<p><strong>ಕುಶಾಲನಗರ:</strong> ಪ್ರೇಮಿಗಳ ದಿನವಾದ ಶುಕ್ರವಾರವೇ, ಪ್ರೇಮಿಗಳಿಬ್ಬರು ಹಾರಂಗಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲದ ನಾಗಣ್ಣ ಅವರ ಪುತ್ರ ಸಚಿನ್ (24) ಹಾಗೂ ಯಮಗುಂಬ ಗ್ರಾಮದ ಜಲೇಂದ್ರ ಅವರ ಪುತ್ರಿ ಸಿಂಧು (19) ಆತ್ಮಹತ್ಯೆ ಮಾಡಿಕೊಂಡವರು.</p>.<p>ಹಾರಂಗಿ ಜಲಾಶಯ ವೀಕ್ಷಣೆಗಾಗಿ ಬಂದಿದ್ದ ಇವರು, ಮಧ್ಯಾಹ್ನದವರೆಗೆ ಉದ್ಯಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಜಲಾಶಯದ ಎಡಭಾಗದ ಕಾಡಿನಿಂದ ತೆರಳಿ ಇಬ್ಬರೂ ಜಲಾಶಯಕ್ಕೆ ಜಿಗಿದಿದ್ದಾರೆ.</p>.<p>‘ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಸಿಂಧುಗೆ ಪಿರಿಯಾಪಟ್ಟಣ ಯುವಕನ ಜೊತೆ ವಿವಾಹ ನಿಶ್ಚಯವಾಗಿತ್ತು. ಭಾನುವಾರ ಮದುವೆ ನಿಗದಿಯಾಗಿತ್ತು. ಇದರಿಂದ ಮನನೊಂದು ಇಬ್ಬರೂ ಆತ್ಮಹತ್ಯೆಗೆ ನಿರ್ಧರಿಸಿರಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆತ್ಮಹತ್ಯೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೋಷಕರ ಅಕ್ರಂದನ ಮುಗಿಲು ಮುಟ್ಟಿತ್ತು. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಪ್ರೇಮಿಗಳ ದಿನವಾದ ಶುಕ್ರವಾರವೇ, ಪ್ರೇಮಿಗಳಿಬ್ಬರು ಹಾರಂಗಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊತ್ತೇಗಾಲದ ನಾಗಣ್ಣ ಅವರ ಪುತ್ರ ಸಚಿನ್ (24) ಹಾಗೂ ಯಮಗುಂಬ ಗ್ರಾಮದ ಜಲೇಂದ್ರ ಅವರ ಪುತ್ರಿ ಸಿಂಧು (19) ಆತ್ಮಹತ್ಯೆ ಮಾಡಿಕೊಂಡವರು.</p>.<p>ಹಾರಂಗಿ ಜಲಾಶಯ ವೀಕ್ಷಣೆಗಾಗಿ ಬಂದಿದ್ದ ಇವರು, ಮಧ್ಯಾಹ್ನದವರೆಗೆ ಉದ್ಯಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಜಲಾಶಯದ ಎಡಭಾಗದ ಕಾಡಿನಿಂದ ತೆರಳಿ ಇಬ್ಬರೂ ಜಲಾಶಯಕ್ಕೆ ಜಿಗಿದಿದ್ದಾರೆ.</p>.<p>‘ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಸಿಂಧುಗೆ ಪಿರಿಯಾಪಟ್ಟಣ ಯುವಕನ ಜೊತೆ ವಿವಾಹ ನಿಶ್ಚಯವಾಗಿತ್ತು. ಭಾನುವಾರ ಮದುವೆ ನಿಗದಿಯಾಗಿತ್ತು. ಇದರಿಂದ ಮನನೊಂದು ಇಬ್ಬರೂ ಆತ್ಮಹತ್ಯೆಗೆ ನಿರ್ಧರಿಸಿರಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆತ್ಮಹತ್ಯೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೋಷಕರ ಅಕ್ರಂದನ ಮುಗಿಲು ಮುಟ್ಟಿತ್ತು. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>