ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಹಿಜಾಬ್ ವಿಚಾರಕ್ಕೆ ಪ್ರಾಂಶುಪಾಲರು- ವಿದ್ಯಾರ್ಥಿನಿಯರ ನಡುವೆ ವಾಗ್ವಾದ

Last Updated 18 ಫೆಬ್ರುವರಿ 2022, 6:54 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಜೂನಿಯರ್ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ಹಾಗೂ ಕಾಲೇಜು ಪ್ರಾಂಶುಪಾಲ ವಿಜಯ ಅವರ ನಡುವೆ ಶುಕ್ರವಾರ ವಾಗ್ವಾದ ನಡೆಯಿತು.

ವಿದ್ಯಾರ್ಥಿನಿಯರು ಕೊಠಡಿ ಪ್ರವೇಶಿಸಲು ಮುಂದಾದ ವೇಳೆ ಪ್ರಾಂಶುಪಾಲರು ಅದಕ್ಕೆ ಅವಕಾಶ ನೀಡಲಿಲ್ಲ. ಈ ಸಂದರ್ಭದಲ್ಲಿ ವಾಗ್ವಾದ ನಡೆಯಿತು.

ಹೈಕೋರ್ಟ್ ಆದೇಶದಂತೆ, 'ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ತರಗತಿಗೆ ಬರಲು ಅವಕಾಶ ಇಲ್ಲ' ಎಂದು ಪ್ರಾಂಶುಪಾಲರು ಹೇಳಿದರು. ಆದರೂ ವಿದ್ಯಾರ್ಥಿನಿಯರು ಪಟ್ಟು ಸಡಿಲಿಸಲಿಲ್ಲ.

ಬಳಿಕ ಪ್ರಾಂಶುಪಾಲರು 'ನಾನು ದೂರು ನೀಡುತ್ತೇನೆ; ಇವರನ್ನು ಬಂಧಿಸಿ' ಎಂದು ಸ್ಥಳದಲ್ಲಿದ್ದ ಪೊಲೀಸರಿಗೆ ತಿಳಿಸಿದರು. ಅಲ್ಲಿಂದ ವಿದ್ಯಾರ್ಥಿನಿಯರು ವಾಪಸಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT