ನೆಲಜಿ ಗ್ರಾಮದ ಮೊಣ್ಣಂಡ ಸೀತಮ್ಮ ಮತ್ತು ಅಪ್ಪಯ್ಯ ಅವರ ತೋಟದಲ್ಲಿ ಅಡ್ಡಾಡಿರುವ ಕಾಡಾನೆಗಳು ಬಾಳೆ, ಕಾಫಿ ಅಡಿಕೆ ಗಿಡಗಳನ್ನು ನಾಶಪಡಿಸಿವೆ. ಸುತ್ತಮುತ್ತಲ ಕಾಫಿ ಬೆಳೆಗಾರರ ತೋಟಗಳಿಗೂ ಹಾನಿಯಾಗಿದೆ. 3-4 ಕಾಡಾನೆಗಳ ಹಿಂಡು ಗ್ರಾಮದಲ್ಲಿ ಅಡ್ಡಾಡುತ್ತಿದ್ದು ನಷ್ಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಗ್ರಾಮದಲ್ಲಿ ಅಡ್ಡಾಡುತ್ತಿದ್ದು ಸಮಸ್ಯೆ ಸೃಷ್ಟಿಸುತ್ತಿವೆ. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.