ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲದ ನಾಗಣ್ಣ ಅವರ ಪುತ್ರ ಸಚಿನ್ (24) ಹಾಗೂ ಯಮಗುಂಬ ಗ್ರಾಮದ ಜಲೇಂದ್ರ ಅವರ ಪುತ್ರಿ ಸಿಂಧು (19) ಆತ್ಮಹತ್ಯೆ ಮಾಡಿಕೊಂಡವರು.
ಹಾರಂಗಿ ಜಲಾಶಯ ವೀಕ್ಷಣೆಗಾಗಿ ಬಂದಿದ್ದ ಇವರು, ಮಧ್ಯಾಹ್ನದವರೆಗೆ ಉದ್ಯಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಜಲಾಶಯದ ಎಡಭಾಗದ ಕಾಡಿನಿಂದ ತೆರಳಿ ಇಬ್ಬರೂ ಜಲಾಶಯಕ್ಕೆ ಜಿಗಿದಿದ್ದಾರೆ.
‘ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಸಿಂಧುಗೆ ಪಿರಿಯಾಪಟ್ಟಣ ಯುವಕನ ಜೊತೆ ವಿವಾಹ ನಿಶ್ಚಯವಾಗಿತ್ತು. ಭಾನುವಾರ ಮದುವೆ ನಿಗದಿಯಾಗಿತ್ತು. ಇದರಿಂದ ಮನನೊಂದು ಇಬ್ಬರೂ ಆತ್ಮಹತ್ಯೆಗೆ ನಿರ್ಧರಿಸಿರಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೋಷಕರ ಅಕ್ರಂದನ ಮುಗಿಲು ಮುಟ್ಟಿತ್ತು. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.