<p><strong>ಮಡಿಕೇರಿ:</strong> ಗೋಣಿಕೊಪ್ಪಲು ಸಮೀಪದ ‘ಕಾಲ್ಸ್’ ಶಾಲೆಯ 11 ಮತ್ತು 12 ತರಗತಿಯ ವಿದ್ಯಾರ್ಥಿಗಳು ಬುಧವಾರ ತಮ್ಮ ವ್ಯಾಪ್ತಿಯ ಹಾತೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.</p>.<p>ಮುಖ್ಯವಾಗಿ ಶಾಲೆಯ ಮುಂದೆ ಸಂಚಾರ ದಟ್ಟಣೆಯ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ವಿಷಯವನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರು.</p>.<p>ಶಾಲೆಯ ಗೇಟಿನ ಮುಂಭಾಗ ರಸ್ತೆಯಲ್ಲಿ ಝೀಬ್ರಾ ಕ್ರಾಸಿಂಗ್ ಇಲ್ಲ, ವೇಗ ಮಿತಿಯನ್ನು ನಿಗದಿಪಡಿಸಿರುವ ಸೂಚನಾ ಫಲಕಗಳಿಲ್ಲ ಎಂದು ಗಮನ ಸೆಳೆದರು.</p>.<p>ಶಾಲೆಯ ಮುಂಭಾಗ ಕಸದ ಡಬ್ಬಿ ಹಾಗೂ ಬೀದಿ ದೀಪಗಳೂ ಇಲ್ಲ. ಇವುಗಳನ್ನೆಲ್ಲ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.</p>.<p>ಇವರ ಅಹವಾಲುಗಳನ್ನು ಆಲಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಡೇರಿಸುವ ಭರವಸೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಜ್ಮಾ ಜಬೀನಾ, ಅಧ್ಯಕ್ಷೆ ಎಸ್.ಯು.ಅಕ್ಕಮ್ಮ ಹಾಗೂ ಉಪಾಧ್ಯಕ್ಷರಾದ ಕೆ.ಎಸ್.ಚಿಣ್ಣಪ್ಪ ಅವರ ಸಹಕಾರದಿಂದ ಈ ಕಾರ್ಯಕ್ರಮ ನಡೆಯಿತು. ಸ್ವಚ್ಛ ಭಾರತ ಮಿಷನ್ ಅಂಗವಾಗಿ ಸ್ವಚ್ಛತಾ ಪಖ್ವಾಡ ಕಾರ್ಯಕ್ರಮದ ಅಂಗವಾಗಿ ಈ ಕಾರ್ಯಚಟುವಟಿಕೆ ನಡೆಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಗೋಣಿಕೊಪ್ಪಲು ಸಮೀಪದ ‘ಕಾಲ್ಸ್’ ಶಾಲೆಯ 11 ಮತ್ತು 12 ತರಗತಿಯ ವಿದ್ಯಾರ್ಥಿಗಳು ಬುಧವಾರ ತಮ್ಮ ವ್ಯಾಪ್ತಿಯ ಹಾತೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.</p>.<p>ಮುಖ್ಯವಾಗಿ ಶಾಲೆಯ ಮುಂದೆ ಸಂಚಾರ ದಟ್ಟಣೆಯ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ವಿಷಯವನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರು.</p>.<p>ಶಾಲೆಯ ಗೇಟಿನ ಮುಂಭಾಗ ರಸ್ತೆಯಲ್ಲಿ ಝೀಬ್ರಾ ಕ್ರಾಸಿಂಗ್ ಇಲ್ಲ, ವೇಗ ಮಿತಿಯನ್ನು ನಿಗದಿಪಡಿಸಿರುವ ಸೂಚನಾ ಫಲಕಗಳಿಲ್ಲ ಎಂದು ಗಮನ ಸೆಳೆದರು.</p>.<p>ಶಾಲೆಯ ಮುಂಭಾಗ ಕಸದ ಡಬ್ಬಿ ಹಾಗೂ ಬೀದಿ ದೀಪಗಳೂ ಇಲ್ಲ. ಇವುಗಳನ್ನೆಲ್ಲ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.</p>.<p>ಇವರ ಅಹವಾಲುಗಳನ್ನು ಆಲಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಡೇರಿಸುವ ಭರವಸೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಜ್ಮಾ ಜಬೀನಾ, ಅಧ್ಯಕ್ಷೆ ಎಸ್.ಯು.ಅಕ್ಕಮ್ಮ ಹಾಗೂ ಉಪಾಧ್ಯಕ್ಷರಾದ ಕೆ.ಎಸ್.ಚಿಣ್ಣಪ್ಪ ಅವರ ಸಹಕಾರದಿಂದ ಈ ಕಾರ್ಯಕ್ರಮ ನಡೆಯಿತು. ಸ್ವಚ್ಛ ಭಾರತ ಮಿಷನ್ ಅಂಗವಾಗಿ ಸ್ವಚ್ಛತಾ ಪಖ್ವಾಡ ಕಾರ್ಯಕ್ರಮದ ಅಂಗವಾಗಿ ಈ ಕಾರ್ಯಚಟುವಟಿಕೆ ನಡೆಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>