ಮಡಿಕೇರಿ: ಕೊಡಗು ನೆರೆ ಸಂತ್ರಸ್ತರಿಗೆ ಇನ್ಫೊಸಿಸ್ ಫೌಂಡೇಷನ್, 200 ಮನೆ ನಿರ್ಮಿಸಲು ತೀರ್ಮಾನಿಸಿದ್ದು ಶುಕ್ರವಾರ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಪುನರ್ವಸತಿ ಜಾಗ ಪರಿಶೀಲಿಸಿದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹಾಗೂ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರೊಂದಿಗೂ ಚರ್ಚಿಸಿದರು.