ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಚಂಗಪ್ಪ ಎಂಬುವ ವಿದ್ಯಾರ್ಥಿ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ ಗಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದಿಢೀರ್ ಎದುರಾದ ಕಾಡಾನೆ ಆತನನ್ನು ಬೆನ್ನಟ್ಟಿದೆ. ವಿದ್ಯಾರ್ಥಿ ಚಂಗಪ್ಪ ಓಡಿ ಕಾಡಾನೆಯ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಓಡುವ ಸಂದರ್ಭ ಬಿದ್ದು ವಿದ್ಯಾರ್ಥಿಗೆ ಗಾಯಗಳು ಉಂಟಾಗಿವೆ. ಬಳಿಕ ವಿದ್ಯಾರ್ಥಿಗೆ ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಘಟನೆ ಕುರಿತು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.