<p><strong>ಕುಶಾಲನಗರ</strong>: ಪ್ರತಿಭಾ ಕಾರಂಜಿ ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಫಾತಿಮಾ ಕಾನ್ವೆಂಟ್ ವಿದ್ಯಾ ಸಂಸ್ಥೆಯ ಮುಖ್ಯಶಿಕ್ಷಕಿ ಸಿಸ್ಟರ್ ಚೇತನ ಹೇಳಿದರು.</p>.<p> ಕಾನ್ವೆಂಟ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆ, ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಮಕ್ಕಳಲ್ಲಿನ ಸುಪ್ತ ಪ್ರತಿಭೆ, ಜೀವನ ಕೌಶಲ ಹೊಂದಲು ವೇದಿಕೆಯಾಗಿದೆ. ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.</p>.<p> ಕುಶಾಲನಗರ ಸಮೂಹ ಸಂಪನ್ಮೂಲ ವ್ಯಕ್ತಿ ಟಿ.ಇ. ವಿಶ್ವನಾಥ ಮಾತನಾಡಿ,ಪ್ರತಿಭಾ ಕಾರಂಜಿ ದೇಶದ ಸಂಸ್ಕೃತಿ ಪರಂಪರೆ ಅನಾವರಣಗೊಳ್ಳುತ್ತದೆ ಎಂದರು.ಸಿಸ್ಟರ್ ಆಗ್ನೇಶ್ , ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜಾನ್ಸನ್, ಡಿ.ಕೆ.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಎಚ್.ಎಸ್. ಉಮಾದೇವಿ , ಬಿ.ಬಿನ್ ಕುಮಾರ್ , ಮುಖ್ಯ ಶಿಕ್ಷಕರಾದಸಣ್ಣಸ್ವಾಮಿ, ವಸಂತಕುಮಾರ್, ಜಲಜಾಕ್ಷಿ, ಶಾಂತಲಾ,ಸಿಆರ್ಪಿಗಳಾದ ವೈಶಾಲಿ, ರತ್ನಮ್ಮ, ನಿವೃತ್ತ ಚಿತ್ರಕಲಾ ಶಿಕ್ಷಕ ಉ. ರಾ.ನಾಗೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶಶಿಕುಮಾರ್, ಶಿಕ್ಷಕರಾದ ಎಸ್.ಆರ್.ಶಿವಲಿಂಗ, ಜಂಶೀರ್ ಖಾನ್ ಅಹ್ಮದ್, ಶಿಕ್ಷಕರು, ಪೋಷಕರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p> ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಮಕ್ಕಳು ಪ್ರತಿಭಾ ಪ್ರದರ್ಶನ ಮಾಡಿದರು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಪ್ರತಿಭಾ ಕಾರಂಜಿ ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಫಾತಿಮಾ ಕಾನ್ವೆಂಟ್ ವಿದ್ಯಾ ಸಂಸ್ಥೆಯ ಮುಖ್ಯಶಿಕ್ಷಕಿ ಸಿಸ್ಟರ್ ಚೇತನ ಹೇಳಿದರು.</p>.<p> ಕಾನ್ವೆಂಟ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆ, ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಮಕ್ಕಳಲ್ಲಿನ ಸುಪ್ತ ಪ್ರತಿಭೆ, ಜೀವನ ಕೌಶಲ ಹೊಂದಲು ವೇದಿಕೆಯಾಗಿದೆ. ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.</p>.<p> ಕುಶಾಲನಗರ ಸಮೂಹ ಸಂಪನ್ಮೂಲ ವ್ಯಕ್ತಿ ಟಿ.ಇ. ವಿಶ್ವನಾಥ ಮಾತನಾಡಿ,ಪ್ರತಿಭಾ ಕಾರಂಜಿ ದೇಶದ ಸಂಸ್ಕೃತಿ ಪರಂಪರೆ ಅನಾವರಣಗೊಳ್ಳುತ್ತದೆ ಎಂದರು.ಸಿಸ್ಟರ್ ಆಗ್ನೇಶ್ , ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜಾನ್ಸನ್, ಡಿ.ಕೆ.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಎಚ್.ಎಸ್. ಉಮಾದೇವಿ , ಬಿ.ಬಿನ್ ಕುಮಾರ್ , ಮುಖ್ಯ ಶಿಕ್ಷಕರಾದಸಣ್ಣಸ್ವಾಮಿ, ವಸಂತಕುಮಾರ್, ಜಲಜಾಕ್ಷಿ, ಶಾಂತಲಾ,ಸಿಆರ್ಪಿಗಳಾದ ವೈಶಾಲಿ, ರತ್ನಮ್ಮ, ನಿವೃತ್ತ ಚಿತ್ರಕಲಾ ಶಿಕ್ಷಕ ಉ. ರಾ.ನಾಗೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶಶಿಕುಮಾರ್, ಶಿಕ್ಷಕರಾದ ಎಸ್.ಆರ್.ಶಿವಲಿಂಗ, ಜಂಶೀರ್ ಖಾನ್ ಅಹ್ಮದ್, ಶಿಕ್ಷಕರು, ಪೋಷಕರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p> ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಮಕ್ಕಳು ಪ್ರತಿಭಾ ಪ್ರದರ್ಶನ ಮಾಡಿದರು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>