಸುನಿಲ್ ವಿರುದ್ಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಶನಿವಾರ ಸಂಜೆ ವಿದ್ಯಾರ್ಥಿ ಚಿಂಗಪ್ಪ ಪ್ರಯೋಗಾಲಯದ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾನೆ ಎಂದು ಸಹಪಾಠಿಗಳು ಮಾಹಿತಿ ನೀಡಿದ್ದರು. ತಕ್ಷಣವೇ ಶಾಲಾ ಅಂಬುಲೆನ್ಸ್ ನಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು.</p>.<p>ಕೇಂದ್ರದ ವೈದ್ಯಾಧಿಕಾರಿ ರವಿಚಂದ್ರನ್ ಪರಿಶೀಲಿಸಿ ಆಸ್ಪತ್ರೆಗೆ ತರುವುದಕ್ಕೂ ಮೊದಲೇ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದರು. 'ಎಲ್ಲ ವಿಷಯವನ್ನೂ ಮುಚ್ಚಿಟ್ಟು, ನಿಮ್ಮ ಮಗ ಶಾಲೆಯಲ್ಲಿ ಕಾಣುತ್ತಿಲ್ಲ; ಸಂಬಂಧಿಕರ ಮನೆಗೆ ಹೋಗಿರಬಹುದು. ಹುಡುಕಿಕೊಂಡು ಬನ್ನಿ ಎಂದು ಹೇಳಿ ನನ್ನ ಹೊರಗೆ ಕಳುಹಿಸಿ ಮಗನ ಮೃತದೇಹವನ್ನು ಸಂಜೆ ಆಸ್ಪತ್ರೆಗೆ ಸಾಗಿಸಿದ್ದರು. ಸಾವಿನ ಬಗ್ಗೆ ಅನುಮಾನವಿದ್ದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಪೋಷಕರು ಆಗ್ರಹಿಸಿದ್ದಾರೆ.</p>.<p>ಪ್ರತಿಭಟನೆ: ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಮರಣೋತ್ತರ ಪರೀಕ್ಷೆ ನಡೆಯಿತು. ಆಸ್ಪತ್ರೆ ಎದುರು ಜಮಾವಣೆಗೊಂಡಿದ್ದ ಸಂಬಂಧಿಕರು, ಶಾಲೆಯ ಉಪ ಪ್ರಾಂಶುಪಾಲರು ಸ್ಥಳಕ್ಕೆ ಬರುವಂತೆ ಪಟ್ಟುಹಿಡಿದರು. ಆಗ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. 'ವಿದ್ಯಾರ್ಥಿಯನ್ನು ಕೊಲೆ ಮಾಡಲಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು' ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಸ್ಥಳಕ್ಕೆ ಆಗಮಿಸಿ ಸೂಕ್ತ ತನಿಖೆಯ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ/ಕುಶಾಲನಗರ:</strong> ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದ ಸೈನಿಕ ಶಾಲೆಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿ, ದೂರು ನೀಡಿದ್ದಾರೆ.</p>.<p>ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಚಿಂಗಪ್ಪ (14) ಮೃತಪಟ್ಟ ವಿದ್ಯಾರ್ಥಿ. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ನಿವಾಸಿ, ಅದೇ ಶಾಲೆಯ ಹಾಕಿ ತರಬೇತುದಾರ ಪೂವಯ್ಯ ಅವರ ಪುತ್ರ ಚಿಂಗಪ್ಪ.</p>.<p>ಪ್ರಕರಣ ಸಂಬಂಧ ಶಾಲೆಯ ಉಪ ಪ್ರಾಂಶುಪಾಲರಾದ ಸೀಮಾ, ಕನ್ನಡ ಶಿಕ್ಷಕ ಮಂಜಪ್ಪ, ಕಂಪ್ಯೂಟರ್ ಶಿಕ್ಷಕ ಗೋವಿಂದರಾಜು, ಸಿಬ್ಬಂದಿಗಳಾದ ಮ್ಯಾಥ್ಯು, ಸುನಿಲ್ ವಿರುದ್ಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಶನಿವಾರ ಸಂಜೆ ವಿದ್ಯಾರ್ಥಿ ಚಿಂಗಪ್ಪ ಪ್ರಯೋಗಾಲಯದ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾನೆ ಎಂದು ಸಹಪಾಠಿಗಳು ಮಾಹಿತಿ ನೀಡಿದ್ದರು. ತಕ್ಷಣವೇ ಶಾಲಾ ಅಂಬುಲೆನ್ಸ್ ನಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು.</p>.<p>ಕೇಂದ್ರದ ವೈದ್ಯಾಧಿಕಾರಿ ರವಿಚಂದ್ರನ್ ಪರಿಶೀಲಿಸಿ ಆಸ್ಪತ್ರೆಗೆ ತರುವುದಕ್ಕೂ ಮೊದಲೇ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದರು. 'ಎಲ್ಲ ವಿಷಯವನ್ನೂ ಮುಚ್ಚಿಟ್ಟು, ನಿಮ್ಮ ಮಗ ಶಾಲೆಯಲ್ಲಿ ಕಾಣುತ್ತಿಲ್ಲ; ಸಂಬಂಧಿಕರ ಮನೆಗೆ ಹೋಗಿರಬಹುದು. ಹುಡುಕಿಕೊಂಡು ಬನ್ನಿ ಎಂದು ಹೇಳಿ ನನ್ನ ಹೊರಗೆ ಕಳುಹಿಸಿ ಮಗನ ಮೃತದೇಹವನ್ನು ಸಂಜೆ ಆಸ್ಪತ್ರೆಗೆ ಸಾಗಿಸಿದ್ದರು. ಸಾವಿನ ಬಗ್ಗೆ ಅನುಮಾನವಿದ್ದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಪೋಷಕರು ಆಗ್ರಹಿಸಿದ್ದಾರೆ.</p>.<p>ಪ್ರತಿಭಟನೆ: ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಮರಣೋತ್ತರ ಪರೀಕ್ಷೆ ನಡೆಯಿತು. ಆಸ್ಪತ್ರೆ ಎದುರು ಜಮಾವಣೆಗೊಂಡಿದ್ದ ಸಂಬಂಧಿಕರು, ಶಾಲೆಯ ಉಪ ಪ್ರಾಂಶುಪಾಲರು ಸ್ಥಳಕ್ಕೆ ಬರುವಂತೆ ಪಟ್ಟುಹಿಡಿದರು. ಆಗ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. 'ವಿದ್ಯಾರ್ಥಿಯನ್ನು ಕೊಲೆ ಮಾಡಲಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು' ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಸ್ಥಳಕ್ಕೆ ಆಗಮಿಸಿ ಸೂಕ್ತ ತನಿಖೆಯ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>